<p><strong>ಸಂಡೂರು</strong>: 'ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆಯು ಬಸ್ಗಳನ್ನು ಸಕಾಲಕ್ಕೆ ಸಮರ್ಪಕವಾಗಿ ಒದಗಿಸಬೇಕು' ಎಂದು ಸಂಡೂರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ನೂರುದ್ದೀನ್ ಎಸ್. ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿಯ ಎಂ. ವೈ. ಘೋರ್ಪಡೆ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಸಂಡೂರು ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳ ಸಾವಿರಾರು ವಿದ್ಯಾರ್ಥಿಗಳು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆಯುತ್ತಿದ್ದು ಮಕ್ಕಳ ಸಂಚಾರದ ಅನುಕೂಲಕ್ಕಾಗಿ ಸಾರಿಗೆ ಇಲಾಖೆ ಬಸ್ ಗಳನ್ನು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು. </p>.<p>ಯುವನಿಧಿ ನೋಂದಣಿ 2024-25 ನೇ ಸಾಲಿನಲ್ಲಿ ಒಟ್ಟು 832 ಅಭ್ಯರ್ಥಿಗಳು ನೋಂದಾಣಿಯಾಗಿದ್ದು ಪ್ರಸ್ತುತ ಸಾಲಿನ 2025-26 ರಲ್ಲಿ ಒಟ್ಟು 624 ಅಭ್ಯರ್ಥಿಗಳು ಮಾತ್ರ ನೊಂದಣಿಯಾಗಿದ್ದು ತೀರಾ ಕಳಪೆಯ ಪ್ರಗತಿ ಕಂಡುಬರುತ್ತಿದ್ದು ಅಧಿಕಾರಿಗಳು ಯುವ ನಿಧಿಯ ಯೋಜನೆ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಸಭೆಯಲ್ಲಿದ್ದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಮುಂದಿನ ಜೂನ್ ತಿಂಗಳಲ್ಲಿ ಎಲ್ಲ ಕಾಲೇಜುಗಳಿಗೆ ತೆರಳಿ ಶೇ100ರಷ್ಟು ನೋಂದಣಿ ಮಾಡಬೇಕು ಇಲ್ಲದಿದ್ರೆ ಉದ್ಯೋಗ ವಿನಮಯ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ತಹಶೀಲ್ದಾರ್ ಅನಿಲ್ ಕುಮಾರ್ ಜಿ. ಮಾತನಾಡಿ, ’ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಬಡ ಜನರಿಗೆ ವಿತರಣೆ ಮಾಡುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡಿದರೆ ಅಂತಹ ಜನರ ಕಾರ್ಡ್ ಗಳನ್ನು ರದ್ದು ಮಾಡಲು ಅಧಿಕಾರಿಗಳು ಸೂಕ್ತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.</p>.<p>ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷೆ ಆಶಾಲತಾ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ಗ್ಯಾರಂಟಿಯ ಯೋಜನೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ಯಾರಂಟಿ ಯೋಜನೆಯ ಸದಸ್ಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು</strong>: 'ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆಯು ಬಸ್ಗಳನ್ನು ಸಕಾಲಕ್ಕೆ ಸಮರ್ಪಕವಾಗಿ ಒದಗಿಸಬೇಕು' ಎಂದು ಸಂಡೂರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ನೂರುದ್ದೀನ್ ಎಸ್. ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿಯ ಎಂ. ವೈ. ಘೋರ್ಪಡೆ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಸಂಡೂರು ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳ ಸಾವಿರಾರು ವಿದ್ಯಾರ್ಥಿಗಳು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆಯುತ್ತಿದ್ದು ಮಕ್ಕಳ ಸಂಚಾರದ ಅನುಕೂಲಕ್ಕಾಗಿ ಸಾರಿಗೆ ಇಲಾಖೆ ಬಸ್ ಗಳನ್ನು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು. </p>.<p>ಯುವನಿಧಿ ನೋಂದಣಿ 2024-25 ನೇ ಸಾಲಿನಲ್ಲಿ ಒಟ್ಟು 832 ಅಭ್ಯರ್ಥಿಗಳು ನೋಂದಾಣಿಯಾಗಿದ್ದು ಪ್ರಸ್ತುತ ಸಾಲಿನ 2025-26 ರಲ್ಲಿ ಒಟ್ಟು 624 ಅಭ್ಯರ್ಥಿಗಳು ಮಾತ್ರ ನೊಂದಣಿಯಾಗಿದ್ದು ತೀರಾ ಕಳಪೆಯ ಪ್ರಗತಿ ಕಂಡುಬರುತ್ತಿದ್ದು ಅಧಿಕಾರಿಗಳು ಯುವ ನಿಧಿಯ ಯೋಜನೆ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಸಭೆಯಲ್ಲಿದ್ದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಮುಂದಿನ ಜೂನ್ ತಿಂಗಳಲ್ಲಿ ಎಲ್ಲ ಕಾಲೇಜುಗಳಿಗೆ ತೆರಳಿ ಶೇ100ರಷ್ಟು ನೋಂದಣಿ ಮಾಡಬೇಕು ಇಲ್ಲದಿದ್ರೆ ಉದ್ಯೋಗ ವಿನಮಯ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ತಹಶೀಲ್ದಾರ್ ಅನಿಲ್ ಕುಮಾರ್ ಜಿ. ಮಾತನಾಡಿ, ’ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಬಡ ಜನರಿಗೆ ವಿತರಣೆ ಮಾಡುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡಿದರೆ ಅಂತಹ ಜನರ ಕಾರ್ಡ್ ಗಳನ್ನು ರದ್ದು ಮಾಡಲು ಅಧಿಕಾರಿಗಳು ಸೂಕ್ತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.</p>.<p>ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷೆ ಆಶಾಲತಾ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ಗ್ಯಾರಂಟಿಯ ಯೋಜನೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ಯಾರಂಟಿ ಯೋಜನೆಯ ಸದಸ್ಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>