<p>ಕುಡತಿನಿ (ತೋರಣಗಲ್ಲು): ಸಮೀಪದ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದ (ಬಿಟಿಪಿಎಸ್) ಗುತ್ತಿಗೆ ಕಾರ್ಮಿಕರಿಗೆ ಕನಿಷ್ಠ ವೇತನ ನೀಡದ ಬಿಟಿಪಿಎಸ್ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಾರ್ಮಿಕ ಹಿತರಕ್ಷಣಾ ವೇದಿಕೆಯ ಮುಖಂಡರು ಈಚೆಗೆ ಪಿಎಸ್ಐ ಶಾಂತಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.</p>.<p>ವೇದಿಕೆ ಅಧ್ಯಕ್ಷ ವಿ. ರಾಜಶೇಖರ್ ಮಾತನಾಡಿ, ‘1,600ಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕರು ಹಲವಾರು ವರ್ಷಗಳಿಂದ ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಿದ್ದಾರೆ. ಕನಿಷ್ಠ ವೇತನ ನೀಡದೆ ವಂಚಿಸಲಾಗಿದೆ. ಕನಿಷ್ಠ ವೇತನದ ಕಾಯ್ದೆ ಅನುಸಾರ ವೇತನ ನೀಡದಿದ್ದರೆ ಬಿಟಿಪಿಎಸ್ ಮುಖ್ಯದ್ವಾರದಲ್ಲಿ ಹೋರಾಟ ನಡೆಸಲಾಗುವುದು’ ಎಂದರು.</p>.<p>‘ಬಿಟಿಪಿಎಸ್ ಅಧಿಕಾರಿಗಳು, ಗುತ್ತಿಗೆದಾರರ ಸಭೆ ನಡೆಸಿ, ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಕುಡತಿನಿ ಠಾಣೆಯ ಪಿಎಸ್ಐ ಶಾಂತಮೂರ್ತಿ ಭರವಸೆ ನೀಡಿದರು.</p>.<p>ಮುಖಂಡರಾದ ವೆಂಕಟರಮಣ ಬಾಬು, ಮಹಾಂತೇಶ್ ಗೋಪಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಡತಿನಿ (ತೋರಣಗಲ್ಲು): ಸಮೀಪದ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದ (ಬಿಟಿಪಿಎಸ್) ಗುತ್ತಿಗೆ ಕಾರ್ಮಿಕರಿಗೆ ಕನಿಷ್ಠ ವೇತನ ನೀಡದ ಬಿಟಿಪಿಎಸ್ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಾರ್ಮಿಕ ಹಿತರಕ್ಷಣಾ ವೇದಿಕೆಯ ಮುಖಂಡರು ಈಚೆಗೆ ಪಿಎಸ್ಐ ಶಾಂತಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.</p>.<p>ವೇದಿಕೆ ಅಧ್ಯಕ್ಷ ವಿ. ರಾಜಶೇಖರ್ ಮಾತನಾಡಿ, ‘1,600ಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕರು ಹಲವಾರು ವರ್ಷಗಳಿಂದ ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಿದ್ದಾರೆ. ಕನಿಷ್ಠ ವೇತನ ನೀಡದೆ ವಂಚಿಸಲಾಗಿದೆ. ಕನಿಷ್ಠ ವೇತನದ ಕಾಯ್ದೆ ಅನುಸಾರ ವೇತನ ನೀಡದಿದ್ದರೆ ಬಿಟಿಪಿಎಸ್ ಮುಖ್ಯದ್ವಾರದಲ್ಲಿ ಹೋರಾಟ ನಡೆಸಲಾಗುವುದು’ ಎಂದರು.</p>.<p>‘ಬಿಟಿಪಿಎಸ್ ಅಧಿಕಾರಿಗಳು, ಗುತ್ತಿಗೆದಾರರ ಸಭೆ ನಡೆಸಿ, ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಕುಡತಿನಿ ಠಾಣೆಯ ಪಿಎಸ್ಐ ಶಾಂತಮೂರ್ತಿ ಭರವಸೆ ನೀಡಿದರು.</p>.<p>ಮುಖಂಡರಾದ ವೆಂಕಟರಮಣ ಬಾಬು, ಮಹಾಂತೇಶ್ ಗೋಪಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>