‘ದೆಹಲಿಗೆ ಭೇಟಿ ನೀಡಿದ್ದ ವೇಳೆ ಅಮಿತ್ ಶಾ ಅವರು ಜನಾರ್ದನ ರೆಡ್ಡಿ ಬಗ್ಗೆ ಚರ್ಚಿಸಿದಾಗ, ರೆಡ್ಡಿ ಅವರು ಬಳ್ಳಾರಿ ಭಾಗದಲ್ಲಿ ಪ್ರಭಾವಿ ನಾಯಕ. ಅವರು ಮರುಸೇರ್ಪಡೆಯಾದರೆ, ಬಿಜೆಪಿಗೆ ಒಳ್ಳೆಯದಾಗುವುದು ಎಂಬ ಅನಿಸಿಕೆ ವ್ಯಕ್ತಪಡಿಸಿದ್ದೆ. ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜಯೇಂದ್ರ ಅವರ ಗಮನಕ್ಕೂ ತಂದಿರುವೆ’ ಎಂದು ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.