<p><strong>ಸಂಡೂರು:</strong> ಪಟ್ಟಣದಲ್ಲಿ ಭಾನುವಾರ ಬಿಜೆಪಿ ತಾಲ್ಲೂಕು ಘಟಕ, ಸಾರ್ವಜನಿಕರಿಂದ ತಿರಂಗಯಾತ್ರೆ - ಭಾರತ ಸೇನೆಯೊಂದಿಗೆ ರಾಷ್ಟ್ರ ರಕ್ಷಣೆಗಾಗಿ ನಾಗರಿಕರು ಎಂಬ ಕಾರ್ಯಕ್ರಮದ ಅಂಗವಾಗಿ ಬೃಹತ್ ರಾಷ್ಟ್ರ ಧ್ವಜ, ಬ್ಯಾನರ್ ದೊಂದಿಗೆ ಸಂಭ್ರಮದಿಂದ ಮೆರವಣಿಗೆ ನಡೆಸಿ ಸೈನಿಕರಿಗೆ ಕೃತಜ್ಞತೆ ಸಲ್ಲಿಸಿದರು.</p>.<p>ವೀರಕ್ತ ಮಠದ ಪ್ರಭುನಿರಂಜನ ಸ್ವಾಮಿಗಳು, ಭುಜಂಗನಗರ ಗ್ರಾಮದ ಮಠದ ಎರ್ರಿಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಮೆರವಣಿಗೆಯು ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿಯ ಆವರಣದಿಂದ ಆರಂಭವಾಗಿ ಕೆಇಬಿ ವೃತ್ತ, ಮರಾಠ ಸಮಾಜ, ವಾಲ್ಮೀಕಿ ವೃತ್ತದ ಮೂಲಕ ವಿಜಯ ವೃತ್ತದವರೆಗೂ ಮೆರವಣಿಗೆ ನಡೆಯಿತು.</p>.<p>ಮೆರವಣಿಗೆಯಲ್ಲಿ ಪಟ್ಟಣದ ಸಾರ್ವಜನಿಕರು, ಯುವಕರು, ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ಮೆರವಣಿಗೆಯಲ್ಲಿ ಭಾರತ ಮಾತಾ ಕೀ ಜೈ, ವಂದೇ ಮಾತಾರಂ, ಜೈ ಹಿಂದ್ ಘೋಷಣೆಗಳ ಮೊಳಗಿಸುವ ಮೂಲಕ ದೇಶದ ವೀರ ಸೈನಿಕರಿಗೆ ನಮನ ಅರ್ಪಿಸಿದರು.</p>.<p>ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್.ದಿವಾಕರ, ತಾಲ್ಲೂಕು ಮಂಡಲದ ಅಧ್ಯಕ್ಷ ನಾನಾಸಾಹೇಬ್ ನಿಕ್ಕಂ, ಉಪಾಧ್ಯಕ್ಷ ಮಂಜುನಾಥ, ಪ್ರಭುಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯು.ಸುರೇಶ್, ಮಂಡಲದ ಕಾರ್ಯದರ್ಶಿ ದರೋಜಿ ರಮೇಶ್, ಮುಖಂಡರಶದ ಪುಷ್ಪಾ, ಮಂಜುಳಾ, ನರೇಂದ್ರ ಪಾಟೀಲ್, ನರಸಿಂಹ, ಕರಡಿ ಎರ್ರಿಸ್ವಾಮಿ, ರಘುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು:</strong> ಪಟ್ಟಣದಲ್ಲಿ ಭಾನುವಾರ ಬಿಜೆಪಿ ತಾಲ್ಲೂಕು ಘಟಕ, ಸಾರ್ವಜನಿಕರಿಂದ ತಿರಂಗಯಾತ್ರೆ - ಭಾರತ ಸೇನೆಯೊಂದಿಗೆ ರಾಷ್ಟ್ರ ರಕ್ಷಣೆಗಾಗಿ ನಾಗರಿಕರು ಎಂಬ ಕಾರ್ಯಕ್ರಮದ ಅಂಗವಾಗಿ ಬೃಹತ್ ರಾಷ್ಟ್ರ ಧ್ವಜ, ಬ್ಯಾನರ್ ದೊಂದಿಗೆ ಸಂಭ್ರಮದಿಂದ ಮೆರವಣಿಗೆ ನಡೆಸಿ ಸೈನಿಕರಿಗೆ ಕೃತಜ್ಞತೆ ಸಲ್ಲಿಸಿದರು.</p>.<p>ವೀರಕ್ತ ಮಠದ ಪ್ರಭುನಿರಂಜನ ಸ್ವಾಮಿಗಳು, ಭುಜಂಗನಗರ ಗ್ರಾಮದ ಮಠದ ಎರ್ರಿಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಮೆರವಣಿಗೆಯು ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿಯ ಆವರಣದಿಂದ ಆರಂಭವಾಗಿ ಕೆಇಬಿ ವೃತ್ತ, ಮರಾಠ ಸಮಾಜ, ವಾಲ್ಮೀಕಿ ವೃತ್ತದ ಮೂಲಕ ವಿಜಯ ವೃತ್ತದವರೆಗೂ ಮೆರವಣಿಗೆ ನಡೆಯಿತು.</p>.<p>ಮೆರವಣಿಗೆಯಲ್ಲಿ ಪಟ್ಟಣದ ಸಾರ್ವಜನಿಕರು, ಯುವಕರು, ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ಮೆರವಣಿಗೆಯಲ್ಲಿ ಭಾರತ ಮಾತಾ ಕೀ ಜೈ, ವಂದೇ ಮಾತಾರಂ, ಜೈ ಹಿಂದ್ ಘೋಷಣೆಗಳ ಮೊಳಗಿಸುವ ಮೂಲಕ ದೇಶದ ವೀರ ಸೈನಿಕರಿಗೆ ನಮನ ಅರ್ಪಿಸಿದರು.</p>.<p>ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್.ದಿವಾಕರ, ತಾಲ್ಲೂಕು ಮಂಡಲದ ಅಧ್ಯಕ್ಷ ನಾನಾಸಾಹೇಬ್ ನಿಕ್ಕಂ, ಉಪಾಧ್ಯಕ್ಷ ಮಂಜುನಾಥ, ಪ್ರಭುಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯು.ಸುರೇಶ್, ಮಂಡಲದ ಕಾರ್ಯದರ್ಶಿ ದರೋಜಿ ರಮೇಶ್, ಮುಖಂಡರಶದ ಪುಷ್ಪಾ, ಮಂಜುಳಾ, ನರೇಂದ್ರ ಪಾಟೀಲ್, ನರಸಿಂಹ, ಕರಡಿ ಎರ್ರಿಸ್ವಾಮಿ, ರಘುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>