<p><strong>ಕಂಪ್ಲಿ</strong>: ತಾಲ್ಲೂಕಿನ ಚಿಕ್ಕಜಾಯಿಗನೂರು ಗ್ರಾಮದ ಈಶ್ವರ ದೇವಸ್ಥಾನ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಯುವಜನ ಹಾಗೂ ಸಾಂಸ್ಕೃತಿಕ ಕಲಾತಂಡದಿಂದ ಗುರುವಾರ ಹಮ್ಮಿಕೊಂಡಿದ್ದ ಬೀದಿ ನಾಟಕ ಪ್ರದರ್ಶನ ಜನಮನಸೂರೆಗೊಂಡಿತು.</p>.<p>ಮಕ್ಕಳ ಶಿಕ್ಷಣ ಮಹತ್ವ, ಆರೋಗ್ಯ, ಸ್ವಚ್ಛತೆ, ಸಾರ್ವಜನಿಕ ಸ್ಥಳಗಳಲ್ಲಿ ಶುಚಿತ್ವದ ಪ್ರಾಮುಖ್ಯತೆ, ಶೌಚಾಲಯ ಬಳಕೆ, ನೀರಿನ ಸದ್ಬಳಕೆ ಕುರಿತು ಕಲಾವಿದರು ಬೀದಿ ನಾಟಕ ಮೂಲಕ ಜಾಗೃತಿ ಮೂಡಿಸಿದರು.</p>.<p>ಇದಕ್ಕೂ ಮುನ್ನ ಹಂಪಾದೇವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ಪಂಪನಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>ರೈತ ಮುಖಂಡ ಜಿ. ಅಮರೇಗೌಡ, ಮುಖ್ಯಶಿಕ್ಷಕ ಮಲ್ಲಿಕಾರ್ಜುನ, ವಲಯ ಮೇಲ್ವಿಚಾರಕ ಮಂಜುನಾಥ, ರೇಖಾ, ಸೇವಾ ಪ್ರತಿನಿಧಿ ಸಂಗೀತ, ಗ್ರಾಮಸ್ಥರು ಹಾಜರಿದ್ದರು.<br>ಪ್ರಸ್ತುತ ಬೀದಿ ನಾಟಕ ತಾಲ್ಲೂಕಿನ ಮಾರುತಿನಗರ ವಲಯದ ಎಂ.ಡಿ ಕ್ಯಾಂಪ್, ಬಸವೇಶ್ವರನಗರದಲ್ಲಿ ಪ್ರದರ್ಶನಗೊಂಡಿತು. ಮುಖಂಡರಾದ ಸುಂಕಲಪ್ಪ, ರಾಮಾಂಜನೇಯ, ವೆಂಕಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ</strong>: ತಾಲ್ಲೂಕಿನ ಚಿಕ್ಕಜಾಯಿಗನೂರು ಗ್ರಾಮದ ಈಶ್ವರ ದೇವಸ್ಥಾನ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಯುವಜನ ಹಾಗೂ ಸಾಂಸ್ಕೃತಿಕ ಕಲಾತಂಡದಿಂದ ಗುರುವಾರ ಹಮ್ಮಿಕೊಂಡಿದ್ದ ಬೀದಿ ನಾಟಕ ಪ್ರದರ್ಶನ ಜನಮನಸೂರೆಗೊಂಡಿತು.</p>.<p>ಮಕ್ಕಳ ಶಿಕ್ಷಣ ಮಹತ್ವ, ಆರೋಗ್ಯ, ಸ್ವಚ್ಛತೆ, ಸಾರ್ವಜನಿಕ ಸ್ಥಳಗಳಲ್ಲಿ ಶುಚಿತ್ವದ ಪ್ರಾಮುಖ್ಯತೆ, ಶೌಚಾಲಯ ಬಳಕೆ, ನೀರಿನ ಸದ್ಬಳಕೆ ಕುರಿತು ಕಲಾವಿದರು ಬೀದಿ ನಾಟಕ ಮೂಲಕ ಜಾಗೃತಿ ಮೂಡಿಸಿದರು.</p>.<p>ಇದಕ್ಕೂ ಮುನ್ನ ಹಂಪಾದೇವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ಪಂಪನಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>ರೈತ ಮುಖಂಡ ಜಿ. ಅಮರೇಗೌಡ, ಮುಖ್ಯಶಿಕ್ಷಕ ಮಲ್ಲಿಕಾರ್ಜುನ, ವಲಯ ಮೇಲ್ವಿಚಾರಕ ಮಂಜುನಾಥ, ರೇಖಾ, ಸೇವಾ ಪ್ರತಿನಿಧಿ ಸಂಗೀತ, ಗ್ರಾಮಸ್ಥರು ಹಾಜರಿದ್ದರು.<br>ಪ್ರಸ್ತುತ ಬೀದಿ ನಾಟಕ ತಾಲ್ಲೂಕಿನ ಮಾರುತಿನಗರ ವಲಯದ ಎಂ.ಡಿ ಕ್ಯಾಂಪ್, ಬಸವೇಶ್ವರನಗರದಲ್ಲಿ ಪ್ರದರ್ಶನಗೊಂಡಿತು. ಮುಖಂಡರಾದ ಸುಂಕಲಪ್ಪ, ರಾಮಾಂಜನೇಯ, ವೆಂಕಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>