ಮೈಲಾರಲಿಂಗೇಶ್ವರ ಸ್ವಾಮಿಗೆ ಬೆಳಿಗ್ಗೆ ಅಭಿಷೇಕ, ವಿಶೇಷ ಪೂಜೆ ನೆರವೇರಿಸಿ, ವಿವಿಧ ಹೂಗಳಿಂದ ಸ್ವಾಮಿಯ ಉತ್ಸವ ಮೂರ್ತಿಯನ್ನು ಅಲಂಕರಿಸಲಾಗಿತ್ತು. ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ನೇತೃತ್ವದಲ್ಲಿ ಹುಣ್ಣಿಮೆ ಆಚರಣೆಗಳು ಜರುಗಿದವು. ಅರ್ಚಕ ಪ್ರಮೋದ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು. ನಾಡಿನ ನಾನಾ ಭಾಗಗಳಿಂದ ಆಗಮಿಸಿದ್ದ ಭಕ್ತರು ಸ್ವಾಮಿಯ ದರ್ಶನ ಪಡೆದರು. ದೇವಸ್ಥಾನ ಆವರಣದಲ್ಲಿ ಭಕ್ತರು ದೋಣಿ ತುಂಬಿಸುವ ಸೇವೆ, ಕುದುರೆಕಾರ ಸೇವೆ, ದೀವಟಿಗೆ ಸೇವೆ ಸಲ್ಲಿಸಿದರು.