<p><strong>ತೆಕ್ಕಲಕೋಟೆ:</strong> ‘ತಜ್ಞರ ಸಮಿತಿಯ ಶಿಫಾರಸಿನ ಮೇರೆಗೆ ಪಟ್ಟಣದ ಪ್ರಾಗೈತಿಹಾಸಿಕ ಮತ್ತು ಪ್ರಾಚೀನ ಸ್ಮಾರಕ ಹಾಗೂ ಪುರಾತತ್ವ ಸ್ಥಳಗಳ ಉತ್ಖನನಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ’ ಎಂದು ಹಂಪಿ, ಕಮಲಾಪುರದ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಉಪನಿರ್ದೇಶಕ ಡಾ. ಆರ್. ಶೇಜೇಶ್ವರ ತಿಳಿಸಿದರು.</p>.<p>‘ತೆಕ್ಕಲಕೋಟೆಯ ಬಳೇ ತೋಟದ ಬಳಿ, ಗೌಡರ ಮೂಲೆ ಮತ್ತು ಹಿರೇಹರ್ಲ ಬಳಿ ಉತ್ಖನನ ನಡೆಸಲು ಸ್ಥಳ ಗುರುತಿಸಲಾಗಿದೆ. ಒಟ್ಟು ಐವರು ತಜ್ಞರ ನೇತೃತ್ವದಲ್ಲಿ ಉತ್ಖನನ ಮತ್ತು ಅಧ್ಯಯನ ನಡೆಯಲಿದೆ’ ಎಂದು ಅವರು ತಿಳಿಸಿದರು.</p>.<p>ಉತ್ಖನನ ತಂಡದ ಸಹನಿರ್ದೇಶಕಿ, ಅಮೆರಿಕದ ಹಾಟ್ವಿಕ್ ವಿಶ್ವವಿದ್ಯಾಲಯದ ಪ್ರೊ. ನಮಿತಾ ಎಸ್ ಸುಗಂಧಿ ಮಾತನಾಡಿ, ‘ಪ್ರಾಗೈತಿಹಾಸಿಕ ಕಾಲದ ಅಧ್ಯಯನದ ದೃಷ್ಟಿಯಿಂದ ಈ ಉತ್ಪನನ ಅಗತ್ಯವಾಗಿದೆ. 2015ರಲ್ಲಿ ಒಮ್ಮೆ ಉತ್ಖನನ ನಡೆದಿತ್ತು’ ಎಂದರು. </p>.<p>ಉತ್ಪನನ ತಂಡದಲ್ಲಿ ಅಜೀಂ ಪ್ರೇಮ್ಜೀ ವಿಶ್ವವಿದ್ಯಾಲಯದ ಪ್ರೊ. ವಿನಾಯಕ, ಅಶೋಕ ವಿಶ್ವವಿದ್ಯಾಲಯದ ಆಕಾಶ್ ಶ್ರೀನಿವಾಸ, ಮೊಹಾಲಿಯ ಮಿಹಿರ್ ತಂಗಸಾಲಿ, ವೈಷಿ ರಾಯ್, ದೆಹಲಿಯ ಸಹಾಯಕ ಜಿಲ್ಲಾಧಿಕಾರಿ ದೇವೇಂದ್ರ ಸಿಂಗ್ ಚೌಧರಿ, ಸಂಶೋಧನಾರ್ಥಿ ಅಶೋಕ್ ಅಬಕಾರಿ ಇದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಕ್ಕಲಕೋಟೆ:</strong> ‘ತಜ್ಞರ ಸಮಿತಿಯ ಶಿಫಾರಸಿನ ಮೇರೆಗೆ ಪಟ್ಟಣದ ಪ್ರಾಗೈತಿಹಾಸಿಕ ಮತ್ತು ಪ್ರಾಚೀನ ಸ್ಮಾರಕ ಹಾಗೂ ಪುರಾತತ್ವ ಸ್ಥಳಗಳ ಉತ್ಖನನಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ’ ಎಂದು ಹಂಪಿ, ಕಮಲಾಪುರದ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಉಪನಿರ್ದೇಶಕ ಡಾ. ಆರ್. ಶೇಜೇಶ್ವರ ತಿಳಿಸಿದರು.</p>.<p>‘ತೆಕ್ಕಲಕೋಟೆಯ ಬಳೇ ತೋಟದ ಬಳಿ, ಗೌಡರ ಮೂಲೆ ಮತ್ತು ಹಿರೇಹರ್ಲ ಬಳಿ ಉತ್ಖನನ ನಡೆಸಲು ಸ್ಥಳ ಗುರುತಿಸಲಾಗಿದೆ. ಒಟ್ಟು ಐವರು ತಜ್ಞರ ನೇತೃತ್ವದಲ್ಲಿ ಉತ್ಖನನ ಮತ್ತು ಅಧ್ಯಯನ ನಡೆಯಲಿದೆ’ ಎಂದು ಅವರು ತಿಳಿಸಿದರು.</p>.<p>ಉತ್ಖನನ ತಂಡದ ಸಹನಿರ್ದೇಶಕಿ, ಅಮೆರಿಕದ ಹಾಟ್ವಿಕ್ ವಿಶ್ವವಿದ್ಯಾಲಯದ ಪ್ರೊ. ನಮಿತಾ ಎಸ್ ಸುಗಂಧಿ ಮಾತನಾಡಿ, ‘ಪ್ರಾಗೈತಿಹಾಸಿಕ ಕಾಲದ ಅಧ್ಯಯನದ ದೃಷ್ಟಿಯಿಂದ ಈ ಉತ್ಪನನ ಅಗತ್ಯವಾಗಿದೆ. 2015ರಲ್ಲಿ ಒಮ್ಮೆ ಉತ್ಖನನ ನಡೆದಿತ್ತು’ ಎಂದರು. </p>.<p>ಉತ್ಪನನ ತಂಡದಲ್ಲಿ ಅಜೀಂ ಪ್ರೇಮ್ಜೀ ವಿಶ್ವವಿದ್ಯಾಲಯದ ಪ್ರೊ. ವಿನಾಯಕ, ಅಶೋಕ ವಿಶ್ವವಿದ್ಯಾಲಯದ ಆಕಾಶ್ ಶ್ರೀನಿವಾಸ, ಮೊಹಾಲಿಯ ಮಿಹಿರ್ ತಂಗಸಾಲಿ, ವೈಷಿ ರಾಯ್, ದೆಹಲಿಯ ಸಹಾಯಕ ಜಿಲ್ಲಾಧಿಕಾರಿ ದೇವೇಂದ್ರ ಸಿಂಗ್ ಚೌಧರಿ, ಸಂಶೋಧನಾರ್ಥಿ ಅಶೋಕ್ ಅಬಕಾರಿ ಇದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>