<p><strong>ಬಳ್ಳಾರಿ: </strong>ರಾಜ್ಯದ ಹದಿನಾಲ್ಕು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಕೋ ಬ್ಯಾಂಕ್ ಬೆಳ್ಳಿ ಮಹೋತ್ಸವ 2019ರ ಜನವರಿ 5 ರಿಂದ ವರ್ಷವಿಡೀ ನಡೆಯಲಿದೆ ಎಂದು ಬ್ಯಾಂಕ್ ಅಧ್ಯಕ್ಷ ಮೋಹಿತ್ ಮಸ್ಕಿ ತಿಳಿಸಿದರು.</p>.<p>ಜನವರಿ 05ರಂದು ನಗರದಲ್ಲಿ ಸುಸ್ಥಿರ ಕೃಷಿಗಾಗಿ ಓಟ ವನ್ನು ಏರ್ಪಡಿಸಲಿದ್ದು, ಮೊದಲ ಬಹುಮಾನವಾಗಿ 25 ಸಾವಿರ ರುಪಾಯಿ, ಎರಡನೇ ಬಹುಮಾನ 15 ಸಾವಿರ ಮತ್ತು ತೃತೀಯ ಬಹುಮಾನ 10 ಸಾವಿರ ರುಪಾಯಿ ನೀಡಲಾಗುವುದು ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p><strong>ಬರ ಗೆದ್ದವರೊಡನೆ ಸಂವಾದ: </strong>ಅಂದು ಮಧ್ಯಾಹ್ನ ಜಿಲ್ಲಾ ಪಂಚಾಯ್ತಿಯಲ್ಲಿ ಬರಗೆದ್ದ ರಾಜ್ಯದ 45 ಕೃಷಿಕರೊಂದಿಗೆ ಕೃಷಿ ಸಚಿವ ಶಿವಶಂಕರ ರೆಡ್ಡಿ ಸಂವಾದ ನಡೆಸಲಿದ್ದಾರೆ.</p>.<p>ಉತ್ತರ ಕರ್ನಾಟಕದ ಮರೆತು ಹೋದ ತಿಂಡಿಗಳು ಮತ್ತು ಸಿರಿಧಾನ್ಯ ಖಾದ್ಯಗಳ ತಯಾರಿಕೆ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ ಮೇಳ ಬಸವ ಭವನದಲ್ಲಿ ಸಂಜೆ ನಡೆಯಲಿದೆ ಎಂದರು.</p>.<p>ಬ್ಯಾಂಕ್ ಮೂರು ವರ್ಷದಿಂದ ಪ್ರಗತಿ ಪರ ರೈತರಿಗೆ ಸುಕೃತ ಪ್ರಶಸ್ತಿ ನೀಡುತ್ತಿದ್ದು, ಈ ಬಾರಿಯೂ ಪ್ರಶಸ್ತಿ ಪ್ರದಾನ ಸಮಾರಂಭ ಬಸವ ಭವನದಲ್ಲೆ ನಡೆಯಲಿದೆ. ಪುರಸ್ಕೃತ ರನ್ನು ಸಮಿತಿ ಆಯ್ಕೆಮಾಡಲಿದೆ ಎಂದರು.</p>.<p>ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಬಾಲಪ್ರತಿಭೆಗಳಾದ ಜ್ಞಾನೇಶ್. ಪ್ರಕೃತಿ ರೆಡ್ಡಿ ಮತ್ತು ವಿಶ್ವಪ್ರಸಾದ್ ಸುಕೋ ಸಂಗೀತ ಸಂಜೆಯನ್ನು ನಡೆಸಿಕೊಡಲಿದ್ದಾರೆ ಎಂದರು.</p>.<p>ಬ್ಯಾಂಕಿನ ವ್ಯವಸ್ಥಾಪಕ ಪರಿಮಳಾಚಾರ್ಯ ಅಗ್ನಿಹೋತ್ರಿ, ಆಡಳಿತ ಮಂಡಳಿ ಕಾರ್ಯದರ್ಶಿ ವೆಂಕಟೇಶ್ವರ ರಾವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ರಾಜ್ಯದ ಹದಿನಾಲ್ಕು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಕೋ ಬ್ಯಾಂಕ್ ಬೆಳ್ಳಿ ಮಹೋತ್ಸವ 2019ರ ಜನವರಿ 5 ರಿಂದ ವರ್ಷವಿಡೀ ನಡೆಯಲಿದೆ ಎಂದು ಬ್ಯಾಂಕ್ ಅಧ್ಯಕ್ಷ ಮೋಹಿತ್ ಮಸ್ಕಿ ತಿಳಿಸಿದರು.</p>.<p>ಜನವರಿ 05ರಂದು ನಗರದಲ್ಲಿ ಸುಸ್ಥಿರ ಕೃಷಿಗಾಗಿ ಓಟ ವನ್ನು ಏರ್ಪಡಿಸಲಿದ್ದು, ಮೊದಲ ಬಹುಮಾನವಾಗಿ 25 ಸಾವಿರ ರುಪಾಯಿ, ಎರಡನೇ ಬಹುಮಾನ 15 ಸಾವಿರ ಮತ್ತು ತೃತೀಯ ಬಹುಮಾನ 10 ಸಾವಿರ ರುಪಾಯಿ ನೀಡಲಾಗುವುದು ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p><strong>ಬರ ಗೆದ್ದವರೊಡನೆ ಸಂವಾದ: </strong>ಅಂದು ಮಧ್ಯಾಹ್ನ ಜಿಲ್ಲಾ ಪಂಚಾಯ್ತಿಯಲ್ಲಿ ಬರಗೆದ್ದ ರಾಜ್ಯದ 45 ಕೃಷಿಕರೊಂದಿಗೆ ಕೃಷಿ ಸಚಿವ ಶಿವಶಂಕರ ರೆಡ್ಡಿ ಸಂವಾದ ನಡೆಸಲಿದ್ದಾರೆ.</p>.<p>ಉತ್ತರ ಕರ್ನಾಟಕದ ಮರೆತು ಹೋದ ತಿಂಡಿಗಳು ಮತ್ತು ಸಿರಿಧಾನ್ಯ ಖಾದ್ಯಗಳ ತಯಾರಿಕೆ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ ಮೇಳ ಬಸವ ಭವನದಲ್ಲಿ ಸಂಜೆ ನಡೆಯಲಿದೆ ಎಂದರು.</p>.<p>ಬ್ಯಾಂಕ್ ಮೂರು ವರ್ಷದಿಂದ ಪ್ರಗತಿ ಪರ ರೈತರಿಗೆ ಸುಕೃತ ಪ್ರಶಸ್ತಿ ನೀಡುತ್ತಿದ್ದು, ಈ ಬಾರಿಯೂ ಪ್ರಶಸ್ತಿ ಪ್ರದಾನ ಸಮಾರಂಭ ಬಸವ ಭವನದಲ್ಲೆ ನಡೆಯಲಿದೆ. ಪುರಸ್ಕೃತ ರನ್ನು ಸಮಿತಿ ಆಯ್ಕೆಮಾಡಲಿದೆ ಎಂದರು.</p>.<p>ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಬಾಲಪ್ರತಿಭೆಗಳಾದ ಜ್ಞಾನೇಶ್. ಪ್ರಕೃತಿ ರೆಡ್ಡಿ ಮತ್ತು ವಿಶ್ವಪ್ರಸಾದ್ ಸುಕೋ ಸಂಗೀತ ಸಂಜೆಯನ್ನು ನಡೆಸಿಕೊಡಲಿದ್ದಾರೆ ಎಂದರು.</p>.<p>ಬ್ಯಾಂಕಿನ ವ್ಯವಸ್ಥಾಪಕ ಪರಿಮಳಾಚಾರ್ಯ ಅಗ್ನಿಹೋತ್ರಿ, ಆಡಳಿತ ಮಂಡಳಿ ಕಾರ್ಯದರ್ಶಿ ವೆಂಕಟೇಶ್ವರ ರಾವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>