<p><strong>ಕೂಡ್ಲಿಗಿ:</strong> ತಾಲ್ಲೂಕಿನ ಈಚಲಬೊಮ್ಮನಹಳ್ಳಿಯ ಹೊರವಲಯದ ಉಡಸಲಮ್ಮ ದೇವಸ್ಥಾನದಲ್ಲಿ ಕಳವು ಮಾಡಿದ್ದ ಆರೋಪದಡಿ ಇಬ್ಬರನ್ನು ಶನಿವಾರ ಬಂಧಿಸಿದ ಕೂಡ್ಲಿಗಿ ಪೊಲೀಸರು, ಕಳವಾಗಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಹಡಗಲಿ ತಾಲ್ಲೂಕಿನ ಕೆಂಚಮಲ್ಲನಹಳ್ಳಿಯ ಹಡಪದ ವೀರೇಶ್ ಹಾಗೂ ಕೂಡ್ಲಿಗಿ ತಾಲ್ಲೂಕಿನ ಪಾಲಯ್ಯನಕೋಟೆ ಗ್ರಾಮದ ಎಚ್. ಹನುಮಂತಪ್ಪ ಬಂಧಿತ ಆರೋಪಿಗಳು.</p>.<p>ಆಗಿದ್ದೇನು?: ‘ನವೆಂಬರ್ 23ರಂದು ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು, ತಿಜೋರಿಯಲ್ಲಿದ್ದ ₹1.46 ಲಕ್ಷ ಮೌಲ್ಯದ ದೇವರ ಮೂರ್ತಿ ಆಭರಣ, ₹12,900 ಮೌಲ್ಯದ ಬಂಗಾರದ ತಾಳಿ, ₹26,153 ಮೌಲ್ಯದ ಕಂಚಿನ ಆಭರಣಗಳು, ₹10 ಸಾವಿರ ಬೆಲೆ ಬಾಳುವ ಆಂಪಿ ಪ್ಲೇಯರ್ ಸೇರಿದಂತೆ ಒಟ್ಟು ₹1.95 ಲಕ್ಷ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶಪ್ಪ ಮಲ್ಲಾಪುರ ಮಾರ್ಗದರ್ಶನದಲ್ಲಿ ಸಿಪಿಐ ಸುರೇಶ್ ಎಚ್. ತಳವಾರ್, ಪಿಎಸ್ಐ ಸಿ. ಪ್ರಕಾಶ್, ಸಿಬ್ಬಂದಿ ಆಂಜಿನಪ್ಪ, ಹಸನುಲ್ಲಾ, ಜಿ. ಹಂಪಣ್ಣ, ಬಿ. ರಾಘವೇಂದ್ರ, ಪ್ರವೀಣ್ ಕುಮಾರ್, ಶಿವಕುಮಾರ್ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡ್ಲಿಗಿ:</strong> ತಾಲ್ಲೂಕಿನ ಈಚಲಬೊಮ್ಮನಹಳ್ಳಿಯ ಹೊರವಲಯದ ಉಡಸಲಮ್ಮ ದೇವಸ್ಥಾನದಲ್ಲಿ ಕಳವು ಮಾಡಿದ್ದ ಆರೋಪದಡಿ ಇಬ್ಬರನ್ನು ಶನಿವಾರ ಬಂಧಿಸಿದ ಕೂಡ್ಲಿಗಿ ಪೊಲೀಸರು, ಕಳವಾಗಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಹಡಗಲಿ ತಾಲ್ಲೂಕಿನ ಕೆಂಚಮಲ್ಲನಹಳ್ಳಿಯ ಹಡಪದ ವೀರೇಶ್ ಹಾಗೂ ಕೂಡ್ಲಿಗಿ ತಾಲ್ಲೂಕಿನ ಪಾಲಯ್ಯನಕೋಟೆ ಗ್ರಾಮದ ಎಚ್. ಹನುಮಂತಪ್ಪ ಬಂಧಿತ ಆರೋಪಿಗಳು.</p>.<p>ಆಗಿದ್ದೇನು?: ‘ನವೆಂಬರ್ 23ರಂದು ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು, ತಿಜೋರಿಯಲ್ಲಿದ್ದ ₹1.46 ಲಕ್ಷ ಮೌಲ್ಯದ ದೇವರ ಮೂರ್ತಿ ಆಭರಣ, ₹12,900 ಮೌಲ್ಯದ ಬಂಗಾರದ ತಾಳಿ, ₹26,153 ಮೌಲ್ಯದ ಕಂಚಿನ ಆಭರಣಗಳು, ₹10 ಸಾವಿರ ಬೆಲೆ ಬಾಳುವ ಆಂಪಿ ಪ್ಲೇಯರ್ ಸೇರಿದಂತೆ ಒಟ್ಟು ₹1.95 ಲಕ್ಷ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶಪ್ಪ ಮಲ್ಲಾಪುರ ಮಾರ್ಗದರ್ಶನದಲ್ಲಿ ಸಿಪಿಐ ಸುರೇಶ್ ಎಚ್. ತಳವಾರ್, ಪಿಎಸ್ಐ ಸಿ. ಪ್ರಕಾಶ್, ಸಿಬ್ಬಂದಿ ಆಂಜಿನಪ್ಪ, ಹಸನುಲ್ಲಾ, ಜಿ. ಹಂಪಣ್ಣ, ಬಿ. ರಾಘವೇಂದ್ರ, ಪ್ರವೀಣ್ ಕುಮಾರ್, ಶಿವಕುಮಾರ್ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>