‘ಬೇಸಿಗೆಯಲ್ಲಿ ಬಹುತೇಕ ಜಲಮೂಲಗಳು ಬತ್ತಿ ಹೋಗಿರುವುದರಿಂದ ಹನಿ ನೀರಿಗಾಗಿ ಪಕ್ಷಿಗಳು ಪರದಾಟ ನಡೆಸುವಂತಹ ಪರಿಸ್ಥಿತಿ ಇದೆ. ಇದನ್ನು ಮನಗಂಡು ಕೆಲವು ಮರಗಳಲ್ಲಿ ಮಡಿಕೆಗಳನ್ನು ನೇತು ಹಾಕಿ ನೀರು ಹಾಕುತ್ತಿದ್ದೇವೆ. ಪಕ್ಷಿಗಳು ಬಂದು ನೀರು ಕುಡಿದು ಹೋಗುತ್ತಿವೆ. ಇದಕ್ಕಿಂತ ಪುಣ್ಯದ ಕೆಲಸ ಮತ್ತೊಂದು ಇಲ್ಲ ಎಂದು ಭಾವಿಸಿದ್ದೇವೆ. ಎಲ್ಲ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ಈ ಕೆಲಸ ಮಾಡುತ್ತಿದ್ದಾರೆ’ ಎಂದು ಸಂಶೋಧನಾ ವಿದ್ಯಾರ್ಥಿ ಗಿರೀಶ್ ಕುಮಾರ ಗೌಡ ತಿಳಿಸಿದರು.