<p><strong>ಕುರುಗೋಡು:</strong> ಇಲ್ಲಿಗೆ ಸಮೀಪದ ಸಿರಿಗೇರಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಂಗಳವಾರ ಚಿತ್ರಪಟ ಮೆರವಣಿಗೆ ನಡೆಸಲಾಯಿತು. ಗಂಗಾಧರ ಸ್ವಾಮಿ ವಾಲ್ಮೀಕಿ ಮೂರ್ತಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.</p>.<p>ಗ್ರಾಮದ ಹುಚ್ಚೇಶ್ವರ ನಗರದ ಗಣೇಶ ದೇವಸ್ಥಾನ ದಿಂದ ಪ್ರಾರಂಭಗೊಂಡ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಸಮಾವೇಶಗೊಂಡಿತು.</p>.<p>ಸುಮಂಗಳೆಯರು ಪೂರ್ಣಕುಂಭ, ಕಳಸ, ಮಂಗಳಮುಖಿಯರ ನೃತ್ಯ, ಹಗಲು ವೇಷಗಾರರು, ಡೊಳ್ಳು ಕುಣಿತ, ಕಂಸಾಳೆ ಕಲಾವಿದರು ಭಾಗವಹಿಸಿ ಮೆರವಣಿಗೆಯ ಮೆರುಗು ಹೆಚ್ಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ. ಭೀಮಲಿಂಗಪ್ಪ ಮಾತನಾಡಿ, ‘ವಾಲ್ಮೀಕಿ ಸಮುದಾಯದವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಸರ್ಕಾರದ ಸೌಲಭ್ಯಗಳ್ನು ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿ ಹೊಂದಬೇಕು’ ಎಂದು ಸಲಹೆ ನೀಡಿದರು.</p>.<p>ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಹುಸೇನ್ ಪೀರ್ಸಾಬ್, ಪ್ರಮುಖರಾದ ಮುರ್ಷಿದ್ ಅಹಮದ್, ಜೆ.ಮಲ್ಲಿಕಾರ್ಜುನ, ಲಕ್ಷಣ,ವಿ ಹನುಮೇಶ್ ಮಾತನಾಡಿದರು.</p>.<p>ಅಧ್ಯಕ್ಷೆ ಹೊಳಗುಂದಿ ಲಕ್ಷ್ಮಿ ಕೆ.ದ್ಯಾವಣ್ಣ, ಉಪಾಧ್ಯಕ್ಷ ರಾಜಮ್ಮ ಡ್ರೈವರ್ ಹುಲುಗಪ್ಪ, ಪ್ರಮುಖರಾದ ಸಿಎಂ ನಾಗರಾಜ್ ಸ್ವಾಮಿ, ಬಿ ಸೋಮಶೇಖರಪ್ಪ, ಎಸ್.ಎಂ. ನಾಗರಾಜಸ್ವಾಮಿ, ಎಸ್.ಎಂ.ಅಡಿವೆಯ್ಯ ಸ್ವಾಮಿ, ಬಿ ನಾಗೇಂದ್ರ, ಹಾಗಲೂರು ಮಲ್ಲನಗೌಡ, ಡಿ ಚೆನ್ನಪ್ಪ, ಬಕಾಡೆ ಈರಯ್ಯ, ಬಿ.ಮಲ್ಲಯ್ಯ ನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುರುಗೋಡು:</strong> ಇಲ್ಲಿಗೆ ಸಮೀಪದ ಸಿರಿಗೇರಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಂಗಳವಾರ ಚಿತ್ರಪಟ ಮೆರವಣಿಗೆ ನಡೆಸಲಾಯಿತು. ಗಂಗಾಧರ ಸ್ವಾಮಿ ವಾಲ್ಮೀಕಿ ಮೂರ್ತಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.</p>.<p>ಗ್ರಾಮದ ಹುಚ್ಚೇಶ್ವರ ನಗರದ ಗಣೇಶ ದೇವಸ್ಥಾನ ದಿಂದ ಪ್ರಾರಂಭಗೊಂಡ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಸಮಾವೇಶಗೊಂಡಿತು.</p>.<p>ಸುಮಂಗಳೆಯರು ಪೂರ್ಣಕುಂಭ, ಕಳಸ, ಮಂಗಳಮುಖಿಯರ ನೃತ್ಯ, ಹಗಲು ವೇಷಗಾರರು, ಡೊಳ್ಳು ಕುಣಿತ, ಕಂಸಾಳೆ ಕಲಾವಿದರು ಭಾಗವಹಿಸಿ ಮೆರವಣಿಗೆಯ ಮೆರುಗು ಹೆಚ್ಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ. ಭೀಮಲಿಂಗಪ್ಪ ಮಾತನಾಡಿ, ‘ವಾಲ್ಮೀಕಿ ಸಮುದಾಯದವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಸರ್ಕಾರದ ಸೌಲಭ್ಯಗಳ್ನು ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿ ಹೊಂದಬೇಕು’ ಎಂದು ಸಲಹೆ ನೀಡಿದರು.</p>.<p>ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಹುಸೇನ್ ಪೀರ್ಸಾಬ್, ಪ್ರಮುಖರಾದ ಮುರ್ಷಿದ್ ಅಹಮದ್, ಜೆ.ಮಲ್ಲಿಕಾರ್ಜುನ, ಲಕ್ಷಣ,ವಿ ಹನುಮೇಶ್ ಮಾತನಾಡಿದರು.</p>.<p>ಅಧ್ಯಕ್ಷೆ ಹೊಳಗುಂದಿ ಲಕ್ಷ್ಮಿ ಕೆ.ದ್ಯಾವಣ್ಣ, ಉಪಾಧ್ಯಕ್ಷ ರಾಜಮ್ಮ ಡ್ರೈವರ್ ಹುಲುಗಪ್ಪ, ಪ್ರಮುಖರಾದ ಸಿಎಂ ನಾಗರಾಜ್ ಸ್ವಾಮಿ, ಬಿ ಸೋಮಶೇಖರಪ್ಪ, ಎಸ್.ಎಂ. ನಾಗರಾಜಸ್ವಾಮಿ, ಎಸ್.ಎಂ.ಅಡಿವೆಯ್ಯ ಸ್ವಾಮಿ, ಬಿ ನಾಗೇಂದ್ರ, ಹಾಗಲೂರು ಮಲ್ಲನಗೌಡ, ಡಿ ಚೆನ್ನಪ್ಪ, ಬಕಾಡೆ ಈರಯ್ಯ, ಬಿ.ಮಲ್ಲಯ್ಯ ನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>