ಉತ್ತನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಟಸೂಗೂರು ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಕೃಷಿ ಹೊಂಡ ನಿರ್ಮಾಣ ಕಾರ್ಯದ ಸ್ಥಳಕ್ಕೆ ಭೇಟಿ ನೀಡಿದ ಸಿ.ಇ.ಒ. ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಬಳಕೆಮಾಡಿಕೊಂಡು ಜಾಬ್ ಕಾರ್ಡ್ ಹೊಂದಿದ ಕೂಲಿಕಾರರಿಗೆ ಕೂಲಿ ಕೆಲಸ ನೀಡಬೇಕು, ನರೇಗಾ ಯೋಜನೆಯಲ್ಲಿ ಬದು ನಿರ್ಮಾಣ, ಕೆರೆ ಅಭಿವೃದ್ಧಿ, ಹಳ್ಳ ಅಭಿವೃದ್ಧಿಯಂತಹ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದ್ದು, ಕೂಲಿಕಾರರಿಗೆ ಸಕಾಲಕ್ಕೆ ಕೂಲಿ ಹಣ ವಿತರಿಸಬೇಕೆಂದು ತಾ.ಪಂ.ಇ.ಒ. ಪವನ್ಕುಮಾರ್ ಅವರಿಗೆ ಸೂಚಿಸಿದರು.