<p><strong>ಬಳ್ಳಾರಿ:</strong> ‘ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ (ಎಪಿಎಂಸಿ) 10 ವರ್ಷಕ್ಕೂ ಹೆಚ್ಚು ಸಮಯದಿಂದ ಒಂದೇ ಕಡೆ ಕೆಲಸ ಮಾಡುತ್ತಿರುವ ಸಿಬ್ಬಂದಿ ಹಾಗೂ ಅಧಿಕಾರಿಗಳ ಪಟ್ಟಿ ಸಿದ್ಧಪಡಿಸಿ’ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. </p>.<p>ಬಳ್ಳಾರಿಯ ಎಪಿಸಿಎಂಸಿ ಮಾರುಕಟ್ಟೆಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಆಡಳಿತ ಮಂಡಳಿ, ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಭೆ ನಡೆಸಿದ ಅವರು, ‘ಹಲವು ಸಿಬ್ಬಂದಿ ದೀರ್ಘಾವಧಿಯಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದಾರೆಯೇ’ ಎಂದು ಕೇಳಿ ಆಶ್ಚರ್ಯ ವ್ಯಕ್ತಪಡಿಸಿದರು. </p>.<p>‘ರಾಜ್ಯದ ಎಪಿಎಂಸಿಗಳಲ್ಲಿ ಯಾವ ಸಿಬ್ಬಂದಿ ಒಂದೇ ಕಡೆ 10 ವರ್ಷದಿಂದ ಕೆಲಸ ಮಾಡುತ್ತಿದ್ದಾರೆ? ಅವರ ವಿರುದ್ಧ ಇರುವ ದೂರುಗಳು ಎಷ್ಟು? ಭ್ರಷ್ಟಾಚಾರದ ಪ್ರಕರಣಗಳು ಎಷ್ಟು? ಎಂಬುದನ್ನು ಪಟ್ಟಿ ಮಾಡಿ ಕೊಡಿ’ ಎಂದು ಎಪಿಎಂಸಿ ನಿರ್ದೇಶಕ ಶಿವಾನಂದ ಕಾಪ್ಸೆ ಅವರಿಗೆ ಸೂಚಿಸಿದರು. </p>.<p>‘ಎಪಿಎಂಸಿಗಳಲ್ಲಿ ಮಧ್ಯವರ್ತಿಗಳಿಗೆ ನೀಡಲಾಗುವ ಪರವಾನಗಿ ಅವಧಿಯನ್ನು 10 ವರ್ಷ ಬದಲು 5 ವರ್ಷಕ್ಕೆ ಮಿತಿಗೊಳಿಸಲು ಚಿಂತನೆ ನಡೆದಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ (ಎಪಿಎಂಸಿ) 10 ವರ್ಷಕ್ಕೂ ಹೆಚ್ಚು ಸಮಯದಿಂದ ಒಂದೇ ಕಡೆ ಕೆಲಸ ಮಾಡುತ್ತಿರುವ ಸಿಬ್ಬಂದಿ ಹಾಗೂ ಅಧಿಕಾರಿಗಳ ಪಟ್ಟಿ ಸಿದ್ಧಪಡಿಸಿ’ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. </p>.<p>ಬಳ್ಳಾರಿಯ ಎಪಿಸಿಎಂಸಿ ಮಾರುಕಟ್ಟೆಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಆಡಳಿತ ಮಂಡಳಿ, ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಭೆ ನಡೆಸಿದ ಅವರು, ‘ಹಲವು ಸಿಬ್ಬಂದಿ ದೀರ್ಘಾವಧಿಯಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದಾರೆಯೇ’ ಎಂದು ಕೇಳಿ ಆಶ್ಚರ್ಯ ವ್ಯಕ್ತಪಡಿಸಿದರು. </p>.<p>‘ರಾಜ್ಯದ ಎಪಿಎಂಸಿಗಳಲ್ಲಿ ಯಾವ ಸಿಬ್ಬಂದಿ ಒಂದೇ ಕಡೆ 10 ವರ್ಷದಿಂದ ಕೆಲಸ ಮಾಡುತ್ತಿದ್ದಾರೆ? ಅವರ ವಿರುದ್ಧ ಇರುವ ದೂರುಗಳು ಎಷ್ಟು? ಭ್ರಷ್ಟಾಚಾರದ ಪ್ರಕರಣಗಳು ಎಷ್ಟು? ಎಂಬುದನ್ನು ಪಟ್ಟಿ ಮಾಡಿ ಕೊಡಿ’ ಎಂದು ಎಪಿಎಂಸಿ ನಿರ್ದೇಶಕ ಶಿವಾನಂದ ಕಾಪ್ಸೆ ಅವರಿಗೆ ಸೂಚಿಸಿದರು. </p>.<p>‘ಎಪಿಎಂಸಿಗಳಲ್ಲಿ ಮಧ್ಯವರ್ತಿಗಳಿಗೆ ನೀಡಲಾಗುವ ಪರವಾನಗಿ ಅವಧಿಯನ್ನು 10 ವರ್ಷ ಬದಲು 5 ವರ್ಷಕ್ಕೆ ಮಿತಿಗೊಳಿಸಲು ಚಿಂತನೆ ನಡೆದಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>