ಎಸ್ಐಟಿಯ ಇನ್ಸ್ಪೆಕ್ಟರ್ಗಳಾದ ರಾಘವೇಂದ್ರ, ಲಕ್ಷ್ಮಿನಾರಾಯಣ ನೇತೃತ್ವದಲ್ಲಿ ಹತ್ತಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಒಳಗೊಂಡ ತಂಡವು ಈ ದಾಳಿ ನಡೆಸಿದೆ. ರಾಣಿ ಸಂಯುಕ್ತಾ ಅವರಿಗೆ ಸೇರಿದ ನಗರ ಹೊರವಲಯದ ಜೋಳದರಾಶಿ ಗುಡ್ಡದ ಬಳಿಯಿರುವ ಹೊಸ ಮನೆ, ಕಾಲೇಜು ರಸ್ತೆಯಲ್ಲಿನ ಹಳೆ ನಿವಾಸ ಹಾಗೂ ಎಂ.ಪಿ. ಪ್ರಕಾಶ್ ನಗರದಲ್ಲಿನ ಕಚೇರಿ ಮೇಲೆ ದಾಳಿ ನಡೆಸಿದ್ದು, ಶೋಧ ಕಾರ್ಯ ಮುಂದುವರೆದಿದೆ.