<p><strong>ಬಳ್ಳಾರಿ</strong>: ಆಂಧ್ರ ಗಡಿಭಾಗದ ಮಾಳ ಮಲ್ಲೇಶ್ವರ ದೇವಸ್ಥಾನದಲ್ಲಿ ವಿಜಯ ದಶಮಿ ದಿನವಾದ ಬುಧವಾರ ದೇವರನ್ನು ತಮ್ಮೂರಿಗೆ ಕೊಂಡೊಯ್ಯಲು ಭಕ್ತರು ಬಡಿಗೆಗಳನ್ನು ಹಿಡಿದು ಬಡಿದಾಡುವ ಮೂಲಕ ಜಾತ್ರೆ ಆಚರಿಸಿದರು. ಈ ಬಡಿದಾಟದಲ್ಲಿ 80ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.</p>.<p>ವಿಜಯದಶಮಿ ದಿನ ಮಧ್ಯ ರಾತ್ರಿ ಆಂಧ್ರದ ದೇವರಗಟ್ಟು ಗ್ರಾಮದಲ್ಲಿ ನಡೆಯುವ ಮಾಳ ಮಲ್ಲೇಶ್ವರ ಜಾತ್ರೆಯಲ್ಲಿ ಜನ ಬಡಿಗೆಗಳನ್ನು ಹಿಡಿದು ಬಡಿದಾಡಿದರು. 20 ಸಾವಿರಕ್ಕೂ ಹೆ್ಚ್ಚು ಜನ ಜಾತ್ರೆಗೆ ಬಂದಿದ್ದರು.</p>.<p>ದೇವರುಗಟ್ಟು ಗ್ರಾಮ ಕರ್ನಾಟಕದ ಬಳ್ಳಾರಿ ಜಿಲ್ಲೆಯ ಸಿರಿಗುಪ್ಪ ತಾಲ್ಲೂಕಿನ ಗಡಿಗೆ ತಾಗಿಕೊಂಡಿದೆ. ಈ ಗ್ರಾಮದಲ್ಲಿ ಪ್ರತಿ ವರ್ಷ ಮಾಳ ಮಲ್ಲೇಶ್ವರ ಜಾತ್ರೆ ನಡೆಯುತ್ತೆ. ಈ ಜಾತ್ರೆಯಲ್ಲಿ ಕರ್ನಾಟಕದಿಂದಲೂ ಭಕ್ತರು ತೆರಳಿದ್ದರು. ಜಾತ್ರೆಗೆ ಬಂದಿದ್ದ ಭಕ್ತರು ಮಧ್ಯರಾತ್ರಿ 1 ಗಂಟೆಯಿಂದ ಬೆಳಿಗ್ಗೆ 5ರ ವರಗೆ ಬಡಿಗೆಗಳನ್ನು ಹಿಡಿದು ಬಡಿದಾಡಿದರು. ಇದು ಗ್ರಾಮ, ಗ್ರಾಮಗಳ ನಡುವೆ ನಡೆಯುವ ಸಾಂಪ್ರದಾಯಕ ಬಡಿದಾಟ.</p>.<p>ವಿಜಯದಶಮಿ ದಿನ ಮಧ್ಯ ರಾತ್ರಿ ದೇವರನ್ನು ತಮ್ಮೂರಿಗೆ ಕೊಂಡೊಯ್ಯಲು ಬಡಿದಾಟ ನಡೆಯಿತು. ಆಂಧ್ರದ ಕರ್ನೂಲ್ ಜಿಲ್ಲೆ ಆಲೂರ ಮಂಡಲದ ನೆಣಕಿ ಗ್ರಾಮಕ್ಕೆ ಸೇರಿದ ಅರಣ್ಯದ ಗುಡ್ಡದ ಮೇಲೆ ಮಾಳ ಮಲ್ಲೇಶ್ವರ ದೇವಸ್ಥಾನವಿದೆ. ಇದಕ್ಕೆ ದೇವರ ಗುಡ್ಡ ಎಂದು ಕರೆಯಲಾಗುತ್ತದೆ.</p>.<p>ಇಲ್ಲಿನ ಬಹುತೇಕ ಜನ ಕನ್ನಡ ಭಾಷಿಕರೇ ಆಗಿರುವುದರಿಂದ ಕಾರಣಿಕ ಕನ್ನಡದಲ್ಲೇ ನುಡಿಯುವುದು ವಿಶೇಷ. ಈ ದೃಶ್ಯ ನೋಡಲು ಸಾವಿರಾರು ಭಕ್ತರು ಆಗಮಿಸಿದ್ದರು. ಬಡಿಗೆ ಬಡಿದಾಟದಲ್ಲಿ ವಿದ್ಯಾವಂತರು ಭಾಗವಹಿಸಿದ್ದು ಮತ್ತೊಂದು ವಿಶೇಷ.</p>.<p>ರಾತ್ರಿ ನಡೆದ ಮಾಳಮ್ಮ ಮತ್ತು ಮಲ್ಲೇಶ್ವರ ಸ್ವಾಮಿಯ ಕಲ್ಯಾಣೋತ್ಸವದಲ್ಲಿ ಉತ್ಸವ ಮೂರ್ತಿ ಮತ್ತು ಪಲ್ಲಕ್ಕಿಯನ್ನು ಹೊತ್ತು ನೆಣಕಿ ಗ್ರಾಮದ ಭಕ್ತರು ದೇವರ ಗುಡ್ಡಕ್ಕೆ ಬಂದರು. ಈ ವೇಳೆ ಕಬ್ಬಿಣದ ಸಲಾಕೆ ಸುತ್ತಿದ ಕೋಲು ಹಿಡಿದು ತಂಡ, ತಂಡಗಳಲ್ಲಿ ತಮಟೆ ಬಾರಿಸುತ್ತ, ಹಿಲಾಲು ಉರಿಸುತ್ತಾ, ಕುಣಿಯುತ್ತಾ ಉತ್ಸವ ಮೂರ್ತಿ ತಂದರು.</p>.<p>ಇದು ನೂರಾರು ವರ್ಷಗಳಿಂದ ನಡೆದು ಬಂದಿರುವ ಪದ್ಧತಿ. ಈ ಸಂಭ್ರಮದಲ್ಲಿ ಜನರ ಮಧ್ಯೆ ನಡೆಯುವ ಹೊಡೆದಾಟದಲ್ಲಿ ಏನೇ ಅನಾಹುತವಾದರೂ ಯಾರೂ ಹೊಣೆ ಅಲ್ಲ. ನೆಣಕಿ, ಎಳ್ಳಾರ್ತಿ, ವಿರುಪಾಪುರ, ಸುಳುವಾಯಿ ಮತ್ತಿತರ ಗ್ರಾಮಗಳವರು ಉತ್ಸವ ಮೂರ್ತಿಗಳನ್ನು ತಮ್ಮ ಗ್ರಾಮಕ್ಕೆ ಒಯ್ಯಲು ಕಾದಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಆಂಧ್ರ ಗಡಿಭಾಗದ ಮಾಳ ಮಲ್ಲೇಶ್ವರ ದೇವಸ್ಥಾನದಲ್ಲಿ ವಿಜಯ ದಶಮಿ ದಿನವಾದ ಬುಧವಾರ ದೇವರನ್ನು ತಮ್ಮೂರಿಗೆ ಕೊಂಡೊಯ್ಯಲು ಭಕ್ತರು ಬಡಿಗೆಗಳನ್ನು ಹಿಡಿದು ಬಡಿದಾಡುವ ಮೂಲಕ ಜಾತ್ರೆ ಆಚರಿಸಿದರು. ಈ ಬಡಿದಾಟದಲ್ಲಿ 80ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.</p>.<p>ವಿಜಯದಶಮಿ ದಿನ ಮಧ್ಯ ರಾತ್ರಿ ಆಂಧ್ರದ ದೇವರಗಟ್ಟು ಗ್ರಾಮದಲ್ಲಿ ನಡೆಯುವ ಮಾಳ ಮಲ್ಲೇಶ್ವರ ಜಾತ್ರೆಯಲ್ಲಿ ಜನ ಬಡಿಗೆಗಳನ್ನು ಹಿಡಿದು ಬಡಿದಾಡಿದರು. 20 ಸಾವಿರಕ್ಕೂ ಹೆ್ಚ್ಚು ಜನ ಜಾತ್ರೆಗೆ ಬಂದಿದ್ದರು.</p>.<p>ದೇವರುಗಟ್ಟು ಗ್ರಾಮ ಕರ್ನಾಟಕದ ಬಳ್ಳಾರಿ ಜಿಲ್ಲೆಯ ಸಿರಿಗುಪ್ಪ ತಾಲ್ಲೂಕಿನ ಗಡಿಗೆ ತಾಗಿಕೊಂಡಿದೆ. ಈ ಗ್ರಾಮದಲ್ಲಿ ಪ್ರತಿ ವರ್ಷ ಮಾಳ ಮಲ್ಲೇಶ್ವರ ಜಾತ್ರೆ ನಡೆಯುತ್ತೆ. ಈ ಜಾತ್ರೆಯಲ್ಲಿ ಕರ್ನಾಟಕದಿಂದಲೂ ಭಕ್ತರು ತೆರಳಿದ್ದರು. ಜಾತ್ರೆಗೆ ಬಂದಿದ್ದ ಭಕ್ತರು ಮಧ್ಯರಾತ್ರಿ 1 ಗಂಟೆಯಿಂದ ಬೆಳಿಗ್ಗೆ 5ರ ವರಗೆ ಬಡಿಗೆಗಳನ್ನು ಹಿಡಿದು ಬಡಿದಾಡಿದರು. ಇದು ಗ್ರಾಮ, ಗ್ರಾಮಗಳ ನಡುವೆ ನಡೆಯುವ ಸಾಂಪ್ರದಾಯಕ ಬಡಿದಾಟ.</p>.<p>ವಿಜಯದಶಮಿ ದಿನ ಮಧ್ಯ ರಾತ್ರಿ ದೇವರನ್ನು ತಮ್ಮೂರಿಗೆ ಕೊಂಡೊಯ್ಯಲು ಬಡಿದಾಟ ನಡೆಯಿತು. ಆಂಧ್ರದ ಕರ್ನೂಲ್ ಜಿಲ್ಲೆ ಆಲೂರ ಮಂಡಲದ ನೆಣಕಿ ಗ್ರಾಮಕ್ಕೆ ಸೇರಿದ ಅರಣ್ಯದ ಗುಡ್ಡದ ಮೇಲೆ ಮಾಳ ಮಲ್ಲೇಶ್ವರ ದೇವಸ್ಥಾನವಿದೆ. ಇದಕ್ಕೆ ದೇವರ ಗುಡ್ಡ ಎಂದು ಕರೆಯಲಾಗುತ್ತದೆ.</p>.<p>ಇಲ್ಲಿನ ಬಹುತೇಕ ಜನ ಕನ್ನಡ ಭಾಷಿಕರೇ ಆಗಿರುವುದರಿಂದ ಕಾರಣಿಕ ಕನ್ನಡದಲ್ಲೇ ನುಡಿಯುವುದು ವಿಶೇಷ. ಈ ದೃಶ್ಯ ನೋಡಲು ಸಾವಿರಾರು ಭಕ್ತರು ಆಗಮಿಸಿದ್ದರು. ಬಡಿಗೆ ಬಡಿದಾಟದಲ್ಲಿ ವಿದ್ಯಾವಂತರು ಭಾಗವಹಿಸಿದ್ದು ಮತ್ತೊಂದು ವಿಶೇಷ.</p>.<p>ರಾತ್ರಿ ನಡೆದ ಮಾಳಮ್ಮ ಮತ್ತು ಮಲ್ಲೇಶ್ವರ ಸ್ವಾಮಿಯ ಕಲ್ಯಾಣೋತ್ಸವದಲ್ಲಿ ಉತ್ಸವ ಮೂರ್ತಿ ಮತ್ತು ಪಲ್ಲಕ್ಕಿಯನ್ನು ಹೊತ್ತು ನೆಣಕಿ ಗ್ರಾಮದ ಭಕ್ತರು ದೇವರ ಗುಡ್ಡಕ್ಕೆ ಬಂದರು. ಈ ವೇಳೆ ಕಬ್ಬಿಣದ ಸಲಾಕೆ ಸುತ್ತಿದ ಕೋಲು ಹಿಡಿದು ತಂಡ, ತಂಡಗಳಲ್ಲಿ ತಮಟೆ ಬಾರಿಸುತ್ತ, ಹಿಲಾಲು ಉರಿಸುತ್ತಾ, ಕುಣಿಯುತ್ತಾ ಉತ್ಸವ ಮೂರ್ತಿ ತಂದರು.</p>.<p>ಇದು ನೂರಾರು ವರ್ಷಗಳಿಂದ ನಡೆದು ಬಂದಿರುವ ಪದ್ಧತಿ. ಈ ಸಂಭ್ರಮದಲ್ಲಿ ಜನರ ಮಧ್ಯೆ ನಡೆಯುವ ಹೊಡೆದಾಟದಲ್ಲಿ ಏನೇ ಅನಾಹುತವಾದರೂ ಯಾರೂ ಹೊಣೆ ಅಲ್ಲ. ನೆಣಕಿ, ಎಳ್ಳಾರ್ತಿ, ವಿರುಪಾಪುರ, ಸುಳುವಾಯಿ ಮತ್ತಿತರ ಗ್ರಾಮಗಳವರು ಉತ್ಸವ ಮೂರ್ತಿಗಳನ್ನು ತಮ್ಮ ಗ್ರಾಮಕ್ಕೆ ಒಯ್ಯಲು ಕಾದಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>