<p><strong>ಬಳ್ಳಾರಿ:</strong> ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ರೆಡ್ಡಿ ಹತ್ಯೆ ಹಿನ್ನೆಲೆಯಲ್ಲಿ ಬಳ್ಳಾರಿ ನಗರದ ಕಾನೂನು ಮತ್ತು ಸುವ್ಯವಸ್ಥೆ ಹಿತದೃಷ್ಟಿಯಿಂದ ಶನಿವಾರ ನಡೆಯಬೇಕಿದ್ದ ಮಹರ್ಷಿ ವಾಲ್ಮೀಕಿ ಪ್ರತಿಮೆಯ ಅನಾವರಣ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.</p>.<p>ಈ ಕುರಿತು ಶಾಸಕ ನಾರಾ ಭರತ್ ರೆಡ್ಡಿ ಅವರ ಕಚೇರಿಯಿಂದ ಪ್ರಕಟಣೆ ಬಿಡುಗಡೆ ಮಾಡಲಾಗಿದೆ.</p>.<p>ಉದ್ವಿಗ್ನ ಪರಿಸ್ಥಿತಿಯಲ್ಲಿ ವಾಲ್ಮೀಕಿ ಪ್ರತಿಮೆಯನ್ನು ಅನಾವರಣ ಮಾಡುವ ಕಾರ್ಯಕ್ರಮ ಆಯೋಜಿಸಿದರೆ ಭಾರೀ ಅನಾಹುತಕ್ಕೆ ಕಾರಣವಾಗಲಿದೆ ಎಂದು ಜಿಲ್ಲೆಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿತ್ತು. ಹೀಗಾಗಿ, ಪ್ರತಿಮೆ ಅನಾವರಣ ಮಾಡಬಾರದು ಎಂದು ಸರ್ಕಾರ ಸೂಚಿಸಿದೆ ಎಂದು ಗೊತ್ತಾಗಿದೆ. </p>.<p>ಆದರೆ, ಶುಕ್ರವಾರ ಬೆಳಿಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಶಾಸಕ ನಾರಾ ಭರತ್ ರೆಡ್ಡಿ, ‘ಕಾಂಗ್ರೆಸ್ ಕಾರ್ಯಕರ್ತನ ಸಾವಿನಿಂದ ನಾವು ದುಃಖದಲ್ಲಿದ್ದೇವೆ. ಅದರೂ, ಶನಿವಾರ ಬಳ್ಳಾರಿ ನಗರದಲ್ಲಿ ಅಜ್ಜ (ವಾಲ್ಮೀಕಿ) ಪ್ರತಿಮೆ ಅನಾವರಣ ಮಾಡುತ್ತೇವೆ’ ಎಂದಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ರೆಡ್ಡಿ ಹತ್ಯೆ ಹಿನ್ನೆಲೆಯಲ್ಲಿ ಬಳ್ಳಾರಿ ನಗರದ ಕಾನೂನು ಮತ್ತು ಸುವ್ಯವಸ್ಥೆ ಹಿತದೃಷ್ಟಿಯಿಂದ ಶನಿವಾರ ನಡೆಯಬೇಕಿದ್ದ ಮಹರ್ಷಿ ವಾಲ್ಮೀಕಿ ಪ್ರತಿಮೆಯ ಅನಾವರಣ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.</p>.<p>ಈ ಕುರಿತು ಶಾಸಕ ನಾರಾ ಭರತ್ ರೆಡ್ಡಿ ಅವರ ಕಚೇರಿಯಿಂದ ಪ್ರಕಟಣೆ ಬಿಡುಗಡೆ ಮಾಡಲಾಗಿದೆ.</p>.<p>ಉದ್ವಿಗ್ನ ಪರಿಸ್ಥಿತಿಯಲ್ಲಿ ವಾಲ್ಮೀಕಿ ಪ್ರತಿಮೆಯನ್ನು ಅನಾವರಣ ಮಾಡುವ ಕಾರ್ಯಕ್ರಮ ಆಯೋಜಿಸಿದರೆ ಭಾರೀ ಅನಾಹುತಕ್ಕೆ ಕಾರಣವಾಗಲಿದೆ ಎಂದು ಜಿಲ್ಲೆಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿತ್ತು. ಹೀಗಾಗಿ, ಪ್ರತಿಮೆ ಅನಾವರಣ ಮಾಡಬಾರದು ಎಂದು ಸರ್ಕಾರ ಸೂಚಿಸಿದೆ ಎಂದು ಗೊತ್ತಾಗಿದೆ. </p>.<p>ಆದರೆ, ಶುಕ್ರವಾರ ಬೆಳಿಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಶಾಸಕ ನಾರಾ ಭರತ್ ರೆಡ್ಡಿ, ‘ಕಾಂಗ್ರೆಸ್ ಕಾರ್ಯಕರ್ತನ ಸಾವಿನಿಂದ ನಾವು ದುಃಖದಲ್ಲಿದ್ದೇವೆ. ಅದರೂ, ಶನಿವಾರ ಬಳ್ಳಾರಿ ನಗರದಲ್ಲಿ ಅಜ್ಜ (ವಾಲ್ಮೀಕಿ) ಪ್ರತಿಮೆ ಅನಾವರಣ ಮಾಡುತ್ತೇವೆ’ ಎಂದಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>