<p><strong>ಬಳ್ಳಾರಿ:</strong> ಜಿಲ್ಲೆಯಾದ್ಯಂತ ನಾಡಹಬ್ಬ ದಸರಾ ಹಬ್ಬದ ಸಡಗರ, ಸಂಭ್ರಮ ಮನೆಮಾಡಿತ್ತು. ಜನರು ಕುಟುಂಬ ಸಮೇತ ಕನಕ ದುರ್ಗಮ್ಮ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. </p><p>ಬುಧವಾರ ಆಯುಧಪೂಜೆ ಪ್ರಯುಕ್ತ ವಾಹನ, ಆಯುಧ ಮತ್ತು ಕೃಷಿ ಉಪಕರಣಗಳಿಗೆ ಪೂಜೆ ಸಲ್ಲಿಸಲಾಯಿತು. ಕೆಲವರು ಹೊಸ ವಾಹನಗಳನ್ನು ಕೊಂಡು ಸಂಭ್ರಮಿಸಿದರು. ಗುರುವಾರ ವಿಜಯದಶಮಿ ಅಂಗವಾಗಿ ‘ಬನ್ನಿ' ಕೊಟ್ಟು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. </p><p>ಕನಕದುರ್ಗಮ್ಮ ದೇವಸ್ಥಾನದಲ್ಲಿ ದೇವಿಗೆ ವಿಶೇಷ ಅಲಂಕಾರ, ಪೂಜೆ ಮಾಡಲಾಯಿತು. ನವರಾತ್ರಿ ಹಿನ್ನೆಲೆ ನವದುರ್ಗೆಯರ ಪ್ರತಿಷ್ಠಾಪನೆ ಮಾಡಿ ಒಂಬತ್ತು ದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p><p>ನಗರದ ಏಳುಮಕ್ಕಳತಾಯಿ ದೇವಸ್ಥಾನ, ಸಣ್ಣ ದುರ್ಗಮ್ಮ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಭಕ್ತರು ಕಿಕ್ಕಿರಿದಿದ್ದರು. ಕನಕದುರ್ಗಮ್ಮ ದೇವಸ್ಥಾನದಲ್ಲಿ ಸಂಜೆ ಪಲ್ಲಕ್ಕಿ ಉತ್ಸವ ನಡೆಯಿತು. ರಾಯಲ್ ವೃತ್ತ, ಎಸ್ಪಿ ಸರ್ಕಲ್, ಕೌಲ್ಬಜಾರ್ ಗೇಟ್, ಬಂಡಿಮೋಟ್ವರೆಗೂ ಪಲ್ಲಕ್ಕಿ ಮೆರವಣಿಗೆ ನಡೆಯಿತು.</p><p>‘ಕನಕ ದುರ್ಗಮ್ಮ ದೇವಸ್ಥಾನಕ್ಕೆ ರಾಜ್ಯದಿಂದಷ್ಟೇ ಅಲ್ಲದೆ, ಹೊರರಾಜ್ಯಗಳಿಂದಲೂ ಕಳೆದ 10 ದಿನಗಳಲ್ಲಿ ಐದು ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ’ ಎಂದು ದೇವಸ್ಥಾನದ ಕಾರ್ಯ ನಿರ್ವಾಹಕ ಹನುಮಂತಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಜಿಲ್ಲೆಯಾದ್ಯಂತ ನಾಡಹಬ್ಬ ದಸರಾ ಹಬ್ಬದ ಸಡಗರ, ಸಂಭ್ರಮ ಮನೆಮಾಡಿತ್ತು. ಜನರು ಕುಟುಂಬ ಸಮೇತ ಕನಕ ದುರ್ಗಮ್ಮ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. </p><p>ಬುಧವಾರ ಆಯುಧಪೂಜೆ ಪ್ರಯುಕ್ತ ವಾಹನ, ಆಯುಧ ಮತ್ತು ಕೃಷಿ ಉಪಕರಣಗಳಿಗೆ ಪೂಜೆ ಸಲ್ಲಿಸಲಾಯಿತು. ಕೆಲವರು ಹೊಸ ವಾಹನಗಳನ್ನು ಕೊಂಡು ಸಂಭ್ರಮಿಸಿದರು. ಗುರುವಾರ ವಿಜಯದಶಮಿ ಅಂಗವಾಗಿ ‘ಬನ್ನಿ' ಕೊಟ್ಟು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. </p><p>ಕನಕದುರ್ಗಮ್ಮ ದೇವಸ್ಥಾನದಲ್ಲಿ ದೇವಿಗೆ ವಿಶೇಷ ಅಲಂಕಾರ, ಪೂಜೆ ಮಾಡಲಾಯಿತು. ನವರಾತ್ರಿ ಹಿನ್ನೆಲೆ ನವದುರ್ಗೆಯರ ಪ್ರತಿಷ್ಠಾಪನೆ ಮಾಡಿ ಒಂಬತ್ತು ದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p><p>ನಗರದ ಏಳುಮಕ್ಕಳತಾಯಿ ದೇವಸ್ಥಾನ, ಸಣ್ಣ ದುರ್ಗಮ್ಮ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಭಕ್ತರು ಕಿಕ್ಕಿರಿದಿದ್ದರು. ಕನಕದುರ್ಗಮ್ಮ ದೇವಸ್ಥಾನದಲ್ಲಿ ಸಂಜೆ ಪಲ್ಲಕ್ಕಿ ಉತ್ಸವ ನಡೆಯಿತು. ರಾಯಲ್ ವೃತ್ತ, ಎಸ್ಪಿ ಸರ್ಕಲ್, ಕೌಲ್ಬಜಾರ್ ಗೇಟ್, ಬಂಡಿಮೋಟ್ವರೆಗೂ ಪಲ್ಲಕ್ಕಿ ಮೆರವಣಿಗೆ ನಡೆಯಿತು.</p><p>‘ಕನಕ ದುರ್ಗಮ್ಮ ದೇವಸ್ಥಾನಕ್ಕೆ ರಾಜ್ಯದಿಂದಷ್ಟೇ ಅಲ್ಲದೆ, ಹೊರರಾಜ್ಯಗಳಿಂದಲೂ ಕಳೆದ 10 ದಿನಗಳಲ್ಲಿ ಐದು ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ’ ಎಂದು ದೇವಸ್ಥಾನದ ಕಾರ್ಯ ನಿರ್ವಾಹಕ ಹನುಮಂತಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>