<p><strong>ಕಂಪ್ಲಿ</strong>: ತಾಲ್ಲೂಕಿನ ದೇವಸಮುದ್ರ ಕ್ರಾಸ್ ಬಳಿಯ ಕಣವಿ ತಿಮ್ಮಲಾಪುರ ಗ್ರಾಮ ವ್ಯಾಪ್ತಿಯ ಸರ್ವೇ ನಂಬರ್ 254ರ 5 ಎಕರೆ ಭೂಮಿಯನ್ನು ಬಸ್ ಡಿಪೊ ನಿರ್ಮಿಸುವ ಸಲುವಾಗಿ ಶಾಸಕ ಜೆ.ಎನ್. ಗಣೇಶ್ ಶನಿವಾರ ಪರಿಶೀಲಿಸಿದರು.</p>.<p>ತಾಲ್ಲೂಕು ಕೇಂದ್ರವಾದ ಪಟ್ಟಣಕ್ಕೆ ಬಸ್ ಡಿಪೊ ತುಂಬಾ ಅಗತ್ಯವಿದೆ. ಕೆ.ಕೆ.ಆರ್.ಡಿ.ಬಿ ಇಲ್ಲವೆ ಜಿಲ್ಲಾ ಖನಿಜ ನಿಧಿಯಡಿ ಅನುದಾನ ಪಡೆಯಲು ಪ್ರಯತ್ನಿಸುವೆ. ಈ ನಿಟ್ಟಿನಲ್ಲಿ ಕೂಡಲೇ ಅಂದಾಜು ಪಟ್ಟಿಯನ್ನು ಸಿದ್ಧಪಡಿಸಿಕೊಡುವಂತೆ ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಶಾಸಕ ಸೂಚಿಸಿದರು.</p>.<p>ಕುರುಗೋಡು ಡಿಪೊ ವ್ಯವಸ್ಥಾಪಕ ಚಂದ್ರಶೇಖರ್ ಮಾತನಾಡಿ, ಬಸ್ ಡಿಪೊ ನಿರ್ಮಾಣಕ್ಕೆ ಅಂದಾಜು ₹ 8 ಕೋಟಿ ಅಗತ್ಯವಿದೆ. ಇದರಲ್ಲಿ ಶೆಡ್, ಮ್ಯಾಕಾನಿಕಲ್ ವಿಭಾಗ, ಕಚೇರಿ ಕಟ್ಟಡ, ವಾಷಿಂಗ್, ಪೆಟ್ರೋಲ್ ಬಂಕ್ ಸೇರಿ ಅಗತ್ಯ ಕಟ್ಟಡ ನಿರ್ಮಿಸಬೇಕಾಗುತ್ತದೆ ಎಂದು ಶಾಸಕರಿಗೆ ಪ್ರಾಥಮಿಕ ಮಾಹಿತಿ ನೀಡಿದರು.</p>.<p>ತಹಶೀಲ್ದಾರ್ ಎಸ್. ಶಿವರಾಜ, ಕಂದಾಯ ನಿರೀಕ್ಷಕ ವೈ.ಎಂ. ಜಗದೀಶ, ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ. ಷಣ್ಮುಖಪ್ಪ, ಮೆಟ್ರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನೇಣ್ಕಿ ಗಿರೀಶ್, ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ</strong>: ತಾಲ್ಲೂಕಿನ ದೇವಸಮುದ್ರ ಕ್ರಾಸ್ ಬಳಿಯ ಕಣವಿ ತಿಮ್ಮಲಾಪುರ ಗ್ರಾಮ ವ್ಯಾಪ್ತಿಯ ಸರ್ವೇ ನಂಬರ್ 254ರ 5 ಎಕರೆ ಭೂಮಿಯನ್ನು ಬಸ್ ಡಿಪೊ ನಿರ್ಮಿಸುವ ಸಲುವಾಗಿ ಶಾಸಕ ಜೆ.ಎನ್. ಗಣೇಶ್ ಶನಿವಾರ ಪರಿಶೀಲಿಸಿದರು.</p>.<p>ತಾಲ್ಲೂಕು ಕೇಂದ್ರವಾದ ಪಟ್ಟಣಕ್ಕೆ ಬಸ್ ಡಿಪೊ ತುಂಬಾ ಅಗತ್ಯವಿದೆ. ಕೆ.ಕೆ.ಆರ್.ಡಿ.ಬಿ ಇಲ್ಲವೆ ಜಿಲ್ಲಾ ಖನಿಜ ನಿಧಿಯಡಿ ಅನುದಾನ ಪಡೆಯಲು ಪ್ರಯತ್ನಿಸುವೆ. ಈ ನಿಟ್ಟಿನಲ್ಲಿ ಕೂಡಲೇ ಅಂದಾಜು ಪಟ್ಟಿಯನ್ನು ಸಿದ್ಧಪಡಿಸಿಕೊಡುವಂತೆ ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಶಾಸಕ ಸೂಚಿಸಿದರು.</p>.<p>ಕುರುಗೋಡು ಡಿಪೊ ವ್ಯವಸ್ಥಾಪಕ ಚಂದ್ರಶೇಖರ್ ಮಾತನಾಡಿ, ಬಸ್ ಡಿಪೊ ನಿರ್ಮಾಣಕ್ಕೆ ಅಂದಾಜು ₹ 8 ಕೋಟಿ ಅಗತ್ಯವಿದೆ. ಇದರಲ್ಲಿ ಶೆಡ್, ಮ್ಯಾಕಾನಿಕಲ್ ವಿಭಾಗ, ಕಚೇರಿ ಕಟ್ಟಡ, ವಾಷಿಂಗ್, ಪೆಟ್ರೋಲ್ ಬಂಕ್ ಸೇರಿ ಅಗತ್ಯ ಕಟ್ಟಡ ನಿರ್ಮಿಸಬೇಕಾಗುತ್ತದೆ ಎಂದು ಶಾಸಕರಿಗೆ ಪ್ರಾಥಮಿಕ ಮಾಹಿತಿ ನೀಡಿದರು.</p>.<p>ತಹಶೀಲ್ದಾರ್ ಎಸ್. ಶಿವರಾಜ, ಕಂದಾಯ ನಿರೀಕ್ಷಕ ವೈ.ಎಂ. ಜಗದೀಶ, ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ. ಷಣ್ಮುಖಪ್ಪ, ಮೆಟ್ರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನೇಣ್ಕಿ ಗಿರೀಶ್, ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>