<p><strong>ಕುರುಗೋಡು:</strong> ‘ಜಲಸಂಜೀವಿನಿ ಯೋಜನೆಯಡಿ ಮಣ್ಣು ಮತ್ತು ನೀರು ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೃಷಿ ಹೊಂಡ, ನಾಲಾ ಸ್ವಚ್ಛತೆ, ಕೆರೆ ಹೂಳೆತ್ತುವ ರೈತರ ಜಮೀನುಗಳಲ್ಲಿ ಬದು ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ’ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ದಯಾನಂದ ಹೇಳಿದರು.</p>.<p>ತಾಲ್ಲೂಕಿನ ಮುಷ್ಟಗಟ್ಟೆ ಗ್ರಾಮದ ಬಳಿ ನಾಲಾ ಸ್ವಚ್ಛತೆ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಅವರು ಪರಿಶೀಲಿಸಿ ಮಾತನಾಡಿದರು.</p>.<p>‘ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅಂಗವಿಕಲರಿಗೂ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾರ್ಯನಿರ್ವಹಿಸಲು ಯೋಜನೆ ರೂಪಿಸಿದೆ. ಮಹಿಳೆ ಮತ್ತು ಪುರುಷರು ಆಸಕ್ತಿಯಿಂದ ಭಾಗವಹಿಸುತ್ತಿದ್ದಾರೆ’ ಎಂದರು.</p>.<p>ಕೃಷಿ ಅಧಿಕಾರಿ ಎಂ.ದೇವರಾಜ್, ‘ರೈತರು ತಮ್ಮ ಹೊಲಗಳಲ್ಲಿ ಉದ್ಯೋಗಖಾತ್ರಿ ಯೋಜನೆಯಿಂದ ಬದುನಿರ್ಮಾಣ, ಚೆಕ್ಡ್ಯಾಂ ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ಎರೆಹುಳಗೊಬ್ಬರ ತೊಟ್ಟಿ ನಿರ್ಮಾಣ ಕಾಮಗಾರಿಗಳನ್ನು ಮಾಡಿಸಿ ಆದಾಯ ಹೆಚ್ಚಿಸಿಕೊಳ್ಳಬಹುದು. ಕಾರ್ಮಿಕರಿಗೆ ತಲಾ ₹316 ಕೂಲಿ ನೀಡಲಾಗುತ್ತಿದೆ’ ಎಂದರು.</p>.<p>ತಾಲ್ಲೂಕಿನ ಮುಷ್ಟಗಟ್ಟೆ ಗ್ರಾಮದಲ್ಲಿ ಜರುಗುತ್ತಿರುವ ನಾಲಾ ಸ್ವಚ್ಛತೆ ಕಾಮಗಾರಿಯಲ್ಲಿ ಶುಕ್ರವಾರ 63 ಮಂದಿ ಕಾರ್ಮಿಕರು ಭಾಗವಹಿಸಿದ್ದರು.</p>.<p>ಮೇಟಿ ಲಾಲ್ಸ್ವಾಮಿ ಮತ್ತು ಎಕೆ.ಮಲ್ಲಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುರುಗೋಡು:</strong> ‘ಜಲಸಂಜೀವಿನಿ ಯೋಜನೆಯಡಿ ಮಣ್ಣು ಮತ್ತು ನೀರು ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೃಷಿ ಹೊಂಡ, ನಾಲಾ ಸ್ವಚ್ಛತೆ, ಕೆರೆ ಹೂಳೆತ್ತುವ ರೈತರ ಜಮೀನುಗಳಲ್ಲಿ ಬದು ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ’ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ದಯಾನಂದ ಹೇಳಿದರು.</p>.<p>ತಾಲ್ಲೂಕಿನ ಮುಷ್ಟಗಟ್ಟೆ ಗ್ರಾಮದ ಬಳಿ ನಾಲಾ ಸ್ವಚ್ಛತೆ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಅವರು ಪರಿಶೀಲಿಸಿ ಮಾತನಾಡಿದರು.</p>.<p>‘ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅಂಗವಿಕಲರಿಗೂ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾರ್ಯನಿರ್ವಹಿಸಲು ಯೋಜನೆ ರೂಪಿಸಿದೆ. ಮಹಿಳೆ ಮತ್ತು ಪುರುಷರು ಆಸಕ್ತಿಯಿಂದ ಭಾಗವಹಿಸುತ್ತಿದ್ದಾರೆ’ ಎಂದರು.</p>.<p>ಕೃಷಿ ಅಧಿಕಾರಿ ಎಂ.ದೇವರಾಜ್, ‘ರೈತರು ತಮ್ಮ ಹೊಲಗಳಲ್ಲಿ ಉದ್ಯೋಗಖಾತ್ರಿ ಯೋಜನೆಯಿಂದ ಬದುನಿರ್ಮಾಣ, ಚೆಕ್ಡ್ಯಾಂ ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ಎರೆಹುಳಗೊಬ್ಬರ ತೊಟ್ಟಿ ನಿರ್ಮಾಣ ಕಾಮಗಾರಿಗಳನ್ನು ಮಾಡಿಸಿ ಆದಾಯ ಹೆಚ್ಚಿಸಿಕೊಳ್ಳಬಹುದು. ಕಾರ್ಮಿಕರಿಗೆ ತಲಾ ₹316 ಕೂಲಿ ನೀಡಲಾಗುತ್ತಿದೆ’ ಎಂದರು.</p>.<p>ತಾಲ್ಲೂಕಿನ ಮುಷ್ಟಗಟ್ಟೆ ಗ್ರಾಮದಲ್ಲಿ ಜರುಗುತ್ತಿರುವ ನಾಲಾ ಸ್ವಚ್ಛತೆ ಕಾಮಗಾರಿಯಲ್ಲಿ ಶುಕ್ರವಾರ 63 ಮಂದಿ ಕಾರ್ಮಿಕರು ಭಾಗವಹಿಸಿದ್ದರು.</p>.<p>ಮೇಟಿ ಲಾಲ್ಸ್ವಾಮಿ ಮತ್ತು ಎಕೆ.ಮಲ್ಲಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>