<p><strong>ಸಿರುಗುಪ್ಪ</strong>: ಪ್ರತಿಯೊಂದಕ್ಕೂ ಆಧಾರ್ ಕಾರ್ಡ್ ಕಡ್ಡಾಯ ಮಾಡಿರುವ ಸರ್ಕಾರವು ಆಧಾರ್ ನೋಂದಣಿಗಾಗಿ ಸೂಕ್ತ ವ್ಯವಸ್ಥೆ ಮಾಡಿಲ್ಲ. ತಾಲ್ಲೂಕು ಕೇಂದ್ರದಲ್ಲೇ ನಗರದ ಜನತೆ ಇದಕ್ಕಾಗಿ ಪರದಾಡುವುದು ತಪ್ಪುತ್ತಿಲ್ಲ.</p>.<p>ನಗರದ ತಾಲ್ಲೂಕು ಕಚೇರಿ ಆವರಣದಲ್ಲಿರುವ ಆಧಾರ್ ನೋಂದಣಿ ಕೇಂದ್ರದಲ್ಲಿ ವಿದ್ಯುತ್ ಸಮಸ್ಯೆಯಿಂದ ನೋಂದಣಿಗೆ ಬಂದ ಜನರು ದಿನ ಪೂರ್ತಿ ಕಾಯಬೇಕಾದ ಪರಿಸ್ಥಿತಿ ಉಂಟಾಗಿದೆ.</p>.<p>ತಾಲ್ಲೂಕಿನ ತೆಕ್ಕಲಕೋಟೆ ಹಾಗೂ ಸಿರುಗುಪ್ಪ ಹೋಬಳಿ ವ್ಯಾಪ್ತಿಯಲ್ಲಿನ ಆಧಾರ್ ನೊಂದಣಿ ಕೇಂದ್ರಕ್ಕೆ ಸುಮಾರು 50 ಹಳ್ಳಿಗಳ ಜನ ನಿತ್ಯವೂ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಬರುತ್ತಿದ್ದಾರೆ.</p>.<p>ಆದರೆ, ನಗರದಲ್ಲಿ ದಿನಕ್ಕೆ ನಾಲ್ಕಾರು ಬಾರಿಯಾದರೂ ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತದೆ. ಕೆಲವು ಬಾರಿ ದಿನಗಟ್ಟಲೆ ವಿದ್ಯುತ್ ಸಂಪರ್ಕ ಕಡಿತವಾಗುವುದು ಸಾಮಾನ್ಯವಾಗಿದೆ. ಆಧಾರ್ ನೋಂದಣಿ ಕೇಂದ್ರದಲ್ಲಿ ವಿದ್ಯುತ್ ಸಂಪರ್ಕಕ್ಕೆ ಪರ್ಯಾಯ ವ್ಯವಸ್ಥೆ ಇಲ್ಲದೆ ಕೇಂದ್ರದ ಮುಂದೆ ಕಾದು ಕುಳಿತುಕೊಳ್ಳಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ.</p>.<p>ಆಧಾರ್ ನೊಂದಣಿ ಕಚೇರಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಾಗ ತುಂಬಾ ತೊಂದರೆಯಾಗುತ್ತಿದೆ. ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂದು ಮೇಲಾಧಿಕಾರಿಗಳಿಗೆ ತಿಳಿಸಲಾಗಿದೆ. ಅದು ಇಲ್ಲಿಯವರೆಗೆ ಯಾವುದೇ ವ್ಯವಸ್ಥೆ ಮಾಡಿಲ್ಲವೆಂದು ಆಧಾರ್ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ತಿಳಿಸಿದ್ದಾರೆ.</p>.<p>’ಜನರೇಟರ್ ವ್ಯವಸ್ಥೆ ಮಾಡಿಕೊಡಬೇಕೆಂದು ತಹಶೀಲ್ದಾರರಿಗೆ ಅನೇಕಬಾರಿ ಕೇಳಿಕೊಂಡಿದ್ದೇವೆ’ ಎಂದು ನೋಡಲ್ ಅಧಿಕಾರಿ ಬಸವರಾಜ ತಿಳಿಸಿದ್ದಾರೆ.</p>.<p>’ಆಧಾರ್ ಕೇಂದ್ರದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಾಗ ಪರ್ಯಾಯ ವ್ಯವಸ್ಥೆ ಇಲ್ಲದೇ ಕಾಯಬೇಕಾದ ಪರಿಸ್ಥಿತಿದೆ. ತಾಲ್ಲೂಕು ಆಡಳಿತ ಇಲ್ಲಿ ವಿದ್ಯುತ್ ಇಲ್ಲದ ಸಂದರ್ಭದಲ್ಲಿ ಪರ್ಯಾಯ ವ್ಯವಸ್ಥೆ ಮಾಡಬೇಕು’ ಎಂದು ರಾಂಪುರ ಹುಸೇನಪ್ಪ, ಶೇಖರ ನಾಯಕ, ಸೋಮಯ್ಯ ಒತ್ತಾಯಿಸಿದ್ದಾರೆ.</p>.<p>’ನಗರದ ಅಂಚೆ ಕಚೇರಿ, ಬಿಎಸ್ಎನ್ಎಲ್ ಕಚೇರಿಯಲ್ಲಿ ಆಧಾರ್ ನೊಂದಣಿ ಕೇಂದ್ರ ತೆರೆಯಲು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು. ನಮ್ಮ ಕಚೇರಿ ಆವರಣದಲ್ಲಿರುವ ಆಧಾರ್ ಕೇಂದ್ರಕ್ಕೆ ಜನರೇಟರ್ ಅಥವಾ ಇನ್ವರ್ಟರ್ ವ್ಯವಸ್ಥೆ ಮಾಡಲಾಗುವುದು’ ಎಂದು ತಹಶೀಲ್ದಾರ್ ಗೌಸಿಯಾಬೇಗಂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ</strong>: ಪ್ರತಿಯೊಂದಕ್ಕೂ ಆಧಾರ್ ಕಾರ್ಡ್ ಕಡ್ಡಾಯ ಮಾಡಿರುವ ಸರ್ಕಾರವು ಆಧಾರ್ ನೋಂದಣಿಗಾಗಿ ಸೂಕ್ತ ವ್ಯವಸ್ಥೆ ಮಾಡಿಲ್ಲ. ತಾಲ್ಲೂಕು ಕೇಂದ್ರದಲ್ಲೇ ನಗರದ ಜನತೆ ಇದಕ್ಕಾಗಿ ಪರದಾಡುವುದು ತಪ್ಪುತ್ತಿಲ್ಲ.</p>.<p>ನಗರದ ತಾಲ್ಲೂಕು ಕಚೇರಿ ಆವರಣದಲ್ಲಿರುವ ಆಧಾರ್ ನೋಂದಣಿ ಕೇಂದ್ರದಲ್ಲಿ ವಿದ್ಯುತ್ ಸಮಸ್ಯೆಯಿಂದ ನೋಂದಣಿಗೆ ಬಂದ ಜನರು ದಿನ ಪೂರ್ತಿ ಕಾಯಬೇಕಾದ ಪರಿಸ್ಥಿತಿ ಉಂಟಾಗಿದೆ.</p>.<p>ತಾಲ್ಲೂಕಿನ ತೆಕ್ಕಲಕೋಟೆ ಹಾಗೂ ಸಿರುಗುಪ್ಪ ಹೋಬಳಿ ವ್ಯಾಪ್ತಿಯಲ್ಲಿನ ಆಧಾರ್ ನೊಂದಣಿ ಕೇಂದ್ರಕ್ಕೆ ಸುಮಾರು 50 ಹಳ್ಳಿಗಳ ಜನ ನಿತ್ಯವೂ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಬರುತ್ತಿದ್ದಾರೆ.</p>.<p>ಆದರೆ, ನಗರದಲ್ಲಿ ದಿನಕ್ಕೆ ನಾಲ್ಕಾರು ಬಾರಿಯಾದರೂ ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತದೆ. ಕೆಲವು ಬಾರಿ ದಿನಗಟ್ಟಲೆ ವಿದ್ಯುತ್ ಸಂಪರ್ಕ ಕಡಿತವಾಗುವುದು ಸಾಮಾನ್ಯವಾಗಿದೆ. ಆಧಾರ್ ನೋಂದಣಿ ಕೇಂದ್ರದಲ್ಲಿ ವಿದ್ಯುತ್ ಸಂಪರ್ಕಕ್ಕೆ ಪರ್ಯಾಯ ವ್ಯವಸ್ಥೆ ಇಲ್ಲದೆ ಕೇಂದ್ರದ ಮುಂದೆ ಕಾದು ಕುಳಿತುಕೊಳ್ಳಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ.</p>.<p>ಆಧಾರ್ ನೊಂದಣಿ ಕಚೇರಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಾಗ ತುಂಬಾ ತೊಂದರೆಯಾಗುತ್ತಿದೆ. ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂದು ಮೇಲಾಧಿಕಾರಿಗಳಿಗೆ ತಿಳಿಸಲಾಗಿದೆ. ಅದು ಇಲ್ಲಿಯವರೆಗೆ ಯಾವುದೇ ವ್ಯವಸ್ಥೆ ಮಾಡಿಲ್ಲವೆಂದು ಆಧಾರ್ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ತಿಳಿಸಿದ್ದಾರೆ.</p>.<p>’ಜನರೇಟರ್ ವ್ಯವಸ್ಥೆ ಮಾಡಿಕೊಡಬೇಕೆಂದು ತಹಶೀಲ್ದಾರರಿಗೆ ಅನೇಕಬಾರಿ ಕೇಳಿಕೊಂಡಿದ್ದೇವೆ’ ಎಂದು ನೋಡಲ್ ಅಧಿಕಾರಿ ಬಸವರಾಜ ತಿಳಿಸಿದ್ದಾರೆ.</p>.<p>’ಆಧಾರ್ ಕೇಂದ್ರದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಾಗ ಪರ್ಯಾಯ ವ್ಯವಸ್ಥೆ ಇಲ್ಲದೇ ಕಾಯಬೇಕಾದ ಪರಿಸ್ಥಿತಿದೆ. ತಾಲ್ಲೂಕು ಆಡಳಿತ ಇಲ್ಲಿ ವಿದ್ಯುತ್ ಇಲ್ಲದ ಸಂದರ್ಭದಲ್ಲಿ ಪರ್ಯಾಯ ವ್ಯವಸ್ಥೆ ಮಾಡಬೇಕು’ ಎಂದು ರಾಂಪುರ ಹುಸೇನಪ್ಪ, ಶೇಖರ ನಾಯಕ, ಸೋಮಯ್ಯ ಒತ್ತಾಯಿಸಿದ್ದಾರೆ.</p>.<p>’ನಗರದ ಅಂಚೆ ಕಚೇರಿ, ಬಿಎಸ್ಎನ್ಎಲ್ ಕಚೇರಿಯಲ್ಲಿ ಆಧಾರ್ ನೊಂದಣಿ ಕೇಂದ್ರ ತೆರೆಯಲು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು. ನಮ್ಮ ಕಚೇರಿ ಆವರಣದಲ್ಲಿರುವ ಆಧಾರ್ ಕೇಂದ್ರಕ್ಕೆ ಜನರೇಟರ್ ಅಥವಾ ಇನ್ವರ್ಟರ್ ವ್ಯವಸ್ಥೆ ಮಾಡಲಾಗುವುದು’ ಎಂದು ತಹಶೀಲ್ದಾರ್ ಗೌಸಿಯಾಬೇಗಂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>