<p><strong>ತೆಕ್ಕಲಕೋಟೆ:</strong> ಇಲ್ಲಿನ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಎಸ್ ಎಫ್ ಸಿ ಅನುದಾನ ₹ 3 ಕೋಟಿ ಹಂಚಿಕೆ ಕುರಿತ ಕ್ರಿಯಾ ಯೋಜನೆಗೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಎಚ್.ವಿಶ್ವನಾಥ ಸೋಮವಾರ ಮತ್ತು ಮಂಗಳವಾರ ಪ್ರತಿಯೊಂದು ವಾರ್ಡ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ನಂತರ ಮಾತನಾಡಿದ ಅವರು, ‘ಎಲ್ಲ 20 ವಾರ್ಡ್ ಪರಿಶೀಲಿಸಲಾಗಿ ಕೆಲವು ಅನಗತ್ಯ ಕಾಮಗಾರಿಗಳಲ್ಲಿ ಬದಲಾವಣೆ ಮಾಡಲಾಗಿದೆ. ಮುಖ್ಯವಾಗಿ 14, 17 ಮತ್ತು 18ನೇ ವಾರ್ಡ್ ನ ಕಾಮಗಾರಿ ಬದಲಾಯಿಸಿದ್ದು, ಈ ಕಾಮಗಾರಿಗಳ ಮೊತ್ತವನ್ನು ನೀಲಕಂಠೇಶ್ವರ ದೇವಸ್ಥಾನದ ಬಳಿಯ ಹಳ್ಳದ ಕಾಮಗಾರಿಗೆ ಹೊಂದಿಸಲಾಗಿದೆ' ಎಂದು ತಿಳಿಸಿದರು.</p>.<p>ವಾರ್ಡ್ ಗಳಿಗೆ ಎಸ್ ಎಫ್ ಸಿ ಅನುದಾನದ ₹ 3 ಕೋಟಿ ಹಂಚಿಕೆ ನ್ಯಾಯಸಮ್ಮತವಾಗಿ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳ ಅನುಮೋದನೆಗೆ ಸಲ್ಲಿಸಲಾಗಿದೆ ಎಂದರು.</p>.<p>ಮುಖ್ಯಾಧಿಕಾರಿ ಪರಶುರಾಮ, ಕಿರಿಯ ಎಂಜಿನಿಯರ್ ಸುನಂದ, ಕಂದಾಯ ಅಧಿಕಾರಿ ಸುರೇಶ್ ಬಾಬು ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಕ್ಕಲಕೋಟೆ:</strong> ಇಲ್ಲಿನ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಎಸ್ ಎಫ್ ಸಿ ಅನುದಾನ ₹ 3 ಕೋಟಿ ಹಂಚಿಕೆ ಕುರಿತ ಕ್ರಿಯಾ ಯೋಜನೆಗೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಎಚ್.ವಿಶ್ವನಾಥ ಸೋಮವಾರ ಮತ್ತು ಮಂಗಳವಾರ ಪ್ರತಿಯೊಂದು ವಾರ್ಡ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ನಂತರ ಮಾತನಾಡಿದ ಅವರು, ‘ಎಲ್ಲ 20 ವಾರ್ಡ್ ಪರಿಶೀಲಿಸಲಾಗಿ ಕೆಲವು ಅನಗತ್ಯ ಕಾಮಗಾರಿಗಳಲ್ಲಿ ಬದಲಾವಣೆ ಮಾಡಲಾಗಿದೆ. ಮುಖ್ಯವಾಗಿ 14, 17 ಮತ್ತು 18ನೇ ವಾರ್ಡ್ ನ ಕಾಮಗಾರಿ ಬದಲಾಯಿಸಿದ್ದು, ಈ ಕಾಮಗಾರಿಗಳ ಮೊತ್ತವನ್ನು ನೀಲಕಂಠೇಶ್ವರ ದೇವಸ್ಥಾನದ ಬಳಿಯ ಹಳ್ಳದ ಕಾಮಗಾರಿಗೆ ಹೊಂದಿಸಲಾಗಿದೆ' ಎಂದು ತಿಳಿಸಿದರು.</p>.<p>ವಾರ್ಡ್ ಗಳಿಗೆ ಎಸ್ ಎಫ್ ಸಿ ಅನುದಾನದ ₹ 3 ಕೋಟಿ ಹಂಚಿಕೆ ನ್ಯಾಯಸಮ್ಮತವಾಗಿ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳ ಅನುಮೋದನೆಗೆ ಸಲ್ಲಿಸಲಾಗಿದೆ ಎಂದರು.</p>.<p>ಮುಖ್ಯಾಧಿಕಾರಿ ಪರಶುರಾಮ, ಕಿರಿಯ ಎಂಜಿನಿಯರ್ ಸುನಂದ, ಕಂದಾಯ ಅಧಿಕಾರಿ ಸುರೇಶ್ ಬಾಬು ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>