<p><strong>ಸಿರುಗುಪ್ಪ:</strong> ಸಂಘದ ಕಾರ್ಯವೈಖರಿಯನ್ನು ಹೆಚ್ಚಿಸಲು ಸದಸ್ಯತ್ವ ನೋಂದಣಿ ಅಭಿಯಾನವು ಸಹಾಯಕವಾಗುತ್ತದೆ ಎಂದು ವೀರಶೈವ ತರುಣ ಸಂಘದ ತಾಲ್ಲೂಕು ಅಧ್ಯಕ್ಷ ಸುಳುವಾಯಿ ಮಲ್ಲಿಕಾರ್ಜುನ ಹೇಳಿದರು.</p>.<p>ನಗರದ ಆದೋನಿ ರಸ್ತೆಯಲ್ಲಿರುವ ವೀರಶೈವ ತರುಣ ಸಂಘದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಅಜೀವ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಹೊಸ ಸದಸ್ಯರಿಂದ ಬರುವ ಸದಸ್ಯತ್ವ ಶುಲ್ಕದಿಂದ ಸಂಘದ ದೈನಂದಿನ ಚಟುವಟಿಕೆಗಳನ್ನು ನಡೆಸಲು ಹಾಗೂ ಸಮುದಾಯ ಅಭಿವೃದ್ದಿ ಕೆಲಸಗಳನ್ನು ಮಾಡುವ ಉದ್ದೇಶದಿಂದ ನಗರದಲ್ಲಿರುವ ನಮ್ಮ ಸಮುದಾಯದ ಮನೆಗಳಿಗೆ ತೆರಳಿ, ಅಜೀವ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ ಸದಸ್ಯತ್ವ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದರು.</p>.<p>ವೀರಶೈವ ತರುಣ ಸಂಘದ ಪ್ರಧಾನ ಕಾರ್ಯದರ್ಶಿ ಲಿಂಗನಗೌಡ, ಉಪಾಧ್ಯಕ್ಷರಾದ ಎಚ್.ಮಲ್ಲನಗೌಡ, ಎನ್.ಸುರೇಶಗೌಡ, ಸಹ ಕಾರ್ಯದರ್ಶಿ ಚನ್ನ ಮಲ್ಲಿಕಾರ್ಜುನ, ಸಂಘಟನಾ ಕಾರ್ಯದರ್ಶಿ ಸಿ.ಚೇತನ್ ಕುಮಾರ್, ಖಜಾಂಚಿ ಕೆ.ಎಮ್.ವಿರುಪಾಕ್ಷಯ್ಯ ಹಾಗೂ ಸದಸ್ಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ:</strong> ಸಂಘದ ಕಾರ್ಯವೈಖರಿಯನ್ನು ಹೆಚ್ಚಿಸಲು ಸದಸ್ಯತ್ವ ನೋಂದಣಿ ಅಭಿಯಾನವು ಸಹಾಯಕವಾಗುತ್ತದೆ ಎಂದು ವೀರಶೈವ ತರುಣ ಸಂಘದ ತಾಲ್ಲೂಕು ಅಧ್ಯಕ್ಷ ಸುಳುವಾಯಿ ಮಲ್ಲಿಕಾರ್ಜುನ ಹೇಳಿದರು.</p>.<p>ನಗರದ ಆದೋನಿ ರಸ್ತೆಯಲ್ಲಿರುವ ವೀರಶೈವ ತರುಣ ಸಂಘದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಅಜೀವ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಹೊಸ ಸದಸ್ಯರಿಂದ ಬರುವ ಸದಸ್ಯತ್ವ ಶುಲ್ಕದಿಂದ ಸಂಘದ ದೈನಂದಿನ ಚಟುವಟಿಕೆಗಳನ್ನು ನಡೆಸಲು ಹಾಗೂ ಸಮುದಾಯ ಅಭಿವೃದ್ದಿ ಕೆಲಸಗಳನ್ನು ಮಾಡುವ ಉದ್ದೇಶದಿಂದ ನಗರದಲ್ಲಿರುವ ನಮ್ಮ ಸಮುದಾಯದ ಮನೆಗಳಿಗೆ ತೆರಳಿ, ಅಜೀವ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ ಸದಸ್ಯತ್ವ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದರು.</p>.<p>ವೀರಶೈವ ತರುಣ ಸಂಘದ ಪ್ರಧಾನ ಕಾರ್ಯದರ್ಶಿ ಲಿಂಗನಗೌಡ, ಉಪಾಧ್ಯಕ್ಷರಾದ ಎಚ್.ಮಲ್ಲನಗೌಡ, ಎನ್.ಸುರೇಶಗೌಡ, ಸಹ ಕಾರ್ಯದರ್ಶಿ ಚನ್ನ ಮಲ್ಲಿಕಾರ್ಜುನ, ಸಂಘಟನಾ ಕಾರ್ಯದರ್ಶಿ ಸಿ.ಚೇತನ್ ಕುಮಾರ್, ಖಜಾಂಚಿ ಕೆ.ಎಮ್.ವಿರುಪಾಕ್ಷಯ್ಯ ಹಾಗೂ ಸದಸ್ಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>