<p><strong>ತೆಕ್ಕಲಕೋಟೆ:</strong> ಪಟ್ಟಣದ ಸಿದ್ಧರಾಮೇಶ್ವರ ಜಾತ್ರಾ ಮಹೋತ್ಸವವು ಮಂಗಳವಾರ ಅದ್ದೂರಿಯಾಗಿ ಸಂಪನ್ನಗೊಂಡಿತು.</p>.<p>ಬೆಳಿಗ್ಗೆ ದೇವಸ್ಥಾನದಲ್ಲಿ ಹೋಮ, ಅರ್ಚನೆ ಮತ್ತು ಅಭಿಷೇಕ ಪೂಜೆ ನಡೆಯಿತು. ನಂತರ ಭಕ್ತರಿಗೆ ದಾಸೋಹ ಏರ್ಪಡಿಸಲಾಗಿತ್ತು.</p>.<p>ಸಂಜೆ ಧರ್ಮಕರ್ತ ಪಿ. ಎಂ ಜ್ಞಾನಾನಂದ ಸ್ವಾಮಿ ಅವರ ಮನೆಯಿಂದ ಡೊಳ್ಳು, ಕಳಸ ಸಕಲ ವಾದ್ಯ ಮೇಳ ಹಾಗೂ ಮಹಿಳೆಯರ ಕುಂಭದೊಂದಿಗೆ ಸಿದ್ಧರಾಮೇಶ್ವರರ ಮೂರ್ತಿಯ ದೇವಸ್ಥಾನದವರೆಗೆ ‘ನಂದಿಕೋಲು’ ಹಾಗೂ ದೇವರ ಮೂರ್ತಿಗಳ ಮೆರವಣಿಗೆ ನಡೆಯಿತು.</p>.<p>ನಂತರ ದೇವಸ್ಥಾನದಿಂದ ಮೂರ್ತಿಯನ್ನು ಜಡೆ ಶಂಕರಲಿಂಗ ದೇವಸ್ಥಾನದ ಬಳಿ ಮೆರವಣಿಗೆ ಮೂಲಕ ತಂದು ರಥದಲ್ಲಿ ಕುಳ್ಳಿರಿಸಿ ಪ್ರತಿಷ್ಠಾಪಿಸಲಾಯಿತು. ಭಾರೀ ಗಾತ್ರದ ಹೂಗಳು ಮತ್ತು ಹಸಿರು ತೋರಣಗಳಿಂದ ಅಲಂಕರಿಸಿದ ಭವ್ಯ ರಥಕ್ಕೆ ಸ್ವಾಮಿಜೀ ತೆಂಗಿನ ಕಾಯಿ ಒಡೆದು ರಥೋತ್ಸವಕ್ಕೆ ಚಾಲನೆ ನೀಡಿದರು.</p>.<p>ಸಿದ್ಧರಾಮೇಶ್ವರ ಮಠದ ಸಮಸ್ತ ಸದ್ಭಕ್ತ ಮಂಡಳಿ ಸೇರಿದಂತೆ ಜಾತ್ರೆಗೆ ವಿವಿಧ ಗ್ರಾಮಗಳ ಭಕ್ತರು ಭಾಗವಹಿಸಿ ಹರಕೆ ತೀರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಕ್ಕಲಕೋಟೆ:</strong> ಪಟ್ಟಣದ ಸಿದ್ಧರಾಮೇಶ್ವರ ಜಾತ್ರಾ ಮಹೋತ್ಸವವು ಮಂಗಳವಾರ ಅದ್ದೂರಿಯಾಗಿ ಸಂಪನ್ನಗೊಂಡಿತು.</p>.<p>ಬೆಳಿಗ್ಗೆ ದೇವಸ್ಥಾನದಲ್ಲಿ ಹೋಮ, ಅರ್ಚನೆ ಮತ್ತು ಅಭಿಷೇಕ ಪೂಜೆ ನಡೆಯಿತು. ನಂತರ ಭಕ್ತರಿಗೆ ದಾಸೋಹ ಏರ್ಪಡಿಸಲಾಗಿತ್ತು.</p>.<p>ಸಂಜೆ ಧರ್ಮಕರ್ತ ಪಿ. ಎಂ ಜ್ಞಾನಾನಂದ ಸ್ವಾಮಿ ಅವರ ಮನೆಯಿಂದ ಡೊಳ್ಳು, ಕಳಸ ಸಕಲ ವಾದ್ಯ ಮೇಳ ಹಾಗೂ ಮಹಿಳೆಯರ ಕುಂಭದೊಂದಿಗೆ ಸಿದ್ಧರಾಮೇಶ್ವರರ ಮೂರ್ತಿಯ ದೇವಸ್ಥಾನದವರೆಗೆ ‘ನಂದಿಕೋಲು’ ಹಾಗೂ ದೇವರ ಮೂರ್ತಿಗಳ ಮೆರವಣಿಗೆ ನಡೆಯಿತು.</p>.<p>ನಂತರ ದೇವಸ್ಥಾನದಿಂದ ಮೂರ್ತಿಯನ್ನು ಜಡೆ ಶಂಕರಲಿಂಗ ದೇವಸ್ಥಾನದ ಬಳಿ ಮೆರವಣಿಗೆ ಮೂಲಕ ತಂದು ರಥದಲ್ಲಿ ಕುಳ್ಳಿರಿಸಿ ಪ್ರತಿಷ್ಠಾಪಿಸಲಾಯಿತು. ಭಾರೀ ಗಾತ್ರದ ಹೂಗಳು ಮತ್ತು ಹಸಿರು ತೋರಣಗಳಿಂದ ಅಲಂಕರಿಸಿದ ಭವ್ಯ ರಥಕ್ಕೆ ಸ್ವಾಮಿಜೀ ತೆಂಗಿನ ಕಾಯಿ ಒಡೆದು ರಥೋತ್ಸವಕ್ಕೆ ಚಾಲನೆ ನೀಡಿದರು.</p>.<p>ಸಿದ್ಧರಾಮೇಶ್ವರ ಮಠದ ಸಮಸ್ತ ಸದ್ಭಕ್ತ ಮಂಡಳಿ ಸೇರಿದಂತೆ ಜಾತ್ರೆಗೆ ವಿವಿಧ ಗ್ರಾಮಗಳ ಭಕ್ತರು ಭಾಗವಹಿಸಿ ಹರಕೆ ತೀರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>