ತಾಲ್ಲೂಕಿನ ಬನ್ನಿಮಟ್ಟಿ, ಬ್ಯಾಲಹುಣ್ಸಿ, ಮಕರಬ್ಬಿ, ಕೋಟಿಹಾಳ ಗ್ರಾಮಗಳ ನದಿ ತೀರದ ಹೊಲ ಗದ್ದೆಗಳಿಗೆ ನೀರು ನುಗ್ಗಿದೆ. ಮೆಕ್ಕೆಜೋಳ, ಭತ್ತದ ಬೆಳೆಗಳು ಮುಳುಗಡೆಯಾಗಿವೆ. ನದಿ ತೀರದಲ್ಲಿ ಅಳವಡಿಸಿರುವ ಪಂಪ್ ಸೆಟ್ ಮೋಟಾರ್ ಗಳನ್ನು ರೈತರು ತೆರವುಗೊಳಿಸಿದರು. ಬ್ಯಾಲಹುಣ್ಸಿ-ಮಕರಬ್ಬಿ ಮಾರ್ಗ ಮಧ್ಯೆದಲ್ಲಿನ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಸಂಜೆಯಿಂದ ಈ ರಸ್ತೆ ಸಂಪರ್ಕ ಕಡಿತಗೊಂಡಿದೆ.