ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಟ್ಟೂರು: ವಿದ್ಯುತ್ ಸ್ಪರ್ಶದಿಂದ ಕಾಡು ಹಂದಿಗಳ ಸಾವು

Published 15 ಜುಲೈ 2023, 6:09 IST
Last Updated 15 ಜುಲೈ 2023, 6:09 IST
ಅಕ್ಷರ ಗಾತ್ರ

ಕೊಟ್ಟೂರು: ಆಹಾರವನ್ನರಸಿ ಕಾಡಂಚಿನ ಜಮೀನುಗಳಿಗೆ ಲಗ್ಗೆ ಇಟ್ಟ ಕಾಡು ಹಂದಿಗಳು ಜಮೀನಿನ ಸುತ್ತ ಹಾಕಿದ್ದ ತಂತಿಗಳಲ್ಲಿನ ವಿದ್ಯುತ್ ಸ್ಪರ್ಶದಿಂದ ಎರಡು ಕಾಡು ಹಂದಿಗಳು ಸಾವಿಗೀಡಾಗಿರುವ ಘಟನೆ ಸಮೀಪದ ರಾಂಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ತಾಲ್ಲೂಕಿನ ರಾಂಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಜಮೀನಿನ ಮಾಲೀಕರು ರಕ್ಷಣೆಗೆ ಹಾಕಿದ್ದ ತಂತಿಯಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಪೂರೈಕೆ ಮಾಡಿದ್ದರಿಂದ ಕಾಡು ಹಂದಿಗಳು ತಂತಿಯ ಸ್ಪರ್ಶದಿಂದ ಸ್ಥಳದಲ್ಲಿ ಸಾವನ್ನಪ್ಪಿವೆ.

ವನ್ಯ ಜೀವಿ ಸಂರಕ್ಷಣಾ ಕಾಯ್ದೆ ಅಡಿ ಜಮೀನಿನ ಮಾಲೀಕರ ವಿರುದ್ಧ ಅರಣ್ಯ ಇಲಾಖೆಯವರು ದೂರು ದಾಖಲಿಸಿರುವುದಲ್ಲದೇ ಜೆಸ್ಕಾಂ ಇಲಾಖೆಯವರಿಗೆ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT