<p>ಕಂಪ್ಲಿ: ದೇವಸ್ಥಾನ ಪ್ರವೇಶಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ಶನಿವಾರ ಎರಡು ಗುಂಪುಗಳ ನಡುವೆ ಘರ್ಷಣೆ, ವಾಗ್ವಾದ ನಡೆದಿದೆ.</p>.<p>ಎಚ್. ಹುಲುಗಪ್ಪ ಎಂಬುವವರು ಶನಿವಾರ ಬೆಳಿಗ್ಗೆ ಗ್ರಾಮದ ಆಂಜನೇಯ ದೇಗುಲಕ್ಕೆ ತೆರಳಿದ್ದರು. ಆಗ ದೇವಸ್ಥಾನ ಆವರಣ ಶುಚಿಗೊಳಿಸುತ್ತಿದ್ದ ಪೂಜಾರಿ ವಿಶಾಲಾಕ್ಷಿ, ಸ್ವಲ್ಪ ಕಾಲ ತಡೆದು ಬರುವಂತೆ ಹುಲುಗಪ್ಪ ಅವರಿಗೆ ತಿಳಿಸಿದರು ಎನ್ನಲಾಗಿದೆ.</p>.<p>‘ನಾನು ದೇವಸ್ಥಾನ ಪ್ರವೇಶಿಸುವುದನ್ನು ಉದ್ದೇಶಪೂರ್ವಕವಾಗಿ ತಡೆದಿದ್ದೀರಿ’ ಎಂದು ಆಕ್ರೋಶಗೊಂಡ ಹುಲುಗಪ್ಪ, ಪೂಜಾರಿಯನ್ನು ನಿಂದಿಸಿದರು ಎನ್ನುವ ಆರೋಪ ಕೇಳಿಬಂದಿದೆ.</p>.<p>ವಿಷಯ ಗ್ರಾಮದಲ್ಲಿ ಹರಡುತ್ತಿದ್ದಂತೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಕೆಲವರ ಮೇಲೆ ಹಲ್ಲೆಯೂ ನಡೆಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.<p>ವಿಷಯ ತಿಳಿದ ಕುರುಗೋಡು ಸಿಪಿಐ ವಿಶ್ವನಾಥ ಹಿರೇಗೌಡರ್, ಕುಡುತಿನಿ ಪಿಎಸ್ಐ ಹುಲಿಗೇಶ ಎಚ್. ಓಂಕಾರ್, ಕುರುಗೋಡು ಪಿಎಸ್ಐ ಸುಪ್ರೀತ್ ಸಿಬ್ಬಂದಿಯೊಂದಿಗೆ ಧಾವಿಸಿ ಗ್ರಾಮದಲ್ಲಿ ಬಂದೋಬಸ್ತ್ ಕೈಗೊಂಡಿದ್ದಾರೆ. ಗ್ರಾಮದಲ್ಲಿ ವಾತಾವರಣ ಸದ್ಯ ಯಥಾಸ್ಥಿತಿ ಮುಂದುವರಿದಿದೆ.</p>.<p>ಮೇ 21 ಮತ್ತು 22ರಂದು ಗ್ರಾಮ ದೇವತೆ ಕುಂಭೋತ್ಸವವನ್ನು ಗ್ರಾಮದ ಎಲ್ಲರು ಸೇರಿ ಸೌಹಾರ್ದ, ಸಂಭ್ರಮದಿಂದ ಆಚರಿಸಿದ್ದರು. ಇದರ ಬೆನ್ನಲ್ಲೆ ಗ್ರಾಮದಲ್ಲಿ ಪ್ರಸ್ತುತ ಘಟನೆ ನಡೆದಿದ್ದು, ಹಲವರ ಅಸಮಾಧಾನಕ್ಕೆ ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಂಪ್ಲಿ: ದೇವಸ್ಥಾನ ಪ್ರವೇಶಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ಶನಿವಾರ ಎರಡು ಗುಂಪುಗಳ ನಡುವೆ ಘರ್ಷಣೆ, ವಾಗ್ವಾದ ನಡೆದಿದೆ.</p>.<p>ಎಚ್. ಹುಲುಗಪ್ಪ ಎಂಬುವವರು ಶನಿವಾರ ಬೆಳಿಗ್ಗೆ ಗ್ರಾಮದ ಆಂಜನೇಯ ದೇಗುಲಕ್ಕೆ ತೆರಳಿದ್ದರು. ಆಗ ದೇವಸ್ಥಾನ ಆವರಣ ಶುಚಿಗೊಳಿಸುತ್ತಿದ್ದ ಪೂಜಾರಿ ವಿಶಾಲಾಕ್ಷಿ, ಸ್ವಲ್ಪ ಕಾಲ ತಡೆದು ಬರುವಂತೆ ಹುಲುಗಪ್ಪ ಅವರಿಗೆ ತಿಳಿಸಿದರು ಎನ್ನಲಾಗಿದೆ.</p>.<p>‘ನಾನು ದೇವಸ್ಥಾನ ಪ್ರವೇಶಿಸುವುದನ್ನು ಉದ್ದೇಶಪೂರ್ವಕವಾಗಿ ತಡೆದಿದ್ದೀರಿ’ ಎಂದು ಆಕ್ರೋಶಗೊಂಡ ಹುಲುಗಪ್ಪ, ಪೂಜಾರಿಯನ್ನು ನಿಂದಿಸಿದರು ಎನ್ನುವ ಆರೋಪ ಕೇಳಿಬಂದಿದೆ.</p>.<p>ವಿಷಯ ಗ್ರಾಮದಲ್ಲಿ ಹರಡುತ್ತಿದ್ದಂತೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಕೆಲವರ ಮೇಲೆ ಹಲ್ಲೆಯೂ ನಡೆಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.<p>ವಿಷಯ ತಿಳಿದ ಕುರುಗೋಡು ಸಿಪಿಐ ವಿಶ್ವನಾಥ ಹಿರೇಗೌಡರ್, ಕುಡುತಿನಿ ಪಿಎಸ್ಐ ಹುಲಿಗೇಶ ಎಚ್. ಓಂಕಾರ್, ಕುರುಗೋಡು ಪಿಎಸ್ಐ ಸುಪ್ರೀತ್ ಸಿಬ್ಬಂದಿಯೊಂದಿಗೆ ಧಾವಿಸಿ ಗ್ರಾಮದಲ್ಲಿ ಬಂದೋಬಸ್ತ್ ಕೈಗೊಂಡಿದ್ದಾರೆ. ಗ್ರಾಮದಲ್ಲಿ ವಾತಾವರಣ ಸದ್ಯ ಯಥಾಸ್ಥಿತಿ ಮುಂದುವರಿದಿದೆ.</p>.<p>ಮೇ 21 ಮತ್ತು 22ರಂದು ಗ್ರಾಮ ದೇವತೆ ಕುಂಭೋತ್ಸವವನ್ನು ಗ್ರಾಮದ ಎಲ್ಲರು ಸೇರಿ ಸೌಹಾರ್ದ, ಸಂಭ್ರಮದಿಂದ ಆಚರಿಸಿದ್ದರು. ಇದರ ಬೆನ್ನಲ್ಲೆ ಗ್ರಾಮದಲ್ಲಿ ಪ್ರಸ್ತುತ ಘಟನೆ ನಡೆದಿದ್ದು, ಹಲವರ ಅಸಮಾಧಾನಕ್ಕೆ ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>