‘ಲಾಕ್ಡೌನ್ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಂಚರಿಸಲು ಜಿಲ್ಲಾಡಳಿತದಿಂದ ಪಾಸ್ ವಿತರಿಸಲಾಗುತ್ತಿದೆ. ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ಗಳು ಬಿಟ್ಟರೆ ಬೇರೆಯವರಿಗೆ ಪಾಸ್ ಕೊಡುವ ಅಧಿಕಾರವಿಲ್ಲ. ಆದರೆ, ನಾಗಪ್ಪ ಪಾಸ್ ವಿತರಿಸಿದ್ದಾರೆ. ಹೀಗಾಗಿ ಮಂಗಳವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ನಾಗಪ್ಪ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.