ಅಪಘಾತಕ್ಕೊಳಗಾಗಿ, ಸೂಕ್ಷ್ಮ ಶಸ್ತ್ರಚಿಕಿತ್ಸೆ ಅಗತ್ಯವಿರುವ ಈ ಭಾಗದ ಜನ ಇದುವರೆಗೆ ಬೆಂಗಳೂರು ಅಥವಾ ಹೈದರಾಬಾದ್ಗೆ ಹೋಗಬೇಕಿತ್ತು. ಟ್ರಾಮಾ ಕೇರ್ ಸೆಂಟರ್ ಆರಂಭದಿಂದ ಸಮೀಪದಲ್ಲೇ ಉತ್ತಮ ಚಿಕಿತ್ಸೆ ದೊರೆಯಲಿದೆ. ಬಳ್ಳಾರಿ, ಚಿತ್ರದುರ್ಗ, ರಾಯಚೂರು, ವಿಜಯನಗರ, ಕೊಪ್ಪಳ, ನೆರೆಯ ಆಂಧ್ರ ಪ್ರದೇಶದ ಅನಂತಪುರ ಮತ್ತು ಕರ್ನೂಲ್ ಜಿಲ್ಲೆಗಳ ರೋಗಿಗಳಿಗೆ ಇನ್ನು ಮುಂದೆ ಶಸ್ತ್ರಚಿಕಿತ್ಸೆ ಸಿಗಲಿದೆ.