<p>ಸಿರುಗುಪ್ಪ: ತಾಲ್ಲೂಕಿನ ನಾಗರಹಾಳು ಗ್ರಾಮದ ಬೃಹನ್ಮಠದಲ್ಲಿ ಏಕೀಕರಣ ಹೋರಾಟಗಾರರಾದ ಶರಣ ದೊಡ್ಡಯ್ಯಶಾಸ್ತ್ರಿಗಳ, ಬಸವಮ್ಮ ಅವ್ವನವರ ಪುಣ್ಯಾರಾಧನೆ ಅಂಗವಾಗಿ ಬುಧವಾರ 6 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.</p>.<p>ಒಳಬಳ್ಳಾರಿ ಸುವರ್ಣಗಿರಿ ವಿರಕ್ತಮಠದ ಪರಮಪೂಜ್ಯ ಸಿದ್ದಲಿಂಗ ಸ್ವಾಮೀಜಿ ಆಶೀರ್ವಚನ ನೀಡಿ, ‘ಸಾಮೂಹಿಕ ವಿವಾಹ ಕಾರ್ಯಕ್ರಮಗಳಿಂದ ಸೌಹಾರ್ದತೆ, ಸಾಮರಸ್ಯ ಹಾಗೂ ಬಾಂಧವ್ಯ ಬೆಳೆಯಲಿದೆ’ ಎಂದರು.</p>.<p>ಬಸವಲಿಂಗ ಸ್ವಾಮೀಜಿ ಮಾತನಾಡಿದರು. ಪುಣ್ಯಾರಾಧನೆ ಅಂಗವಾಗಿ ಹಮ್ಮಿಕೊಂಡಿದ್ದ ಎಡೆಯೂರ ಸಿದ್ಧಲಿಂಗ ಶಿವಯೋಗಿಗಳ ಪುರಾಣ ಪ್ರವಚನ ಮಹಾಮಂಗಲಗೊಂಡಿತು.</p>.<p>ಗಡಿನಾಡ ಕನ್ನಡ ಸಾಹಿತಿ ನಾ.ಮ. ಮರುಳಾರಾಧ್ಯರ ಪುರಾಣ ಪ್ರವಚನಕ್ಕೆ ಎನ್.ಎಂ. ಜಗದೀಶ ಗವಾಯಿಗಳ ಪುರಾಣ ವಾಚನ ಮತ್ತು ಹಾರ್ಮೋನಿಯಂ, ಧಾರವಾಡ ಪ್ರಸನ್ನಕುಮಾರ್ ಹಿರೇಮಠ ವಯೊಲಿನ್ ಮತ್ತು ಬಸವರಾಜ ಹೂಗಾರ್ ತಬಲಾಸಾಥ್ ನೀಡಿದರು.</p>.<p>ಮಠದಲ್ಲಿ ಕರ್ತೃ ಗದ್ದುಗೆಗೆ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ಜರುಗಿದವು. ಕಾರ್ಯಕ್ರಮಕ್ಕೆ ಸಹಕರಿಸಿದ ಭಕ್ತರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ‘ಸಾಗರದಮ್ಮದೇವಿ’ ಕೃತಿ ಬಿಡುಗಡೆ ಮಾಡಲಾಯಿತು.</p>.<p>ವಿವಿಧ ಮಠಗಳ ಶ್ರೀಗಳು, ಹರಗುರು ಚರಮೂರ್ತಿಗಳು, ಶ್ರೀಮಠದ ಬಸವರಾಜಯ್ಯ ತಾತನವರು, ಶ್ರೀಶರಣ ದೊಡ್ಡಯ್ಯತಾತನವರ ಶಿವಾನುಭವ ಟ್ರಸ್ಟ್ ಪದಾಧಿಕಾರಿಗಳು, ಸಿರುಗುಪ್ಪ ತಾಲ್ಲೂಕಿನ ಮುಖಂಡರು, ನಾಗರಹಾಳು ಗ್ರಾಮ ಸೇರಿದಂತೆ ಸುತ್ತಲಿನ ಹಳ್ಳಿಗಳ ಶ್ರೀಮಠದ ಭಕ್ತರು ಭಾಗವಹಿಸಿದ್ದರು.</p>.<p>ಸಂಜೆ ಶರಣ ದೊಡ್ಡಯ್ಯಶಾಸ್ತ್ರಿಗಳ, ಬಸವಮ್ಮ ಅವ್ವನವರ ರಥೋತ್ಸವ ಭಕ್ತರ ಜಯಘೋಷದೊಂದಿಗೆ ಸಂಭ್ರಮದಿಂದ ಜರುಗಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-25-1356136618</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿರುಗುಪ್ಪ: ತಾಲ್ಲೂಕಿನ ನಾಗರಹಾಳು ಗ್ರಾಮದ ಬೃಹನ್ಮಠದಲ್ಲಿ ಏಕೀಕರಣ ಹೋರಾಟಗಾರರಾದ ಶರಣ ದೊಡ್ಡಯ್ಯಶಾಸ್ತ್ರಿಗಳ, ಬಸವಮ್ಮ ಅವ್ವನವರ ಪುಣ್ಯಾರಾಧನೆ ಅಂಗವಾಗಿ ಬುಧವಾರ 6 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.</p>.<p>ಒಳಬಳ್ಳಾರಿ ಸುವರ್ಣಗಿರಿ ವಿರಕ್ತಮಠದ ಪರಮಪೂಜ್ಯ ಸಿದ್ದಲಿಂಗ ಸ್ವಾಮೀಜಿ ಆಶೀರ್ವಚನ ನೀಡಿ, ‘ಸಾಮೂಹಿಕ ವಿವಾಹ ಕಾರ್ಯಕ್ರಮಗಳಿಂದ ಸೌಹಾರ್ದತೆ, ಸಾಮರಸ್ಯ ಹಾಗೂ ಬಾಂಧವ್ಯ ಬೆಳೆಯಲಿದೆ’ ಎಂದರು.</p>.<p>ಬಸವಲಿಂಗ ಸ್ವಾಮೀಜಿ ಮಾತನಾಡಿದರು. ಪುಣ್ಯಾರಾಧನೆ ಅಂಗವಾಗಿ ಹಮ್ಮಿಕೊಂಡಿದ್ದ ಎಡೆಯೂರ ಸಿದ್ಧಲಿಂಗ ಶಿವಯೋಗಿಗಳ ಪುರಾಣ ಪ್ರವಚನ ಮಹಾಮಂಗಲಗೊಂಡಿತು.</p>.<p>ಗಡಿನಾಡ ಕನ್ನಡ ಸಾಹಿತಿ ನಾ.ಮ. ಮರುಳಾರಾಧ್ಯರ ಪುರಾಣ ಪ್ರವಚನಕ್ಕೆ ಎನ್.ಎಂ. ಜಗದೀಶ ಗವಾಯಿಗಳ ಪುರಾಣ ವಾಚನ ಮತ್ತು ಹಾರ್ಮೋನಿಯಂ, ಧಾರವಾಡ ಪ್ರಸನ್ನಕುಮಾರ್ ಹಿರೇಮಠ ವಯೊಲಿನ್ ಮತ್ತು ಬಸವರಾಜ ಹೂಗಾರ್ ತಬಲಾಸಾಥ್ ನೀಡಿದರು.</p>.<p>ಮಠದಲ್ಲಿ ಕರ್ತೃ ಗದ್ದುಗೆಗೆ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ಜರುಗಿದವು. ಕಾರ್ಯಕ್ರಮಕ್ಕೆ ಸಹಕರಿಸಿದ ಭಕ್ತರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ‘ಸಾಗರದಮ್ಮದೇವಿ’ ಕೃತಿ ಬಿಡುಗಡೆ ಮಾಡಲಾಯಿತು.</p>.<p>ವಿವಿಧ ಮಠಗಳ ಶ್ರೀಗಳು, ಹರಗುರು ಚರಮೂರ್ತಿಗಳು, ಶ್ರೀಮಠದ ಬಸವರಾಜಯ್ಯ ತಾತನವರು, ಶ್ರೀಶರಣ ದೊಡ್ಡಯ್ಯತಾತನವರ ಶಿವಾನುಭವ ಟ್ರಸ್ಟ್ ಪದಾಧಿಕಾರಿಗಳು, ಸಿರುಗುಪ್ಪ ತಾಲ್ಲೂಕಿನ ಮುಖಂಡರು, ನಾಗರಹಾಳು ಗ್ರಾಮ ಸೇರಿದಂತೆ ಸುತ್ತಲಿನ ಹಳ್ಳಿಗಳ ಶ್ರೀಮಠದ ಭಕ್ತರು ಭಾಗವಹಿಸಿದ್ದರು.</p>.<p>ಸಂಜೆ ಶರಣ ದೊಡ್ಡಯ್ಯಶಾಸ್ತ್ರಿಗಳ, ಬಸವಮ್ಮ ಅವ್ವನವರ ರಥೋತ್ಸವ ಭಕ್ತರ ಜಯಘೋಷದೊಂದಿಗೆ ಸಂಭ್ರಮದಿಂದ ಜರುಗಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-25-1356136618</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>