<p>ತೆಕ್ಕಲಕೋಟೆ: ‘ಪಟ್ಟಣದಲ್ಲಿ ಏ.20ರಂದು ನಡೆಯಲಿರುವ ಬಸವೇಶ್ವರ ಜಯಂತಿ ಆಚರಣೆಗೆ ಸ್ಥಳೀಯ ಪಟ್ಟಣ ಪಂಚಾಯಿತಿ ಸಂಪೂರ್ಣ ಸಹಕಾರ ನೀಡುವ ಜತೆಗೆ ಪ್ರೋತ್ಸಾಹ ಧನ ನೀಡಬೇಕು’ ಎಂದು ಆಗ್ರಹಿಸಿ ವೀರಶೈವ ಲಿಂಗಾಯತ ಮುಖಂಡರು ಪ್ರಭಾರ ಮುಖ್ಯಾಧಿಕಾರಿ ಶೋಭಾ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.</p>.<p>‘ಕಳೆದ ಎರಡು ವರ್ಷಗಳಿಂದ ಬಸವೇಶ್ವರ ಜಯಂತಿ ಆಚರಣೆಗೆ ಸ್ಥಳೀಯ ಆಡಳಿತ ಪ್ರೋತ್ಸಾಹ ಧನ ನೀಡದೆ ನಿರ್ಲಕ್ಷ್ಯ ತಾಳಿದೆ. ಈ ಬಾರಿಯ ಬಸವ ಜಯಂತಿಗೆ ಸಹಕಾರ ನೀಡದಿದ್ದಲ್ಲಿ ಹೋರಾಟ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>‘ಜಯಂತಿಗಳ ಆಚರಣೆಗಳಿಗೆ ಸರ್ಕಾರವೇ ಪ್ರೋತ್ಸಾಹ ನೀಡುತ್ತಿದ್ದು, ಇಲಾಖೆ ವತಿಯಿಂದ ಸಂಪೂರ್ಣ ಖರ್ಚು ಭರಿಸಲಾಗುತ್ತದೆ. ಆದರೆ ಸ್ಥಳೀಯ ಪಟ್ಟಣ ಪಂಚಾಯಿತಿಯು ಯಾವುದೇ ಜಯಂತಿ ಆಚರಣೆಗೆ ಪ್ರೋತ್ಸಾಹ ನೀಡುವುದಿರಲಿ, ಅವುಗಳನ್ನು ಆಚರಿಸದೆ ನಿರ್ಲಕ್ಷ್ಯ ಮಾಡುತ್ತಿದೆ’ ಎಂದು ಆರೋಪಿಸಿದರು.</p>.<p>ಸಮುದಾಯದ ಮುಖಂಡರಾದ ಬಗ್ಗೂರು ಸಿದ್ದಯ್ಯ, ಮಲ್ಲನಗೌಡ, ಪಂಪಾಪತಿ, ಮುರುಗ ರಾಜೇಂದ್ರ ಸ್ವಾಮಿ, ಶರಣ ಬಸಪ್ಪ, ಈರಣ್ಣ, ಕಿರಣ್ ಕುಮಾರ್ ಸ್ವಾಮಿ, ಗುರು ಸಿದ್ದಪ್ಪ, ಬಸವರಾಜ, ಅಯ್ಯಪ್ಪ, ವಿನಯ್, ಸುಧಾಕರ್ ಶಾಬಾದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-25-1669784593</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೆಕ್ಕಲಕೋಟೆ: ‘ಪಟ್ಟಣದಲ್ಲಿ ಏ.20ರಂದು ನಡೆಯಲಿರುವ ಬಸವೇಶ್ವರ ಜಯಂತಿ ಆಚರಣೆಗೆ ಸ್ಥಳೀಯ ಪಟ್ಟಣ ಪಂಚಾಯಿತಿ ಸಂಪೂರ್ಣ ಸಹಕಾರ ನೀಡುವ ಜತೆಗೆ ಪ್ರೋತ್ಸಾಹ ಧನ ನೀಡಬೇಕು’ ಎಂದು ಆಗ್ರಹಿಸಿ ವೀರಶೈವ ಲಿಂಗಾಯತ ಮುಖಂಡರು ಪ್ರಭಾರ ಮುಖ್ಯಾಧಿಕಾರಿ ಶೋಭಾ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.</p>.<p>‘ಕಳೆದ ಎರಡು ವರ್ಷಗಳಿಂದ ಬಸವೇಶ್ವರ ಜಯಂತಿ ಆಚರಣೆಗೆ ಸ್ಥಳೀಯ ಆಡಳಿತ ಪ್ರೋತ್ಸಾಹ ಧನ ನೀಡದೆ ನಿರ್ಲಕ್ಷ್ಯ ತಾಳಿದೆ. ಈ ಬಾರಿಯ ಬಸವ ಜಯಂತಿಗೆ ಸಹಕಾರ ನೀಡದಿದ್ದಲ್ಲಿ ಹೋರಾಟ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>‘ಜಯಂತಿಗಳ ಆಚರಣೆಗಳಿಗೆ ಸರ್ಕಾರವೇ ಪ್ರೋತ್ಸಾಹ ನೀಡುತ್ತಿದ್ದು, ಇಲಾಖೆ ವತಿಯಿಂದ ಸಂಪೂರ್ಣ ಖರ್ಚು ಭರಿಸಲಾಗುತ್ತದೆ. ಆದರೆ ಸ್ಥಳೀಯ ಪಟ್ಟಣ ಪಂಚಾಯಿತಿಯು ಯಾವುದೇ ಜಯಂತಿ ಆಚರಣೆಗೆ ಪ್ರೋತ್ಸಾಹ ನೀಡುವುದಿರಲಿ, ಅವುಗಳನ್ನು ಆಚರಿಸದೆ ನಿರ್ಲಕ್ಷ್ಯ ಮಾಡುತ್ತಿದೆ’ ಎಂದು ಆರೋಪಿಸಿದರು.</p>.<p>ಸಮುದಾಯದ ಮುಖಂಡರಾದ ಬಗ್ಗೂರು ಸಿದ್ದಯ್ಯ, ಮಲ್ಲನಗೌಡ, ಪಂಪಾಪತಿ, ಮುರುಗ ರಾಜೇಂದ್ರ ಸ್ವಾಮಿ, ಶರಣ ಬಸಪ್ಪ, ಈರಣ್ಣ, ಕಿರಣ್ ಕುಮಾರ್ ಸ್ವಾಮಿ, ಗುರು ಸಿದ್ದಪ್ಪ, ಬಸವರಾಜ, ಅಯ್ಯಪ್ಪ, ವಿನಯ್, ಸುಧಾಕರ್ ಶಾಬಾದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-25-1669784593</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>