2010ರ ಮಾರ್ಚ್ನಿಂದ ಹಾಸ್ಟೆಲ್ಗಳನ್ನು ಮುಚ್ಚಲಾಗಿದೆ. ಅಂದಿನಿಂದ ಇದುವರೆಗೆ ನೌಕರರ ವೇತನ ಪಾವತಿಸಿಲ್ಲ. ಕೂಡಲೇ ಅವರ ವೇತನ ಪಾವತಿಗೆ ಸರ್ಕಾರ ಮುಂದಾಗಬೇಕು. ಐದು ವರ್ಷ ಸೇವೆ ಸಲ್ಲಿಸಿದ ಹೊರಗುತ್ತಿಗೆ ನೌಕರರನ್ನು ನೌಕರರ ಕ್ಷೇಮಾಭಿವೃದ್ಧಿ ಯೋಜನೆಯಲ್ಲಿ ನೇಮಕ ಮಾಡಿಕೊಳ್ಳಬೇಕು. 2019ರಲ್ಲಿ ನೇರ ನೇಮಕಾತಿಯಲ್ಲಿ ಕೆಲಸ ಕಳೆದುಕೊಂಡ ನೌಕರರಿಗೆ ಹೊಸದಾಗಿ ಆರಂಭಿಸುವ ಹಾಸ್ಟೆಲ್ಗಳಲ್ಲಿ ಮರು ನೇಮಕ ಮಾಡಿಕೊಳ್ಳಬೇಕು. ಎಲ್ಲ ಹಾಸ್ಟೆಲ್ಗಳಲ್ಲಿ ಹಗಲು–ರಾತ್ರಿ ಕಾವಲುಗಾರರನ್ನು ನೇಮಿಸಿ, ವಿದ್ಯಾರ್ಥಿಗಳಿಗೆ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಮರಡಿ ಜಂಬಯ್ಯ ನಾಯಕ, ಜಿಲ್ಲಾ ಅಧ್ಯಕ್ಷ ಇ.ಆರ್. ಯಲ್ಲಪ್ಪ, ಜಿಲ್ಲಾ ಉಪಾಧ್ಯಕ್ಷ ಎಸ್. ಸತ್ಯಮೂರ್ತಿ, ಜಿಲ್ಲಾ ಸಹಕಾರ್ಯದರ್ಶಿ ಬಿ. ರಮೇಶ್ ಕುಮಾರ್, ಭಾಸ್ಕರ್ ರೆಡ್ಡಿ, ಎನ್. ಯಲ್ಲಾಲಿಂಗ ಇದ್ದರು.