ಭತ್ತ, ಮೆಕ್ಕೆಜೋಳ, ಹೈಬ್ರಿಡ್ ಜೋಳ, ಸಜ್ಜೆ, ಸೂರ್ಯಕಾಂತಿ, ಶೇಂಗಾ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆಯಾಗಿದ್ದು, ಉತ್ತಮ ಇಳುವರಿ ನಿರೀಕ್ಷೆ ಇದೆ. 68.24 ಹೆಕ್ಟೇರ್ ಕೃಷಿ ಜಮೀನುಗಳಲ್ಲಿನ ಭತ್ತ ಮತ್ತು ಮೆಕ್ಕೆಜೋಳ ಬೆಳೆಗಳು, 67.54 ಹೆಕ್ಟೇರ್ ತೋಟಗಾರಿಕೆ ಬೆಳೆಗಳಾದ ಈರುಳ್ಳಿ, ಮೆಣಸಿನಕಾಯಿ, ದಾಳಿಂಬೆ ನಷ್ಟವಾಗಿದೆ. ಮೃತ ಇಬ್ಬರು ಕೂಲಿ ಕಾರ್ಮಿಕರ ಕುಟುಂಬದವರಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗಿದೆ.