<p><strong>ಬಳ್ಳಾರಿ:</strong> ವೀರಶೈವ ಲಿಂಗಾಯತ ಸಮುದಾಯದ ಏಕತೆಗಾಗಿ ‘ಭಾರತೀಯ ವೀರಶೈವ ಲಿಂಗಾಯತ ಜಂಗಮ ಪರಿಷತ್’ ಅಸ್ತಿತ್ವಕ್ಕೆ ತರಲಾಗಿದ್ದು, ಸೆ.18ರಂದು ನಗರದ ರಾಘವ ಕಲಾ ಮಂದಿರದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಮಹೇಶ್ವರಸ್ವಾಮಿ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ಜನಗಣತಿಯಲ್ಲಿ ಅತ್ಯಂತ ಗೊಂದಲ ಸೃಷ್ಟಿಸಲಾಗಿದೆ. ಜನಗಣತಿಯಲ್ಲಿ ವೀರಶೈವ ಜಂಗಮ ಹೆಸರು ಕೈ ಬಿಡಲಾಗಿತ್ತು. ತಕರಾರು ಸಲ್ಲಿಸಿದ ಬಳಿಕ ವೀರಶೈವ ಜಂಗಮರ ಹೆಸರು ಸೇರ್ಪಡೆಗೊಂಡಿದೆ’ ಎಂದರು. </p>.<p>‘ಹಿಂದುಳಿದ ವರ್ಗಗಳ ಆಯೋಗದ ಜಾತಿ ಪಟ್ಟಿಯ ಕ್ರಮ ಸಂಖ್ಯೆ 556-ಜಂಗಮ, 1523 ವೀರಶೈವ ಜಂಗಮ/ಜಂಗಮರು, 1525-ವೀರಶೈವ ಲಿಂಗಾಯತ ಜಂಗಮ ಎಂದು ಉಲ್ಲೇಖಿಸಲಾಗಿದೆ. ಈ ಹಿಂದೆ ಜಂಗಮ ಜಾತಿ ಯಾವುದೇ ಗಣತಿಯಲ್ಲಿ ದಾಖಲೆಯಲ್ಲಿ ನಮೂದಾಗಿರಲಿಲ್ಲ.ಈಗ ಗಣತಿಯಲ್ಲಿ ಜಂಗಮ ಹೆಸರು ಸೇರ್ಪಡೆಗೊಂಡಿರುವುದು ಸಮುದಾಯಕ್ಕೆ ಹೆಚ್ಚು ಸಂತಸ ತಂದಿದೆ’ ಎಂದರು. </p>.<p>‘2026ರಲ್ಲಿ ಕೇಂದ್ರ ಸರ್ಕಾರ ಆಯೋಜಿಸುವ ಜಾತಿ ಜನಗಣತಿ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಆಧಾರವಾಗಿಟ್ಟುಕೊಂಡು ಜಾತಿಗಳ ಪಟ್ಟಿಯಲ್ಲಿ ವೀರಶೈವ ಜಂಗಮ ಹೆಸರನ್ನು ಸೇರಿಸುವುದು ಸೇರಿದಂತೆ ಸಮಸ್ತ ಜಂಗಮರ ಹಿತಾಸಕ್ತಿ ಕಾಪಾಡಲು ಪರಿಷತ್ ಶ್ರಮಿಸಲಿದೆ’ ಎಂದು ತಿಳಿಸಿದರು.</p>.<p>ಅಖಿಲ ಭಾರತ ವೀರಶೈವ ಮಹಾಸಭಾ ತೀರ್ಮಾನದಂತೆ ಧರ್ಮದ ಕಾಲಂನ 11 ರಲ್ಲಿ ಇತರರು ಎಂದಿದ್ದು ಅದರಲ್ಲಿ ವೀರಶೈವ ಲಿಂಗಾಯತ ಎಂದು ಬರೆಸಬೇಕು. ಈ ಬಗ್ಗೆ ಸೆ.19ರಂದು ಹುಬ್ಬಳ್ಳಿಯಲ್ಲಿ ಜರುಗುವ ಸಮಾವೇಶದಲ್ಲಿ ಸೂಕ್ತ ನಿರ್ಣಯಕ್ಕೆ ಬರುವ ಸಾಧ್ಯತೆಯಿದೆ ಎಂದರು.</p>.<p>‘ವೀರಶೈವ ಲಿಂಗಾಯತ ಜಂಗಮರು ಬೇಡ ಜಂಗಮ ಎಂದು ಬರೆಸಬಾರದು’ ಎಂದೂ ಇದೇ ವೇಳೆ ಅವರು ಕಿವಿಮಾತು ಹೇಳಿದರು. </p>.<p>ಸಮುದಾಯದ ಮುಖಂಡರಾದ ವಿ.ಎಸ್.ಪ್ರಭಯ್ಯಸ್ವಾಮಿ, ಎಚ್.ಕೆ.ಗೌರಿಶಂಕರ ಸ್ವಾಮಿ, ಎರಿಸ್ವಾಮಿ ಎತ್ತಿನಬೂದಿಹಾಳು ಮಠ, ರೇಣುಕಾ ಪ್ರಸಾದ್, ವಾಮದೇವಯ್ಯ, ಕೆ.ಎಂ.ಕೊಟ್ರೇಶ್, ಎಂ.ಕುಮಾರಸ್ವಾಮಿ, ಎಚ್.ಎಂ.ಕಿರಣ್ ಕುಮಾರ್, ಶಶಿಧರ್, ಗುರುಬಸವರಾಜ್ ಸುದ್ದಿಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ವೀರಶೈವ ಲಿಂಗಾಯತ ಸಮುದಾಯದ ಏಕತೆಗಾಗಿ ‘ಭಾರತೀಯ ವೀರಶೈವ ಲಿಂಗಾಯತ ಜಂಗಮ ಪರಿಷತ್’ ಅಸ್ತಿತ್ವಕ್ಕೆ ತರಲಾಗಿದ್ದು, ಸೆ.18ರಂದು ನಗರದ ರಾಘವ ಕಲಾ ಮಂದಿರದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಮಹೇಶ್ವರಸ್ವಾಮಿ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ಜನಗಣತಿಯಲ್ಲಿ ಅತ್ಯಂತ ಗೊಂದಲ ಸೃಷ್ಟಿಸಲಾಗಿದೆ. ಜನಗಣತಿಯಲ್ಲಿ ವೀರಶೈವ ಜಂಗಮ ಹೆಸರು ಕೈ ಬಿಡಲಾಗಿತ್ತು. ತಕರಾರು ಸಲ್ಲಿಸಿದ ಬಳಿಕ ವೀರಶೈವ ಜಂಗಮರ ಹೆಸರು ಸೇರ್ಪಡೆಗೊಂಡಿದೆ’ ಎಂದರು. </p>.<p>‘ಹಿಂದುಳಿದ ವರ್ಗಗಳ ಆಯೋಗದ ಜಾತಿ ಪಟ್ಟಿಯ ಕ್ರಮ ಸಂಖ್ಯೆ 556-ಜಂಗಮ, 1523 ವೀರಶೈವ ಜಂಗಮ/ಜಂಗಮರು, 1525-ವೀರಶೈವ ಲಿಂಗಾಯತ ಜಂಗಮ ಎಂದು ಉಲ್ಲೇಖಿಸಲಾಗಿದೆ. ಈ ಹಿಂದೆ ಜಂಗಮ ಜಾತಿ ಯಾವುದೇ ಗಣತಿಯಲ್ಲಿ ದಾಖಲೆಯಲ್ಲಿ ನಮೂದಾಗಿರಲಿಲ್ಲ.ಈಗ ಗಣತಿಯಲ್ಲಿ ಜಂಗಮ ಹೆಸರು ಸೇರ್ಪಡೆಗೊಂಡಿರುವುದು ಸಮುದಾಯಕ್ಕೆ ಹೆಚ್ಚು ಸಂತಸ ತಂದಿದೆ’ ಎಂದರು. </p>.<p>‘2026ರಲ್ಲಿ ಕೇಂದ್ರ ಸರ್ಕಾರ ಆಯೋಜಿಸುವ ಜಾತಿ ಜನಗಣತಿ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಆಧಾರವಾಗಿಟ್ಟುಕೊಂಡು ಜಾತಿಗಳ ಪಟ್ಟಿಯಲ್ಲಿ ವೀರಶೈವ ಜಂಗಮ ಹೆಸರನ್ನು ಸೇರಿಸುವುದು ಸೇರಿದಂತೆ ಸಮಸ್ತ ಜಂಗಮರ ಹಿತಾಸಕ್ತಿ ಕಾಪಾಡಲು ಪರಿಷತ್ ಶ್ರಮಿಸಲಿದೆ’ ಎಂದು ತಿಳಿಸಿದರು.</p>.<p>ಅಖಿಲ ಭಾರತ ವೀರಶೈವ ಮಹಾಸಭಾ ತೀರ್ಮಾನದಂತೆ ಧರ್ಮದ ಕಾಲಂನ 11 ರಲ್ಲಿ ಇತರರು ಎಂದಿದ್ದು ಅದರಲ್ಲಿ ವೀರಶೈವ ಲಿಂಗಾಯತ ಎಂದು ಬರೆಸಬೇಕು. ಈ ಬಗ್ಗೆ ಸೆ.19ರಂದು ಹುಬ್ಬಳ್ಳಿಯಲ್ಲಿ ಜರುಗುವ ಸಮಾವೇಶದಲ್ಲಿ ಸೂಕ್ತ ನಿರ್ಣಯಕ್ಕೆ ಬರುವ ಸಾಧ್ಯತೆಯಿದೆ ಎಂದರು.</p>.<p>‘ವೀರಶೈವ ಲಿಂಗಾಯತ ಜಂಗಮರು ಬೇಡ ಜಂಗಮ ಎಂದು ಬರೆಸಬಾರದು’ ಎಂದೂ ಇದೇ ವೇಳೆ ಅವರು ಕಿವಿಮಾತು ಹೇಳಿದರು. </p>.<p>ಸಮುದಾಯದ ಮುಖಂಡರಾದ ವಿ.ಎಸ್.ಪ್ರಭಯ್ಯಸ್ವಾಮಿ, ಎಚ್.ಕೆ.ಗೌರಿಶಂಕರ ಸ್ವಾಮಿ, ಎರಿಸ್ವಾಮಿ ಎತ್ತಿನಬೂದಿಹಾಳು ಮಠ, ರೇಣುಕಾ ಪ್ರಸಾದ್, ವಾಮದೇವಯ್ಯ, ಕೆ.ಎಂ.ಕೊಟ್ರೇಶ್, ಎಂ.ಕುಮಾರಸ್ವಾಮಿ, ಎಚ್.ಎಂ.ಕಿರಣ್ ಕುಮಾರ್, ಶಶಿಧರ್, ಗುರುಬಸವರಾಜ್ ಸುದ್ದಿಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>