ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಮಟ್ಟಕ್ಕೆ ಶಿಕ್ಷಕಿ ಪಲ್ಲವಿ ಆಯ್ಕೆ

Last Updated 7 ನವೆಂಬರ್ 2022, 12:35 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಜಾನಪದ ಗೀತ ಗಾಯನ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿರುವ ಶಿಕ್ಷಕಿ ಆರ್‌. ಪಲ್ಲವಿ ಭಟ್‌ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ನಗರದಲ್ಲಿ ಸೋಮವಾರ ಅವರನ್ನು ಪರಿಷತ್ತಿನ ಪದಾಧಿಕಾರಿಗಳು ಸನ್ಮಾನಿಸಿದರು. ತ್ರಿಪುರದಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆ ಆಯೋಜಿಸಲಾಗಿದ್ದು, ಅಲ್ಲಿನ ಸ್ಪರ್ಧೆಗೆ ಪಲ್ಲವಿ ಭಟ್‌ ಆಯ್ಕೆಯಾಗಿರುವುದು ಖುಷಿ ತಂದಿದೆ. ಪಲ್ಲವಿ ತಾಲ್ಲೂಕಿನ ಬ್ಯಾಲಕುಂದಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ಸಾಧನೆಯಿಂದ ತಾಲ್ಲೂಕಿಗೆ ಕೀರ್ತಿ ಬಂದಂತಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ನಾಯಕರ ಹುಲುಗಪ್ಪ ತಿಳಿಸಿದರು.

ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಪ್ರಕಾಶ್, ಉಮಾ ಮಹೇಶ್ವರ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಬಸವರಾಜ. ಕೆ., ನೂರ್‌ ಜಹಾನ್, ಗುಂಡಿ ಮಾರುತಿ, ಶ್ರೀಕಾಂತ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT