<p><strong>ಕಂಪ್ಲಿ</strong>: ಇಲ್ಲಿನ ಸತ್ಯನಾರಾಯಣಪೇಟೆಯ ವೆಂಕಟರಮಣ ದೇವಸ್ಥಾನದಲ್ಲಿ ಮಂಗಳವಾರ ವೈಕುಂಠ ಏಕಾದಶಿ ಪ್ರಯುಕ್ತ ಲಕ್ಷ್ಮೀವೆಂಕಟರಮಣಸ್ವಾಮಿ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತರು ಉತ್ತರದ್ವಾರದ ಬಾಗಿಲ ಮೂಲಕ ಪ್ರವೇಶಿಸಿ ದರ್ಶನ ಪಡೆದರು.</p>.<p>ಧಾರ್ಮಿಕ ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಶ್ರೀಮನ್ನಾರಾಯಣಾಶ್ರಮದ ಪರಮಹಂಸ ನಾರಾಯಣ ವಿದ್ಯಾಭಾರತೀ ಶ್ರೀ ಮಾತನಾಡಿ, ‘ಏಕಾದಶಿ ವ್ರತವನ್ನು ಯಾರು ಭಕ್ತಿಯಿಂದ ಆಚರಿಸುತ್ತಾರೋ ಅವರ ಎಲ್ಲ ಕಷ್ಟಗಳು ವಿಷ್ಣು ಪರಿಹಾರ ಮಾಡುತ್ತಾನೆ. ಅದರಲ್ಲೂ ವೈಕುಂಠ ಏಕಾದಶಿ ಸಮಯದಲ್ಲಿ ವಿಷ್ಣುವಿನ ನೆಲೆಯಾದ ವೈಕುಂಠದ ದ್ವಾರಗಳು ತೆರೆಯುತ್ತದೆ. ಈ ವಿಶೇಷ ದಿನದಂದು ವಿಷ್ಣು ದೇವಸ್ಥಾನಕ್ಕೆ ಹೋಗಿ ಪ್ರಾರ್ಥಿಸಿದರೆ ಮೋಕ್ಷ ಸಿಗುತ್ತದೆ ಎಂಬ ಪ್ರತೀತಿ ಇಂದಿಗೂ ಇದೆ’ ಎಂದು ವಿವರಿಸಿದರು.</p>.<p>ದೇವಸ್ಥಾನ ಸೇವಾ ಧರ್ಮದರ್ಶಿಗಳಾದ ವೈಷ್ಣವಿ ಕೃಷ್ಣಮೂರ್ತಿ, ಲಲಿತಾರಾಣಿ ಗಿರೀಶ್, ರೂಪಾ ಗುರುಪ್ರಸಾದ್, ಸವಿತಾ ಶಶಿಧರ್, ಭಗವತಿ, ಭವ್ಯ ವಿಷ್ಣುರಾಜ್, ಹರಿಪ್ರಿಯ, ಆಶ್ವತ್ಥನಾರಾಯಣ, ಜಯಂತ್ ಶ್ರೀವತ್ಸವ, ಭಕ್ತರಾದ ಮೇಸ್ತ್ರಿ ವೆಂಕಟೇಶ, ಕೆ. ಕೃಷ್ಣ ಭಾಗವಹಿಸಿದ್ದರು.</p>.<p>ಸ್ಥಳೀಯ ಡಾ. ರಾಜ್ಕುಮಾರ್ ರಸ್ತೆಯ ಗುಡ್ಡದ ತಿಮ್ಮಪ್ಪ ದೇವಸ್ಥಾನದಲ್ಲೂ ವೈಕುಂಠ ಏಕಾದಶಿ ಅಂಗವಾಗಿ ವಿಶೇಷ ಪೂಜೆ ಜರುಗಿತು. ಗುರುರಾಜಸೇವಾ ಮಂಡಳಿಯಿಂದ ಇಲ್ಲಿನ ಅಮೃತಶಿಲಾರಾಮಚಂದ್ರ ದೇವರ ಉತ್ಸವ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ</strong>: ಇಲ್ಲಿನ ಸತ್ಯನಾರಾಯಣಪೇಟೆಯ ವೆಂಕಟರಮಣ ದೇವಸ್ಥಾನದಲ್ಲಿ ಮಂಗಳವಾರ ವೈಕುಂಠ ಏಕಾದಶಿ ಪ್ರಯುಕ್ತ ಲಕ್ಷ್ಮೀವೆಂಕಟರಮಣಸ್ವಾಮಿ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತರು ಉತ್ತರದ್ವಾರದ ಬಾಗಿಲ ಮೂಲಕ ಪ್ರವೇಶಿಸಿ ದರ್ಶನ ಪಡೆದರು.</p>.<p>ಧಾರ್ಮಿಕ ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಶ್ರೀಮನ್ನಾರಾಯಣಾಶ್ರಮದ ಪರಮಹಂಸ ನಾರಾಯಣ ವಿದ್ಯಾಭಾರತೀ ಶ್ರೀ ಮಾತನಾಡಿ, ‘ಏಕಾದಶಿ ವ್ರತವನ್ನು ಯಾರು ಭಕ್ತಿಯಿಂದ ಆಚರಿಸುತ್ತಾರೋ ಅವರ ಎಲ್ಲ ಕಷ್ಟಗಳು ವಿಷ್ಣು ಪರಿಹಾರ ಮಾಡುತ್ತಾನೆ. ಅದರಲ್ಲೂ ವೈಕುಂಠ ಏಕಾದಶಿ ಸಮಯದಲ್ಲಿ ವಿಷ್ಣುವಿನ ನೆಲೆಯಾದ ವೈಕುಂಠದ ದ್ವಾರಗಳು ತೆರೆಯುತ್ತದೆ. ಈ ವಿಶೇಷ ದಿನದಂದು ವಿಷ್ಣು ದೇವಸ್ಥಾನಕ್ಕೆ ಹೋಗಿ ಪ್ರಾರ್ಥಿಸಿದರೆ ಮೋಕ್ಷ ಸಿಗುತ್ತದೆ ಎಂಬ ಪ್ರತೀತಿ ಇಂದಿಗೂ ಇದೆ’ ಎಂದು ವಿವರಿಸಿದರು.</p>.<p>ದೇವಸ್ಥಾನ ಸೇವಾ ಧರ್ಮದರ್ಶಿಗಳಾದ ವೈಷ್ಣವಿ ಕೃಷ್ಣಮೂರ್ತಿ, ಲಲಿತಾರಾಣಿ ಗಿರೀಶ್, ರೂಪಾ ಗುರುಪ್ರಸಾದ್, ಸವಿತಾ ಶಶಿಧರ್, ಭಗವತಿ, ಭವ್ಯ ವಿಷ್ಣುರಾಜ್, ಹರಿಪ್ರಿಯ, ಆಶ್ವತ್ಥನಾರಾಯಣ, ಜಯಂತ್ ಶ್ರೀವತ್ಸವ, ಭಕ್ತರಾದ ಮೇಸ್ತ್ರಿ ವೆಂಕಟೇಶ, ಕೆ. ಕೃಷ್ಣ ಭಾಗವಹಿಸಿದ್ದರು.</p>.<p>ಸ್ಥಳೀಯ ಡಾ. ರಾಜ್ಕುಮಾರ್ ರಸ್ತೆಯ ಗುಡ್ಡದ ತಿಮ್ಮಪ್ಪ ದೇವಸ್ಥಾನದಲ್ಲೂ ವೈಕುಂಠ ಏಕಾದಶಿ ಅಂಗವಾಗಿ ವಿಶೇಷ ಪೂಜೆ ಜರುಗಿತು. ಗುರುರಾಜಸೇವಾ ಮಂಡಳಿಯಿಂದ ಇಲ್ಲಿನ ಅಮೃತಶಿಲಾರಾಮಚಂದ್ರ ದೇವರ ಉತ್ಸವ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>