<p><strong>ಸಿರುಗುಪ್ಪ</strong>: ‘ನಗರದಲ್ಲಿ ನಿತ್ಯ ಸಂಗ್ರಹಿಸಿದ ಒಣ ಕಸ ಮತ್ತು ಹಸಿ ಕಸದಿಂದ ತಯಾರಿಸಿದ ಕಾಂಪೋಸ್ಟ್ ಸಾವಯವ ಗೊಬ್ಬರವು ಮನೆಯ ಕೈದೋಟಗಳಿಗೆ ಬಳಸಿಕೊಳ್ಳಲು ಯೋಗ್ಯವಾಗಿದೆ. ಇದರಿಂದ ಸಸ್ಯಗಳ ಫಲವತ್ತತೆ ಹೆಚ್ಚಿಸುತ್ತದೆ’ ಎಂದು ಪೌರಾಯುಕ್ತ ಗಂಗಾಧರ ಹೇಳಿದರು.</p>.<p>ನಗರದ ತಾಲ್ಲೂಕು ಮೈದಾನದಲ್ಲಿ ನಗರಸಭೆ ಕಾರ್ಯಾಲಯದಿಂದ ಕರ್ನಾಟಕ ರಾಜೋತ್ಸವ ಅಂಗವಾಗಿ ಏರ್ಪಡಿಸಿದ್ದ ‘ಸಾವಯವ ಗೊಬ್ಬರ ಬಳಸಿ, ನಗರವನ್ನು ಸ್ವಚ್ಚಗೊಳಿಸಿ, ಮಣ್ಣಿನ ಫಲವತ್ತತೆ ಉಳಿಸಿ’ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಆಲಂಕಾರಿಕ ಸಸ್ಯಗಳು ಮತ್ತು ಹುಲ್ಲುಗಾವಲು ಪ್ರದೇಶಗಳಿಗೆ ಸಾಕಷ್ಟು ಸಾವಯವ ಪದಾರ್ಥಗಳನ್ನು ಸೇರಿಸುವುದು ಇನ್ನೂ ಹೆಚ್ಚು ನಿರ್ಣಾಯಕವಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ರೆಡ್ಡಿ, ಸಿಡಿಪಿಒ ಪ್ರದೀಪ್ಕುಮಾರ, ನಗರಸಭೆ ಆರೋಗ್ಯ ಅಧಿಕಾರಿಗಳಾದ ರಂಗಸ್ವಾಮಿ, ಪುಷ್ಪಲತಾ, ಹೇಮಂತರಾಜ, ಕಂದಾಯ ಅಧಿಕಾರಿಗಳಾದ ರಾಜಭಕ್ಷಿ, ವೆಂಕೋಬ, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ</strong>: ‘ನಗರದಲ್ಲಿ ನಿತ್ಯ ಸಂಗ್ರಹಿಸಿದ ಒಣ ಕಸ ಮತ್ತು ಹಸಿ ಕಸದಿಂದ ತಯಾರಿಸಿದ ಕಾಂಪೋಸ್ಟ್ ಸಾವಯವ ಗೊಬ್ಬರವು ಮನೆಯ ಕೈದೋಟಗಳಿಗೆ ಬಳಸಿಕೊಳ್ಳಲು ಯೋಗ್ಯವಾಗಿದೆ. ಇದರಿಂದ ಸಸ್ಯಗಳ ಫಲವತ್ತತೆ ಹೆಚ್ಚಿಸುತ್ತದೆ’ ಎಂದು ಪೌರಾಯುಕ್ತ ಗಂಗಾಧರ ಹೇಳಿದರು.</p>.<p>ನಗರದ ತಾಲ್ಲೂಕು ಮೈದಾನದಲ್ಲಿ ನಗರಸಭೆ ಕಾರ್ಯಾಲಯದಿಂದ ಕರ್ನಾಟಕ ರಾಜೋತ್ಸವ ಅಂಗವಾಗಿ ಏರ್ಪಡಿಸಿದ್ದ ‘ಸಾವಯವ ಗೊಬ್ಬರ ಬಳಸಿ, ನಗರವನ್ನು ಸ್ವಚ್ಚಗೊಳಿಸಿ, ಮಣ್ಣಿನ ಫಲವತ್ತತೆ ಉಳಿಸಿ’ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಆಲಂಕಾರಿಕ ಸಸ್ಯಗಳು ಮತ್ತು ಹುಲ್ಲುಗಾವಲು ಪ್ರದೇಶಗಳಿಗೆ ಸಾಕಷ್ಟು ಸಾವಯವ ಪದಾರ್ಥಗಳನ್ನು ಸೇರಿಸುವುದು ಇನ್ನೂ ಹೆಚ್ಚು ನಿರ್ಣಾಯಕವಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ರೆಡ್ಡಿ, ಸಿಡಿಪಿಒ ಪ್ರದೀಪ್ಕುಮಾರ, ನಗರಸಭೆ ಆರೋಗ್ಯ ಅಧಿಕಾರಿಗಳಾದ ರಂಗಸ್ವಾಮಿ, ಪುಷ್ಪಲತಾ, ಹೇಮಂತರಾಜ, ಕಂದಾಯ ಅಧಿಕಾರಿಗಳಾದ ರಾಜಭಕ್ಷಿ, ವೆಂಕೋಬ, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>