<p>ಬಳ್ಳಾರಿ: ತಾಲೂಕಿನ ಹಗರಿ (ವೇದಾವತಿ) ನದಿಯಲ್ಲಿ ಮಂಗಳವಾರ ಈಜಲು ಹೋಗಿ ನಾಪತ್ತೆಯಾಗಿದ್ದ ಇಬ್ಬರು ಬಾಲಕರ ಸುಳಿವು ಎರಡು ದಿನವಾದರೂ ಇನ್ನೂ ಪತ್ತೆಯಾಗಿಲ್ಲ. </p>.<p>ಮಂಗಳವಾರ ಮಧ್ಯಾಹ್ನ ನದಿಯಲ್ಲಿ ಈಜಲು ತೆರಳಿದ್ದ ವಿಷ್ಣುಸಾಯಿ (14), ಕಿರಣ್ ( 16) ನೀರಿನ ಸೆಳೆತಕ್ಕೆ ಸಿಕ್ಕು ಕೊಚ್ಚಿಕೊಂಡು ಹೋಗಿದ್ದರು. </p>.<p>ಮೊದಲಿಗೆ ನದಿ ದಡದಲ್ಲಿ ಈಜಾಡುತ್ತಿದ್ದ ಬಾಲಕರು, ಬಳಿಕ ಮಧ್ಯಕ್ಕೆ ಹೋಗಿದ್ದು, ರಭಸವಾಗಿ ಹರಿಯುತ್ತಿದ್ದ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಪಿಡಿಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದರು.</p>.<p>ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಗೃಹರಕ್ಷಕದಳ ಮಂಗಳವಾರವೇ ರಕ್ಷಣಾ ಕಾರ್ಯ ಆರಂಭಿಸಿದ್ದರು. ಸಂಜೆಯಾಗುತ್ತಲೇ ಕಾರ್ಯಚರಣೆ ಸ್ಥಗಿತಗೊಳಿಸಿ, ಬುಧವಾರಕ್ಕೆ ಮತ್ತೆ ಹುಡುಕಾಟ ನಡೆಸುವ ನಿರ್ಧಾರಕ್ಕೆ ಬರಲಾಗಿತ್ತು. </p>.<p>ಬುಧವಾರವು ಸುಮಾರು 20 ಸಿಬ್ಬಂದಿ ಹುಡುಕಾಟ ನಡೆಸಿದರೂ ಬಾಲಕರು ಪತ್ತೆಯಾಗಿಲ್ಲ. ಕಾರ್ಯಚರಣೆಯನ್ನು ಗುರುವಾರ ಮತ್ತೆ ಆರಂಭಿಸಲು ತೀರ್ಮಾನಿಸಲಾಗಿದೆ.</p>.<p>48 ಗಂಟೆಗಳ ಕಾರ್ಯಚರಣೆ ಬಳಿಕ ಪತ್ತೆ ಕಾರ್ಯವನ್ನು ನಿಲ್ಲಿಸಲಾಗುತ್ತದೆ ಎಂದು ಮಾಹಿತಿ ಲಭ್ಯವಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ತಾಲೂಕಿನ ಹಗರಿ (ವೇದಾವತಿ) ನದಿಯಲ್ಲಿ ಮಂಗಳವಾರ ಈಜಲು ಹೋಗಿ ನಾಪತ್ತೆಯಾಗಿದ್ದ ಇಬ್ಬರು ಬಾಲಕರ ಸುಳಿವು ಎರಡು ದಿನವಾದರೂ ಇನ್ನೂ ಪತ್ತೆಯಾಗಿಲ್ಲ. </p>.<p>ಮಂಗಳವಾರ ಮಧ್ಯಾಹ್ನ ನದಿಯಲ್ಲಿ ಈಜಲು ತೆರಳಿದ್ದ ವಿಷ್ಣುಸಾಯಿ (14), ಕಿರಣ್ ( 16) ನೀರಿನ ಸೆಳೆತಕ್ಕೆ ಸಿಕ್ಕು ಕೊಚ್ಚಿಕೊಂಡು ಹೋಗಿದ್ದರು. </p>.<p>ಮೊದಲಿಗೆ ನದಿ ದಡದಲ್ಲಿ ಈಜಾಡುತ್ತಿದ್ದ ಬಾಲಕರು, ಬಳಿಕ ಮಧ್ಯಕ್ಕೆ ಹೋಗಿದ್ದು, ರಭಸವಾಗಿ ಹರಿಯುತ್ತಿದ್ದ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಪಿಡಿಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದರು.</p>.<p>ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಗೃಹರಕ್ಷಕದಳ ಮಂಗಳವಾರವೇ ರಕ್ಷಣಾ ಕಾರ್ಯ ಆರಂಭಿಸಿದ್ದರು. ಸಂಜೆಯಾಗುತ್ತಲೇ ಕಾರ್ಯಚರಣೆ ಸ್ಥಗಿತಗೊಳಿಸಿ, ಬುಧವಾರಕ್ಕೆ ಮತ್ತೆ ಹುಡುಕಾಟ ನಡೆಸುವ ನಿರ್ಧಾರಕ್ಕೆ ಬರಲಾಗಿತ್ತು. </p>.<p>ಬುಧವಾರವು ಸುಮಾರು 20 ಸಿಬ್ಬಂದಿ ಹುಡುಕಾಟ ನಡೆಸಿದರೂ ಬಾಲಕರು ಪತ್ತೆಯಾಗಿಲ್ಲ. ಕಾರ್ಯಚರಣೆಯನ್ನು ಗುರುವಾರ ಮತ್ತೆ ಆರಂಭಿಸಲು ತೀರ್ಮಾನಿಸಲಾಗಿದೆ.</p>.<p>48 ಗಂಟೆಗಳ ಕಾರ್ಯಚರಣೆ ಬಳಿಕ ಪತ್ತೆ ಕಾರ್ಯವನ್ನು ನಿಲ್ಲಿಸಲಾಗುತ್ತದೆ ಎಂದು ಮಾಹಿತಿ ಲಭ್ಯವಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>