<p><strong>ಹೊಸಪೇಟೆ</strong>: ಇಲ್ಲಿನ ‘ಸಾಧ್ಯ’ ಬುದ್ಧಿಮಾಂದ್ಯವಸತಿಯುತ ಶಾಲೆ ಮಕ್ಕಳು ಕ್ರೀಡೆಯಲ್ಲಿ ತೋರಿದ ಉತ್ತಮ ಸಾಧನೆಯನ್ನು ಪರಿಗಣಿಸಿ ಭಾರತೀಯ ಕ್ರೀಡಾ ಪ್ರಾಧಿಕಾರವು ನಗದು ಬಹುಮಾನ ನೀಡಿದೆ.</p>.<p>ಪವರ್ ಲಿಫ್ಟಿಂಗ್ನಲ್ಲಿ ತಲಾ ಎರಡು ಬೆಳ್ಳಿ, ಕಂಚಿನ ಪದಕ ಗೆದ್ದ ಎಚ್.ವಿ. ವೀಣಾ ಅವರಿಗೆ ₹8 ಲಕ್ಷ ನಗದು, ನಾಲ್ಕು ಕಂಚಿನ ಪದಕ ಜಯಿಸಿದ ಸುಶಾಂತೋ ಬೋಸ್ ಅವರಿಗೆ ₹4 ಲಕ್ಷ, ಸೈಕ್ಲಿಂಗ್ನಲ್ಲಿ ಬೆಳ್ಳಿ ಪದಕ ಗೆದ್ದು ಸಾಧನೆ ತೋರಿದ ಓಂಕಾರ ಮಲ್ಲಪ್ಪ ರಾಜಗೋಲ್ಕರ್ ಅವರಿಗೆ ₹3 ಲಕ್ಷ ನಗದು ಬಹುಮಾನ ನೀಡಿದೆ.</p>.<p>ಈ ಮೂವರು ವಿದ್ಯಾರ್ಥಿಗಳು ಮಾರ್ಚ್ನಲ್ಲಿ ಅಬುಧಾಬಿಯಲ್ಲಿ ನಡೆದ ವಿಶೇಷ ಮಕ್ಕಳ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆ ತೋರಿದ್ದರು.</p>.<p>‘ಶಾಲೆಯ ವಿದ್ಯಾರ್ಥಿಗಳ ಸಾಧನೆ ಗುರುತಿಸಿ, ಕ್ರೀಡಾ ಪ್ರಾಧಿಕಾರವು ನಗದು ಬಹುಮಾನ ನೀಡಿರುವುದು ಸಂತಸ ತಂದಿದೆ. ಇದರಿಂದ ಅವರ ಆತ್ಮಸ್ಥೈರ್ಯ ಹೆಚ್ಚಾಗಲಿದೆ’ ಎಂದು ಶಾಲೆಯ ಮುಖ್ಯಸ್ಥೆ ಕೆ.ಟಿ. ಆರತಿ ತಿಳಿಸಿದರು.</p>.<p>‘ವಿದ್ಯಾರ್ಥಿಗಳಿಗೆ ಬಂದ ನಗದು ಹಣವನ್ನು ಅಂಚೆ ಕಚೇರಿಯ ಎಂ.ಐ.ಎಸ್. ಯೋಜನೆಯಡಿಯಲ್ಲಿ ಹೂಡಿಕೆ ಮಾಡಿ ಅವರಿಗೆ ಬಡ್ಡಿ ಬರುವಂತೆ ಕ್ರಮ ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳು ತರಬೇತುದಾರ ದಯಾನಂದ ಕಿಚಿಡಿ ಅವರ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong>: ಇಲ್ಲಿನ ‘ಸಾಧ್ಯ’ ಬುದ್ಧಿಮಾಂದ್ಯವಸತಿಯುತ ಶಾಲೆ ಮಕ್ಕಳು ಕ್ರೀಡೆಯಲ್ಲಿ ತೋರಿದ ಉತ್ತಮ ಸಾಧನೆಯನ್ನು ಪರಿಗಣಿಸಿ ಭಾರತೀಯ ಕ್ರೀಡಾ ಪ್ರಾಧಿಕಾರವು ನಗದು ಬಹುಮಾನ ನೀಡಿದೆ.</p>.<p>ಪವರ್ ಲಿಫ್ಟಿಂಗ್ನಲ್ಲಿ ತಲಾ ಎರಡು ಬೆಳ್ಳಿ, ಕಂಚಿನ ಪದಕ ಗೆದ್ದ ಎಚ್.ವಿ. ವೀಣಾ ಅವರಿಗೆ ₹8 ಲಕ್ಷ ನಗದು, ನಾಲ್ಕು ಕಂಚಿನ ಪದಕ ಜಯಿಸಿದ ಸುಶಾಂತೋ ಬೋಸ್ ಅವರಿಗೆ ₹4 ಲಕ್ಷ, ಸೈಕ್ಲಿಂಗ್ನಲ್ಲಿ ಬೆಳ್ಳಿ ಪದಕ ಗೆದ್ದು ಸಾಧನೆ ತೋರಿದ ಓಂಕಾರ ಮಲ್ಲಪ್ಪ ರಾಜಗೋಲ್ಕರ್ ಅವರಿಗೆ ₹3 ಲಕ್ಷ ನಗದು ಬಹುಮಾನ ನೀಡಿದೆ.</p>.<p>ಈ ಮೂವರು ವಿದ್ಯಾರ್ಥಿಗಳು ಮಾರ್ಚ್ನಲ್ಲಿ ಅಬುಧಾಬಿಯಲ್ಲಿ ನಡೆದ ವಿಶೇಷ ಮಕ್ಕಳ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆ ತೋರಿದ್ದರು.</p>.<p>‘ಶಾಲೆಯ ವಿದ್ಯಾರ್ಥಿಗಳ ಸಾಧನೆ ಗುರುತಿಸಿ, ಕ್ರೀಡಾ ಪ್ರಾಧಿಕಾರವು ನಗದು ಬಹುಮಾನ ನೀಡಿರುವುದು ಸಂತಸ ತಂದಿದೆ. ಇದರಿಂದ ಅವರ ಆತ್ಮಸ್ಥೈರ್ಯ ಹೆಚ್ಚಾಗಲಿದೆ’ ಎಂದು ಶಾಲೆಯ ಮುಖ್ಯಸ್ಥೆ ಕೆ.ಟಿ. ಆರತಿ ತಿಳಿಸಿದರು.</p>.<p>‘ವಿದ್ಯಾರ್ಥಿಗಳಿಗೆ ಬಂದ ನಗದು ಹಣವನ್ನು ಅಂಚೆ ಕಚೇರಿಯ ಎಂ.ಐ.ಎಸ್. ಯೋಜನೆಯಡಿಯಲ್ಲಿ ಹೂಡಿಕೆ ಮಾಡಿ ಅವರಿಗೆ ಬಡ್ಡಿ ಬರುವಂತೆ ಕ್ರಮ ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳು ತರಬೇತುದಾರ ದಯಾನಂದ ಕಿಚಿಡಿ ಅವರ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>