<p><strong>ಹೂವಿನಹಡಗಲಿ</strong>: ತಾಲ್ಲೂಕಿನ ದಾಸನಹಳ್ಳಿ ಕೆರೆಗೆ ತುಂಗಭದ್ರಾ ನದಿಯಿಂದ ನೀರು ಹರಿಸಬೇಕು ಎಂದು ಕೆರೆ ಅಚ್ಚುಕಟ್ಟು ಪ್ರದೇಶದ ರೈತರು ಆಗ್ರಹಿಸಿದ್ದಾರೆ.</p>.<p>ಸಿಂಗಟಾಲೂರು ಏತ ನೀರಾವರಿ ಯೋಜನೆ ಕಾರ್ಯಪಾಲಕ ಎಂಜಿನಿಯರ್ ಶಿವಮೂರ್ತಿ, ಎಇಇ ರಾಜು ಅವರಿಗೆ ರೈತರು ಮನವಿ ಸಲ್ಲಿಸಿದ್ದಾರೆ.</p>.<p>ತುಂಗಭದ್ರಾ ನದಿಯಿಂದ ತಾಲ್ಲೂಕಿನ ಪ್ರಮುಖ ಕೆರೆ ತುಂಬಿಸುವ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚು ಮಾಡಿದ್ದರೂ ಕೆರೆಗಳಿಗೆ ನೀರು ಹರಿಯುತ್ತಿಲ್ಲ. ಯೋಜನೆ ಕಾರ್ಯಗತಗೊಂಡು ದಶಕ ಕಳೆದರೂ ದಾಸನಹಳ್ಳಿ ಕೆರೆಗೆ ಸಮರ್ಪಕ ನೀರು ಹರಿದಿಲ್ಲ. ತಾಂತ್ರಿಕ ದೋಷ ಸರಿಪಡಿಸಿ ಈ ವರ್ಷ ಪೂರ್ಣಪ್ರಮಾಣದಲ್ಲಿ ಕೆರೆ ತುಂಬಿಸಬೇಕು ಎಂದು ರೈತರು ಒತ್ತಾಯಿಸಿದರು.</p>.<p>ಮುಖಂಡರಾದ ಕೋಡಬಾಳ ಚಂದ್ರಪ್ಪ, ಎನ್.ವೀರಣ್ಣ, ಎಂ.ಕುರುವತ್ತೆಪ್ಪ, ಜಿ.ಬಸಪ್ಪ , ಬಿ.ಸುಭಾಸ್, ಎಚ್.ಶಿವಕುಮಾರ, ಬಿ.ತಾರಕೇಶ, ಕೆ.ಶಿವು, ಸಿದ್ದಲಿಂಗಸ್ವಾಮಿ, ಕೆ.ಕಾಂತೇಶ, ಕೆ.ಸತೀಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ</strong>: ತಾಲ್ಲೂಕಿನ ದಾಸನಹಳ್ಳಿ ಕೆರೆಗೆ ತುಂಗಭದ್ರಾ ನದಿಯಿಂದ ನೀರು ಹರಿಸಬೇಕು ಎಂದು ಕೆರೆ ಅಚ್ಚುಕಟ್ಟು ಪ್ರದೇಶದ ರೈತರು ಆಗ್ರಹಿಸಿದ್ದಾರೆ.</p>.<p>ಸಿಂಗಟಾಲೂರು ಏತ ನೀರಾವರಿ ಯೋಜನೆ ಕಾರ್ಯಪಾಲಕ ಎಂಜಿನಿಯರ್ ಶಿವಮೂರ್ತಿ, ಎಇಇ ರಾಜು ಅವರಿಗೆ ರೈತರು ಮನವಿ ಸಲ್ಲಿಸಿದ್ದಾರೆ.</p>.<p>ತುಂಗಭದ್ರಾ ನದಿಯಿಂದ ತಾಲ್ಲೂಕಿನ ಪ್ರಮುಖ ಕೆರೆ ತುಂಬಿಸುವ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚು ಮಾಡಿದ್ದರೂ ಕೆರೆಗಳಿಗೆ ನೀರು ಹರಿಯುತ್ತಿಲ್ಲ. ಯೋಜನೆ ಕಾರ್ಯಗತಗೊಂಡು ದಶಕ ಕಳೆದರೂ ದಾಸನಹಳ್ಳಿ ಕೆರೆಗೆ ಸಮರ್ಪಕ ನೀರು ಹರಿದಿಲ್ಲ. ತಾಂತ್ರಿಕ ದೋಷ ಸರಿಪಡಿಸಿ ಈ ವರ್ಷ ಪೂರ್ಣಪ್ರಮಾಣದಲ್ಲಿ ಕೆರೆ ತುಂಬಿಸಬೇಕು ಎಂದು ರೈತರು ಒತ್ತಾಯಿಸಿದರು.</p>.<p>ಮುಖಂಡರಾದ ಕೋಡಬಾಳ ಚಂದ್ರಪ್ಪ, ಎನ್.ವೀರಣ್ಣ, ಎಂ.ಕುರುವತ್ತೆಪ್ಪ, ಜಿ.ಬಸಪ್ಪ , ಬಿ.ಸುಭಾಸ್, ಎಚ್.ಶಿವಕುಮಾರ, ಬಿ.ತಾರಕೇಶ, ಕೆ.ಶಿವು, ಸಿದ್ದಲಿಂಗಸ್ವಾಮಿ, ಕೆ.ಕಾಂತೇಶ, ಕೆ.ಸತೀಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>