<p><strong>ಬಳ್ಳಾರಿ</strong>: ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಕುರುಗೋಡಿನಲ್ಲಿ ಶುಕ್ರವಾರ ವಿದ್ಯಾರ್ಥಿಗಳು ಒಂದು ದಿನದ ಮಟ್ಟಿಗೆ ತಹಶೀಲ್ದಾರ್ರಾಗಿ ಕಾರ್ಯನಿರ್ವಹಿಸಿದರು.</p>.<p>ಕುರುಗೋಡು ತಾಲ್ಲೂಕಿನ ಗುತ್ತಿಗನೂರು ಸರ್ಕಾರಿ ಪೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸಾಜೀದ್ ಮತ್ತು ಗೆಣಿಕೆಹಾಳು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಗೌಸಿಯಾಬೇಗಂ ತಹಶೀಲ್ದಾರ್ರಾಗಿ ಕಾರ್ಯನಿರ್ವಹಿಸಿದರು. ತರಗತಿಯ ಪರೀಕ್ಷೆಗಳಲ್ಲಿ ಇಬ್ಬರೂ ಹೆಚ್ಚಿನ ಅಂಕಗಳನ್ನು ಗಳಿಸಿದ್ದರಿಂದ ಅವರಿಗೆ ಈ ಅವಕಾಶ ಕಲ್ಪಿಸಲಾಗಿತ್ತು.</p>.<p>ಇಬ್ಬರೂ ವಿದ್ಯಾರ್ಥಿಗಳು, ಅಧಿಕಾರಿಗಳ ಸಭೆ ನಡೆಸಿದರು. ಕಡತ ಪರಿಶೀಲನೆ ಜೊತೆಗೆ 371 ಜೆ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಪಡೆದರು. ನಂತರ ಗ್ರಾಮಗಳಿಗೂ ಭೇಟಿ ನೀಡಿದರು. </p>.<p>‘ತಹಶೀಲ್ದಾರ್ರಾಗಿ ಕಾರ್ಯನಿರ್ವಹಿಸಿದ್ದು ತುಂಬಾ ಖುಷಿ ಕೊಟ್ಟಿತು. ತಹಶೀಲ್ದಾರ್ ಹುದ್ದೆಗೇರಿದರೆ, ಬಡವರಿಗೆ ಸಹಾಯ ಮಾಡಬಹುದು ಎಂಬುದು ಗೊತ್ತಾಯಿತು’ ಎಂದು ವಿದ್ಯಾರ್ಥಿಗಳಾದ ಸಾಜಿದ್ ಮತ್ತು ಗೌಸಿಯಾ ಬೇಗಂ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಆತ್ಮಸ್ಥೈರ್ಯ ತುಂಬಲು, ಮನೋಬಲ ವೃದ್ಧಿಸಲು, ನಾಯಕತ್ವಗುಣ ಬೆಳೆಸಲು ಮತ್ತು ಪ್ರತಿಭೆ ಪ್ರೋತ್ಸಾಹಿಸಲು ಮಕ್ಕಳಿಗೆ ಒಂದು ದಿನದ ಮಟ್ಟಿಗೆ ತಹಶೀಲ್ದಾರ್ರಾಗಲು ಅವಕಾಶ ಕಲ್ಪಿಸಲಾಯಿತು’ ಎಂದು ತಹಶೀಲ್ದಾರ್ ನರಸಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಕುರುಗೋಡಿನಲ್ಲಿ ಶುಕ್ರವಾರ ವಿದ್ಯಾರ್ಥಿಗಳು ಒಂದು ದಿನದ ಮಟ್ಟಿಗೆ ತಹಶೀಲ್ದಾರ್ರಾಗಿ ಕಾರ್ಯನಿರ್ವಹಿಸಿದರು.</p>.<p>ಕುರುಗೋಡು ತಾಲ್ಲೂಕಿನ ಗುತ್ತಿಗನೂರು ಸರ್ಕಾರಿ ಪೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸಾಜೀದ್ ಮತ್ತು ಗೆಣಿಕೆಹಾಳು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಗೌಸಿಯಾಬೇಗಂ ತಹಶೀಲ್ದಾರ್ರಾಗಿ ಕಾರ್ಯನಿರ್ವಹಿಸಿದರು. ತರಗತಿಯ ಪರೀಕ್ಷೆಗಳಲ್ಲಿ ಇಬ್ಬರೂ ಹೆಚ್ಚಿನ ಅಂಕಗಳನ್ನು ಗಳಿಸಿದ್ದರಿಂದ ಅವರಿಗೆ ಈ ಅವಕಾಶ ಕಲ್ಪಿಸಲಾಗಿತ್ತು.</p>.<p>ಇಬ್ಬರೂ ವಿದ್ಯಾರ್ಥಿಗಳು, ಅಧಿಕಾರಿಗಳ ಸಭೆ ನಡೆಸಿದರು. ಕಡತ ಪರಿಶೀಲನೆ ಜೊತೆಗೆ 371 ಜೆ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಪಡೆದರು. ನಂತರ ಗ್ರಾಮಗಳಿಗೂ ಭೇಟಿ ನೀಡಿದರು. </p>.<p>‘ತಹಶೀಲ್ದಾರ್ರಾಗಿ ಕಾರ್ಯನಿರ್ವಹಿಸಿದ್ದು ತುಂಬಾ ಖುಷಿ ಕೊಟ್ಟಿತು. ತಹಶೀಲ್ದಾರ್ ಹುದ್ದೆಗೇರಿದರೆ, ಬಡವರಿಗೆ ಸಹಾಯ ಮಾಡಬಹುದು ಎಂಬುದು ಗೊತ್ತಾಯಿತು’ ಎಂದು ವಿದ್ಯಾರ್ಥಿಗಳಾದ ಸಾಜಿದ್ ಮತ್ತು ಗೌಸಿಯಾ ಬೇಗಂ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಆತ್ಮಸ್ಥೈರ್ಯ ತುಂಬಲು, ಮನೋಬಲ ವೃದ್ಧಿಸಲು, ನಾಯಕತ್ವಗುಣ ಬೆಳೆಸಲು ಮತ್ತು ಪ್ರತಿಭೆ ಪ್ರೋತ್ಸಾಹಿಸಲು ಮಕ್ಕಳಿಗೆ ಒಂದು ದಿನದ ಮಟ್ಟಿಗೆ ತಹಶೀಲ್ದಾರ್ರಾಗಲು ಅವಕಾಶ ಕಲ್ಪಿಸಲಾಯಿತು’ ಎಂದು ತಹಶೀಲ್ದಾರ್ ನರಸಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>