<p>ಸಿರುಗುಪ್ಪ: ತಾಲ್ಲೂಕಿನಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದ ವಾಹನಗಳನ್ನು ಆಹಾರ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ವಶಪಡಿಸಿಕೊಂಡ ಘಟನೆ ಭಾನುವಾರ ನಡೆದಿದೆ.</p>.<p>ಖಚಿತ ಮಾಹಿತಿ ಮೇರೆಗೆ ಸಿರುಗುಪ್ಪ ಆಹಾರ ನಿರೀಕ್ಷಕ ವಿಜಯ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ತೆಕ್ಕಲಕೋಟೆಯಿಂದ ಸಿರುಗುಪ್ಪ ಮಾರ್ಗವಾಗಿ 35 ರಿಂದ 40 ಕೆಜಿ ತೂಕದ 50 ಚೀಲಗಳಲ್ಲಿ ₹48,500 ಮೌಲ್ಯದ ಪಡಿತರ ಅಕ್ಕಿ ಹಾಗೂ ಬಂಡ್ರಾಲ್ ಗ್ರಾಮದಿಂದ ಸಿಂಧನೂರು ಕಡೆಗೆ ಗೂಡ್ಸ್ ವಾಹನದಲ್ಲಿ 35 ರಿಂದ 40 ಕೆಜಿ ತೂಕದ 90 ಚೀಲಗಳಲ್ಲಿ ₹87, ₹250 ಸೇರಿದಂತೆ ಒಟ್ಟು ₹1,35,750 ಮೌಲ್ಯದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಲಾಗಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಚಾಲಕರಾದ ಮಹೇಶ್ ಹಾಗೂ ರಜಾಕ್ ಅಲಿ ಇವರ ವಿರುದ್ಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-25-1244071763</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿರುಗುಪ್ಪ: ತಾಲ್ಲೂಕಿನಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದ ವಾಹನಗಳನ್ನು ಆಹಾರ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ವಶಪಡಿಸಿಕೊಂಡ ಘಟನೆ ಭಾನುವಾರ ನಡೆದಿದೆ.</p>.<p>ಖಚಿತ ಮಾಹಿತಿ ಮೇರೆಗೆ ಸಿರುಗುಪ್ಪ ಆಹಾರ ನಿರೀಕ್ಷಕ ವಿಜಯ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ತೆಕ್ಕಲಕೋಟೆಯಿಂದ ಸಿರುಗುಪ್ಪ ಮಾರ್ಗವಾಗಿ 35 ರಿಂದ 40 ಕೆಜಿ ತೂಕದ 50 ಚೀಲಗಳಲ್ಲಿ ₹48,500 ಮೌಲ್ಯದ ಪಡಿತರ ಅಕ್ಕಿ ಹಾಗೂ ಬಂಡ್ರಾಲ್ ಗ್ರಾಮದಿಂದ ಸಿಂಧನೂರು ಕಡೆಗೆ ಗೂಡ್ಸ್ ವಾಹನದಲ್ಲಿ 35 ರಿಂದ 40 ಕೆಜಿ ತೂಕದ 90 ಚೀಲಗಳಲ್ಲಿ ₹87, ₹250 ಸೇರಿದಂತೆ ಒಟ್ಟು ₹1,35,750 ಮೌಲ್ಯದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಲಾಗಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಚಾಲಕರಾದ ಮಹೇಶ್ ಹಾಗೂ ರಜಾಕ್ ಅಲಿ ಇವರ ವಿರುದ್ಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-25-1244071763</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>