<p><strong>ಸಿರುಗುಪ್ಪ</strong>: ‘ತಂಬಾಕು ಉತ್ಪನ್ನಗಳ ಸೇವನೆ ತ್ಯಜಿಸಿ, ಆರೋಗ್ಯಕರ ಮತ್ತು ಸ್ವಸ್ಥ ಜೀವನಶೈಲಿ ಅಳವಡಿಸಿಕೊಳ್ಳಬೇಕು’ ಎಂದು ಹಾಸ್ಯ ಕಲಾವಿದ ಜೆ.ನರಸಿಂಹಮೂರ್ತಿ ಹೇಳಿದರು.</p>.<p>ನಗರದ ಯಲ್ಲಮ್ಮ ದೇವಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಭಾನುವಾರ ನಡೆದ ‘ವಿಶ್ವ ತಂಬಾಕು ರಹಿತ ದಿನ’ ಆಚರಣೆಯಲ್ಲಿ ಮಾತನಾಡಿದರು.</p>.<p>‘ತಂಬಾಕು ಸೇವನೆಯಿಂದ ಮಾರಕ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಹಾಗೂ ತಂಬಾಕು ಮುಕ್ತ ಸಮಾಜ ನಿರ್ಮಿಸುವ ಸಂಕಲ್ಪ ಮಾಡೋಣ. ಯುವ ಸಮುದಾಯವು ದುಶ್ಚಟಗಳಿಗೆ ಬಲಿಯಾಗದಂತೆ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ’ ಎಂದು ತಿಳಿಸಿದರು.</p>.<p>ಈ ವೇಳೆ ಸಂಸ್ಥೆಯ ಕೃಷಿ ಮೇಲ್ವಿಚಾರಕ ವೀರೇಶ ಸೋಮನಾಳ, ಶಾಲೆಯ ಅಧ್ಯಕ್ಷ ವೈ.ಡಿ. ವೆಂಕಟೇಶ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಪ್ರೀಯಾ, ಸೇವಾಪ್ರತಿನಿಧಿ ಲಕ್ಷ್ಮಿ, ತಸ್ಲೀಮ್, ಸಿ.ಎಸ್.ಸಿ ಶರೀಪ್ ಸೇವಾದಾರ, ತಬಸುಮ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-25-655985590</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ</strong>: ‘ತಂಬಾಕು ಉತ್ಪನ್ನಗಳ ಸೇವನೆ ತ್ಯಜಿಸಿ, ಆರೋಗ್ಯಕರ ಮತ್ತು ಸ್ವಸ್ಥ ಜೀವನಶೈಲಿ ಅಳವಡಿಸಿಕೊಳ್ಳಬೇಕು’ ಎಂದು ಹಾಸ್ಯ ಕಲಾವಿದ ಜೆ.ನರಸಿಂಹಮೂರ್ತಿ ಹೇಳಿದರು.</p>.<p>ನಗರದ ಯಲ್ಲಮ್ಮ ದೇವಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಭಾನುವಾರ ನಡೆದ ‘ವಿಶ್ವ ತಂಬಾಕು ರಹಿತ ದಿನ’ ಆಚರಣೆಯಲ್ಲಿ ಮಾತನಾಡಿದರು.</p>.<p>‘ತಂಬಾಕು ಸೇವನೆಯಿಂದ ಮಾರಕ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಹಾಗೂ ತಂಬಾಕು ಮುಕ್ತ ಸಮಾಜ ನಿರ್ಮಿಸುವ ಸಂಕಲ್ಪ ಮಾಡೋಣ. ಯುವ ಸಮುದಾಯವು ದುಶ್ಚಟಗಳಿಗೆ ಬಲಿಯಾಗದಂತೆ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ’ ಎಂದು ತಿಳಿಸಿದರು.</p>.<p>ಈ ವೇಳೆ ಸಂಸ್ಥೆಯ ಕೃಷಿ ಮೇಲ್ವಿಚಾರಕ ವೀರೇಶ ಸೋಮನಾಳ, ಶಾಲೆಯ ಅಧ್ಯಕ್ಷ ವೈ.ಡಿ. ವೆಂಕಟೇಶ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಪ್ರೀಯಾ, ಸೇವಾಪ್ರತಿನಿಧಿ ಲಕ್ಷ್ಮಿ, ತಸ್ಲೀಮ್, ಸಿ.ಎಸ್.ಸಿ ಶರೀಪ್ ಸೇವಾದಾರ, ತಬಸುಮ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-25-655985590</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>