ಹೊಸಪೇಟೆ:ಕಂಕಣಸೂರ್ಯಗ್ರಹಣದ ಹಿನ್ನೆಲೆಯಲ್ಲಿ ನಗರದ ಜನತೆಯಲ್ಲಿ ಭಯ ಮನೆ ಮಾಡಿದ್ದು, ಬಹುತೇಕರು ಮನೆ ಬಿಟ್ಟು ಹೊರಬಂದಿಲ್ಲ. ಇನ್ನೊಂದೆಡೆ ಭಾರತ ಜ್ಞಾನ ವಿಜ್ಞಾನ ಸಮಿತಿ ನಗರದ ರೋಟರಿ ವೃತ್ತದಲ್ಲಿ ಹಮ್ಮಿಕೊಂಡಿರುವ ಸೂರ್ಯಗ್ರಹಣ ವೀಕ್ಷಣೆ ಕಾರ್ಯಕ್ರಮದಲ್ಲಿ ಜನ, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ.