<p><strong>ಕಂಪ್ಲಿ</strong>: ಇಲ್ಲಿಯ ಕಲ್ಯಾಣ ಕರ್ನಾಟಕ ಕನ್ನಡ ಮಾಧ್ಯಮ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ ಸಂಘದ ವಿಭಾಗೀಯ ಪದಾಧಿಕಾರಿಗಳು ಕಲ್ಯಾಣ ಕರ್ನಾಟಕದ ಅನುದಾನರಹಿತ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ವೇತಾನಾನುದಾನಕ್ಕೆ ಒಳಪಡಿಸುವಂತೆ ಒತ್ತಾಯಿಸಿದರು.</p>.<p>ಈ ಕುರಿತ ಮನವಿಪತ್ರವನ್ನು ತಾಲ್ಲೂಕಿನ ಎಮ್ಮಿಗನೂರಿನ ವೆಂಕಯ್ಯ ಮೆಮೊರಿಯಲ್ ಶಾಲೆಯಲ್ಲಿ ಶಾಸಕ ಜೆ.ಎನ್.ಗಣೇಶ್ ಅವರಿಗೆ ಶುಕ್ರವಾರ ಸಲ್ಲಿಸಿದರು.</p>.<p>ಬಳಿಕ ವಿಭಾಗೀಯ ಕೋಶಾಧ್ಯಕ್ಷ ಮುತ್ತಣ್ಣ ನಂದ್ಯಾಳ್ ಮಾತನಾಡಿ, ಆಂಗ್ಲ ಮಾಧ್ಯಮ ಶಾಲೆಗಳ ಭರಾಟೆಯಲ್ಲಿ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ನಡೆಯುವುದೇ ದುಸ್ತರವಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ಕನ್ನಡ ಮಾಧ್ಯಮ ಮರೀಚಿಕೆಯಾಗುವುದನ್ನು ತಪ್ಪಿಸಲು ಅನುದಾನರಹಿತ ಕನ್ನಡ ಶಾಲೆಗಳಿಗೆ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.</p>.<p>1995ರ ನಂತರದ ಎಲ್ಲ ಕಲ್ಯಾಣ ಕರ್ನಾಟಕದ ಕನ್ನಡ ಮಾಧ್ಯಮ ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕರಿಗೆ ವೇತನಾನುದಾನ ನೀಡಿ ಇಲ್ಲವೇ ಮಹಾರಾಷ್ಟ್ರ ಮಾದರಿಯಲ್ಲಿ ಅರ್ಧ ವೇತನವನ್ನಾದರೂ ನೀಡಬೇಕು ಎಂದು ಆಗ್ರಹಿಸಿದರು.</p>.<p>ಕಲ್ಯಾಣ ಕರ್ನಾಟಕ ಕನ್ನಡ ಮಾಧ್ಯಮ ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ 371ಜೆ ಅಡಿಯಲ್ಲಿ ಮೂಲ ಸೌಕರ್ಯ ನೀಡಬೇಕು. ನವೀಕರಣ ನಿಯಮಗಳಲ್ಲಿ ನಿಬಂಧನೆಗಳಲ್ಲಿ ರಿಯಾಯಿತಿ ತೋರಬೇಕು. ಸರ್ಕಾರಿ ಶಾಲೆಗಳಿಗೆ ನೀಡುವ ಸೌಲಭ್ಯಗಳನ್ನು ಅನುದಾನರಹಿತ ಶಾಲೆಗಳಿಗೂ ವಿಸ್ತರಿಸಬೇಕು ಎಂದು ವಿನಂತಿಸಿದರು.</p>.<p>ವಿಭಾಗೀಯ ಗೌರವ ಅಧ್ಯಕ್ಷ ತಾಂಡವಕೃಷ್ಣ, ಜಿಲ್ಲಾ ಅಧ್ಯಕ್ಷ ಎಂ.ಸುರೇಶ್, ಪದಾಧಿಕಾರಿ ಕೆ.ಎಸ್.ಚಾಂದ್ಬಾಷ, ಸಿ.ವೆಂಕಟೇಶ್, ಎಚ್.ಸಿ.ರಾಮಕೃಷ್ಣ, ಕೆ.ಶಂಕ್ರಪ್ಪ, ರಾಘವೇಂದ್ರ ಶ್ರೇಷ್ಠಿ, ವಿರುಪಾಕ್ಷಿ, ಮಾರುತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ</strong>: ಇಲ್ಲಿಯ ಕಲ್ಯಾಣ ಕರ್ನಾಟಕ ಕನ್ನಡ ಮಾಧ್ಯಮ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ ಸಂಘದ ವಿಭಾಗೀಯ ಪದಾಧಿಕಾರಿಗಳು ಕಲ್ಯಾಣ ಕರ್ನಾಟಕದ ಅನುದಾನರಹಿತ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ವೇತಾನಾನುದಾನಕ್ಕೆ ಒಳಪಡಿಸುವಂತೆ ಒತ್ತಾಯಿಸಿದರು.</p>.<p>ಈ ಕುರಿತ ಮನವಿಪತ್ರವನ್ನು ತಾಲ್ಲೂಕಿನ ಎಮ್ಮಿಗನೂರಿನ ವೆಂಕಯ್ಯ ಮೆಮೊರಿಯಲ್ ಶಾಲೆಯಲ್ಲಿ ಶಾಸಕ ಜೆ.ಎನ್.ಗಣೇಶ್ ಅವರಿಗೆ ಶುಕ್ರವಾರ ಸಲ್ಲಿಸಿದರು.</p>.<p>ಬಳಿಕ ವಿಭಾಗೀಯ ಕೋಶಾಧ್ಯಕ್ಷ ಮುತ್ತಣ್ಣ ನಂದ್ಯಾಳ್ ಮಾತನಾಡಿ, ಆಂಗ್ಲ ಮಾಧ್ಯಮ ಶಾಲೆಗಳ ಭರಾಟೆಯಲ್ಲಿ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ನಡೆಯುವುದೇ ದುಸ್ತರವಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ಕನ್ನಡ ಮಾಧ್ಯಮ ಮರೀಚಿಕೆಯಾಗುವುದನ್ನು ತಪ್ಪಿಸಲು ಅನುದಾನರಹಿತ ಕನ್ನಡ ಶಾಲೆಗಳಿಗೆ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.</p>.<p>1995ರ ನಂತರದ ಎಲ್ಲ ಕಲ್ಯಾಣ ಕರ್ನಾಟಕದ ಕನ್ನಡ ಮಾಧ್ಯಮ ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕರಿಗೆ ವೇತನಾನುದಾನ ನೀಡಿ ಇಲ್ಲವೇ ಮಹಾರಾಷ್ಟ್ರ ಮಾದರಿಯಲ್ಲಿ ಅರ್ಧ ವೇತನವನ್ನಾದರೂ ನೀಡಬೇಕು ಎಂದು ಆಗ್ರಹಿಸಿದರು.</p>.<p>ಕಲ್ಯಾಣ ಕರ್ನಾಟಕ ಕನ್ನಡ ಮಾಧ್ಯಮ ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ 371ಜೆ ಅಡಿಯಲ್ಲಿ ಮೂಲ ಸೌಕರ್ಯ ನೀಡಬೇಕು. ನವೀಕರಣ ನಿಯಮಗಳಲ್ಲಿ ನಿಬಂಧನೆಗಳಲ್ಲಿ ರಿಯಾಯಿತಿ ತೋರಬೇಕು. ಸರ್ಕಾರಿ ಶಾಲೆಗಳಿಗೆ ನೀಡುವ ಸೌಲಭ್ಯಗಳನ್ನು ಅನುದಾನರಹಿತ ಶಾಲೆಗಳಿಗೂ ವಿಸ್ತರಿಸಬೇಕು ಎಂದು ವಿನಂತಿಸಿದರು.</p>.<p>ವಿಭಾಗೀಯ ಗೌರವ ಅಧ್ಯಕ್ಷ ತಾಂಡವಕೃಷ್ಣ, ಜಿಲ್ಲಾ ಅಧ್ಯಕ್ಷ ಎಂ.ಸುರೇಶ್, ಪದಾಧಿಕಾರಿ ಕೆ.ಎಸ್.ಚಾಂದ್ಬಾಷ, ಸಿ.ವೆಂಕಟೇಶ್, ಎಚ್.ಸಿ.ರಾಮಕೃಷ್ಣ, ಕೆ.ಶಂಕ್ರಪ್ಪ, ರಾಘವೇಂದ್ರ ಶ್ರೇಷ್ಠಿ, ವಿರುಪಾಕ್ಷಿ, ಮಾರುತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>