ಸಿರುಗುಪ್ಪದ ನಿಟ್ಟೂರು ನರಸಿಂಹಮೂರ್ತಿ ಬಯಲು ವೇದಿಕೆಯಲ್ಲಿ ಸೋಮವಾರ ರಾತ್ರಿ ಏರ್ಪಡಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಭವಿಷ್ಯ ಮುಗಿದಿದೆ. ಗುಜರಾತ್, ಉತ್ತರ ಪ್ರದೇಶದಲ್ಲಿ ಸರ್ವನಾಶವಾಗಿದೆ. ಈಶಾನ್ಯ ರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದೆ. ಆ ಪಕ್ಷವನ್ನು ಸಮುದ್ರಕ್ಕೆ ಎಸೆಯುವ ಕಾಲ ಬಂದಿದೆ ಎಂದು ಟೀಕಿಸಿದರು.