ಈ ಬಾರಿ ಬಿರು ಬಿಸಿಲಿನಿಂದ ಅಣೆಕಟ್ಟೆಗಳಲ್ಲಿ, ಕೆರೆ ಕಟ್ಟೆಗಳಲ್ಲಿ ನೀರು ಇಲ್ಲ. ತಾಪಕ್ಕೆ ಪ್ರಾಣಿ, ಪಕ್ಷಿಗಳು ಪರಿತಪಿಸುತ್ತಿವೆ. ಆಹಾರ ಸಿಗದೆ ಪರದಾಡುತ್ತಿವೆ. ಅವುಗಳ ರಕ್ಷಣೆಗೆ ಎಲ್ಲರೂ ಮಾನವೀಯ ದೃಷ್ಟಿಯಿಂದ ಆದ್ಯತೆ ನೀಡಬೇಕು. ಇದರಿಂದ ಅವುಗಳ ಸಂಕುಲ ಉಳಿಯುವುದು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕಾಗಿದೆ ಎಂದು ಹೇಳಿದರು.