<p><strong>ಬಳ್ಳಾರಿ</strong>: ‘ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು, ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯುವ ಮೂಲಕ ಗುರುಗಳು, ಪಾಲಕರಿಗೆ ಕೀರ್ತಿ ತರಬೇಕು' ಎಂದು ಬ್ರಾಹ್ಮಣ ನಿಗಮ ಮಂಡಳಿ ಅಧ್ಯಕ್ಷ ಅಸುಗೋಡು ಜಯಸಿಂಹ ಹೇಳಿದರು.</p>.<p>ನಗರದ ಸಂಗನಕಲ್ಲು ರಸ್ತೆಯ ಶೃಂಗೇರಿ ಶಾರದಾ ಪೀಠದ ಭಾರತೀ ತೀರ್ಥ ಸಭಾಭವನದಲ್ಲಿ ಬಳ್ಳಾರಿ ಬ್ರಾಹ್ಮಣ ಒಕ್ಕೂಟದ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಮಕ್ಕಳು ಮೊಬೈಲ್ ಫೋನ್ನಲ್ಲೇ ಹೆಚ್ಚು ಸಮಯ ಕಳೆಯಬಾರದು. ವಿವಿಧ ಕ್ಷೇತ್ರಗಳ ಸಾಧಕರನ್ನು ಮಾದರಿಯಾಗಿ ತೆಗೆದುಕೊಂಡು ಯಶಸ್ಸು ಗಳಿಸಬೇಕು’ ಎಂದು ಅಖಿಲ ಭಾರತ ಬ್ರಾಹ್ಮಣ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಿ. ಶ್ರೀನಾಥ್ ತಿಳಿಸಿದರು.</p>.<p>ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ರಾವ್, ಅಡ್ವೊಕೇಟ್ ಜನರಲ್ ಮಲ್ಲನರಾವ್ ಮಾತನಾಡಿದರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಿ.ಕೆ.ಬಿ.ಎನ್. ಮೂರ್ತಿ, ಸಹ ಕಾರ್ಯದರ್ಶಿ ನೇಮಕಲ್ ರಾವ್, ಖಜಾಂಚಿ ಅನಿಲ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ‘ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು, ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯುವ ಮೂಲಕ ಗುರುಗಳು, ಪಾಲಕರಿಗೆ ಕೀರ್ತಿ ತರಬೇಕು' ಎಂದು ಬ್ರಾಹ್ಮಣ ನಿಗಮ ಮಂಡಳಿ ಅಧ್ಯಕ್ಷ ಅಸುಗೋಡು ಜಯಸಿಂಹ ಹೇಳಿದರು.</p>.<p>ನಗರದ ಸಂಗನಕಲ್ಲು ರಸ್ತೆಯ ಶೃಂಗೇರಿ ಶಾರದಾ ಪೀಠದ ಭಾರತೀ ತೀರ್ಥ ಸಭಾಭವನದಲ್ಲಿ ಬಳ್ಳಾರಿ ಬ್ರಾಹ್ಮಣ ಒಕ್ಕೂಟದ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಮಕ್ಕಳು ಮೊಬೈಲ್ ಫೋನ್ನಲ್ಲೇ ಹೆಚ್ಚು ಸಮಯ ಕಳೆಯಬಾರದು. ವಿವಿಧ ಕ್ಷೇತ್ರಗಳ ಸಾಧಕರನ್ನು ಮಾದರಿಯಾಗಿ ತೆಗೆದುಕೊಂಡು ಯಶಸ್ಸು ಗಳಿಸಬೇಕು’ ಎಂದು ಅಖಿಲ ಭಾರತ ಬ್ರಾಹ್ಮಣ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಿ. ಶ್ರೀನಾಥ್ ತಿಳಿಸಿದರು.</p>.<p>ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ರಾವ್, ಅಡ್ವೊಕೇಟ್ ಜನರಲ್ ಮಲ್ಲನರಾವ್ ಮಾತನಾಡಿದರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಿ.ಕೆ.ಬಿ.ಎನ್. ಮೂರ್ತಿ, ಸಹ ಕಾರ್ಯದರ್ಶಿ ನೇಮಕಲ್ ರಾವ್, ಖಜಾಂಚಿ ಅನಿಲ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>