<p><strong>ಹೊಸಪೇಟೆ(ವಿಜಯನಗರ):</strong> ಜಿಲ್ಲೆಯಲ್ಲಿ ಮಾದಕ ವಸ್ತುಗಳ ಹಾವಳಿಯನ್ನು ಸಂಪೂರ್ಣವಾಗಿ ತಡೆಗಟ್ಟಲು ಪೊಲೀಸ್, ಅಬಕಾರಿ ಮತ್ತು ಶಿಕ್ಷಣ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿ ಜಿಲ್ಲಾ ಮಟ್ಟದ ನಾರ್ಕೋಟಿಕ್ಸ್ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ತಂಬಾಕು ಸೇವನೆಯಿಂದ ದೈಹಿಕವಾಗಿ ಮಾನಸಿಕವಾಗಿ ಸಾಕಷ್ಟು ದುಷ್ಪರಿಣಾಮ ಬೀರಲಿದೆ. ಇದರಿಂದ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಸಂಕಷ್ಟಕ್ಕೆ ಸಿಲುಕಿ ಕುಟುಂಬ ಬೀದಿಗೆ ಬರಲಿದೆ. ಈ ನಿಟ್ಟಿನಲ್ಲಿ ಮದ್ಯ ಮಾದಕ ವಸ್ತುಗಳಿಂದ ದೂರವಿದ್ದು, ಮೌಲ್ಯಯುತವಾದ ಜೀವನ ಕಟ್ಟಿಕೊಳ್ಳುವಂತೆ ಸಲಹೆ ನೀಡಿದರು.</p>.<p>ಶಾಲಾ ಮತ್ತು ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಅಥವಾ ಮಾದಕ ಪದಾರ್ಥಗಳ ಮಾರಾಟ ನಡೆಯದಂತೆ ನೋಡಿಕೊಳ್ಳಬೇಕು. ಹಾಗೂ ಸೂಚನಾ ಫಲಕ ಅಳವಡಿಸಬೇಕು. ಮತ್ತು ವಿದ್ಯಾರ್ಥಿಗಳಿಗೆ ದುಷ್ಪರಿಣಾಮಗಳ ಬಗ್ಗೆ ಕಾರ್ಯಾಗಾರ ಆಯೋಜಿಸಿ ಜಾಗೃತಿ ಮೂಡಿಸಲು ತಿಳಿಸಿದರು.</p>.<p>ಜಿಲ್ಲೆಯಲ್ಲಿ ಔಷಧಿ ಅಂಗಡಿಗಳ ತಪಾಸಣೆ ನಡೆಸಬೇಕು. ಯಾವುದೇ ರೀತಿಯ ಕಾನೂನು ಬಾಹಿರವಾಗಿ ಅಕ್ರಮವಾಗಿ ಮಾದಕ ವಸ್ತುಗಳ ಮಾರಾಟ ಮಾಡುವುದು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಲು ಸೂಚಿಸಿದರು. ಮಾದಕ ಮುಕ್ತ ಸಮಾಜ ನಿರ್ಮಾಣ ಒಂದು ಇಲಾಖೆಯ ಜವಾಬ್ದಾರಿಯಲ್ಲ, ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕೆಂದರು.</p>.<p>ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್, ಅಬಕಾರಿ ಉಪ ಆಯುಕ್ತ ಮಾದೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ(ವಿಜಯನಗರ):</strong> ಜಿಲ್ಲೆಯಲ್ಲಿ ಮಾದಕ ವಸ್ತುಗಳ ಹಾವಳಿಯನ್ನು ಸಂಪೂರ್ಣವಾಗಿ ತಡೆಗಟ್ಟಲು ಪೊಲೀಸ್, ಅಬಕಾರಿ ಮತ್ತು ಶಿಕ್ಷಣ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿ ಜಿಲ್ಲಾ ಮಟ್ಟದ ನಾರ್ಕೋಟಿಕ್ಸ್ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ತಂಬಾಕು ಸೇವನೆಯಿಂದ ದೈಹಿಕವಾಗಿ ಮಾನಸಿಕವಾಗಿ ಸಾಕಷ್ಟು ದುಷ್ಪರಿಣಾಮ ಬೀರಲಿದೆ. ಇದರಿಂದ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಸಂಕಷ್ಟಕ್ಕೆ ಸಿಲುಕಿ ಕುಟುಂಬ ಬೀದಿಗೆ ಬರಲಿದೆ. ಈ ನಿಟ್ಟಿನಲ್ಲಿ ಮದ್ಯ ಮಾದಕ ವಸ್ತುಗಳಿಂದ ದೂರವಿದ್ದು, ಮೌಲ್ಯಯುತವಾದ ಜೀವನ ಕಟ್ಟಿಕೊಳ್ಳುವಂತೆ ಸಲಹೆ ನೀಡಿದರು.</p>.<p>ಶಾಲಾ ಮತ್ತು ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಅಥವಾ ಮಾದಕ ಪದಾರ್ಥಗಳ ಮಾರಾಟ ನಡೆಯದಂತೆ ನೋಡಿಕೊಳ್ಳಬೇಕು. ಹಾಗೂ ಸೂಚನಾ ಫಲಕ ಅಳವಡಿಸಬೇಕು. ಮತ್ತು ವಿದ್ಯಾರ್ಥಿಗಳಿಗೆ ದುಷ್ಪರಿಣಾಮಗಳ ಬಗ್ಗೆ ಕಾರ್ಯಾಗಾರ ಆಯೋಜಿಸಿ ಜಾಗೃತಿ ಮೂಡಿಸಲು ತಿಳಿಸಿದರು.</p>.<p>ಜಿಲ್ಲೆಯಲ್ಲಿ ಔಷಧಿ ಅಂಗಡಿಗಳ ತಪಾಸಣೆ ನಡೆಸಬೇಕು. ಯಾವುದೇ ರೀತಿಯ ಕಾನೂನು ಬಾಹಿರವಾಗಿ ಅಕ್ರಮವಾಗಿ ಮಾದಕ ವಸ್ತುಗಳ ಮಾರಾಟ ಮಾಡುವುದು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಲು ಸೂಚಿಸಿದರು. ಮಾದಕ ಮುಕ್ತ ಸಮಾಜ ನಿರ್ಮಾಣ ಒಂದು ಇಲಾಖೆಯ ಜವಾಬ್ದಾರಿಯಲ್ಲ, ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕೆಂದರು.</p>.<p>ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್, ಅಬಕಾರಿ ಉಪ ಆಯುಕ್ತ ಮಾದೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>