<p><strong>ತೆಕ್ಕಲಕೋಟೆ:</strong> ಸಮೀಪದ ಮುಕ್ಕುಂದೆ ಗ್ರಾಮದ ತುಂಗಭದ್ರಾ ನದಿಯ ನಡುಗಡ್ಡೆಯ ಗಡ್ಡೆ ಖಾದರ್ ಬಾಷ ಖಾದ್ರಿ ಅವರ 395ನೇ ವರ್ಷದ ಉರುಸ್ ಸಂದರ್ಭದಲ್ಲಿ ಗುರುವಾರ ನೂಕುನುಗ್ಗಲು ಉಂಟಾಗಿ ತೆಪ್ಪದಲ್ಲಿ ನೀರು ತುಂಬಿ ಮುಗುಚಿದೆ. </p>.<p>ಸಾವಿರಾರು ಪ್ರಮಾಣದಲ್ಲಿ ಭಕ್ತರು ಬಂದಿದ್ದರಿಂದ ಕೇವಲ ಆರು ತೆಪ್ಪ ಇದ್ದು, ತೆಪ್ಪ ಇಳಿಯಲು ನೂಕುನುಗ್ಗಲು ಉಂಟಾಗಿದೆ. ಒಂದು ತೆಪ್ಪದಲ್ಲಿ 20 ಕ್ಕಿಂತಲೂ ಹೆಚ್ಚು ಜನ ಕುಳಿತಿದ್ದರು, ಅದೃಷ್ಟವಶಾತ್ ದಡದಲ್ಲಿ ಈ ಘಟನೆ ಜರುಗಿದ್ದು ಯಾವುದೇ ಪ್ರಾಣಾಪಾಯವಾಗಿಲ್ಲ. ಇದೇ ರೀತಿ ನಾಲ್ಕು ತೆಪ್ಪಗಳು ಮುಗುಚಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p>ರಾಯಚೂರು, ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಗಳಿಂದ, ಆಂಧ್ರದಿಂದಲೂ ಸಾವಿರಾರು ಭಕ್ತರು ಆಗಮಿಸುತ್ತಾರೆ. ಸಿರುಗುಪ್ಪ, ಕಂಪ್ಲಿ, ತೆಕ್ಕಲಕೋಟೆ ಮಾರ್ಗವಾಗಿ ಉರುಸ್ಗೆ ತೆರಳುವವರಿಗೆ ಹೆರಕಲ್ಲು ಗ್ರಾಮದ ಬಳಿ ಇರುವ ಹರಿಗೋಲು ಘಾಟ್ ಮಾತ್ರ ಏಕೈಕ ಮಾರ್ಗವಾಗಿದ್ದು, ಹರಿಗೋಲು (ತೆಪ್ಪ) ಮೂಲಕವೇ ಸಾಗಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಕ್ಕಲಕೋಟೆ:</strong> ಸಮೀಪದ ಮುಕ್ಕುಂದೆ ಗ್ರಾಮದ ತುಂಗಭದ್ರಾ ನದಿಯ ನಡುಗಡ್ಡೆಯ ಗಡ್ಡೆ ಖಾದರ್ ಬಾಷ ಖಾದ್ರಿ ಅವರ 395ನೇ ವರ್ಷದ ಉರುಸ್ ಸಂದರ್ಭದಲ್ಲಿ ಗುರುವಾರ ನೂಕುನುಗ್ಗಲು ಉಂಟಾಗಿ ತೆಪ್ಪದಲ್ಲಿ ನೀರು ತುಂಬಿ ಮುಗುಚಿದೆ. </p>.<p>ಸಾವಿರಾರು ಪ್ರಮಾಣದಲ್ಲಿ ಭಕ್ತರು ಬಂದಿದ್ದರಿಂದ ಕೇವಲ ಆರು ತೆಪ್ಪ ಇದ್ದು, ತೆಪ್ಪ ಇಳಿಯಲು ನೂಕುನುಗ್ಗಲು ಉಂಟಾಗಿದೆ. ಒಂದು ತೆಪ್ಪದಲ್ಲಿ 20 ಕ್ಕಿಂತಲೂ ಹೆಚ್ಚು ಜನ ಕುಳಿತಿದ್ದರು, ಅದೃಷ್ಟವಶಾತ್ ದಡದಲ್ಲಿ ಈ ಘಟನೆ ಜರುಗಿದ್ದು ಯಾವುದೇ ಪ್ರಾಣಾಪಾಯವಾಗಿಲ್ಲ. ಇದೇ ರೀತಿ ನಾಲ್ಕು ತೆಪ್ಪಗಳು ಮುಗುಚಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p>ರಾಯಚೂರು, ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಗಳಿಂದ, ಆಂಧ್ರದಿಂದಲೂ ಸಾವಿರಾರು ಭಕ್ತರು ಆಗಮಿಸುತ್ತಾರೆ. ಸಿರುಗುಪ್ಪ, ಕಂಪ್ಲಿ, ತೆಕ್ಕಲಕೋಟೆ ಮಾರ್ಗವಾಗಿ ಉರುಸ್ಗೆ ತೆರಳುವವರಿಗೆ ಹೆರಕಲ್ಲು ಗ್ರಾಮದ ಬಳಿ ಇರುವ ಹರಿಗೋಲು ಘಾಟ್ ಮಾತ್ರ ಏಕೈಕ ಮಾರ್ಗವಾಗಿದ್ದು, ಹರಿಗೋಲು (ತೆಪ್ಪ) ಮೂಲಕವೇ ಸಾಗಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>