<p><strong>ಮರಿಯಮ್ಮನಹಳ್ಳಿ (ವಿಜಯನಗರ ಜಿಲ್ಲೆ</strong>): ಸಮೀಪದ ಜಿ. ನಾಗಲಾಪುರ ತಾಂಡಾ ಬಳಿಯ ಹೊಲವೊಂದರಲ್ಲಿ ಬೀಡುಬಿಟ್ಟಿದ್ದ ಕುರಿಮರಿಗಳ ಹಿಂಡಿನ ಹಟ್ಟಿಯ ಮೇಲೆ ಬುಧವಾರ ತಡರಾತ್ರಿ ಚಿರತೆಯೊಂದು ದಾಳಿ ನಡೆಸಿದ ಪರಿಣಾಮವಾಗಿ 36 ಕುರಿ ಮರಿಗಳು ಮೃತಪಟ್ಟಿವೆ.</p>.<p>ಕೂಡ್ಲಿಗಿ ತಾಲ್ಲೂಕಿನ ಶಿವಪುರ ಗೊಲ್ಲರಹಟ್ಟಿಯ ಗರಗಮಲ್ಲಪ್ಪ ಎಂಬುವರಿಗೆ ಸೇರಿದ ಕುರಿಮರಿಗಳು ಚಿರತೆ ದಾಳಿಗೆ ಮೃತಪಟ್ಟಿದ್ದು, ₹ 3 ಲಕ್ಷ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.</p>.<p>ಸಮೀಪದ ಬ್ಯಾಲಕುಂದಿ ಗ್ರಾಮದಲ್ಲಿ ನಡೆಯುತ್ತಿರುವ ಉಡುಸಲಮ್ಮ ಜಾತ್ರೆಗೆ ಕುರಿಹಿಂಡಿನ ಪುರುಷರು ತೆರಳಿದ್ದರು. ಆದರೆ ಹಿಂಡಿನ ಬಳಿ ಮಹಿಳೆಯರು ಇಬ್ಬರು ಮಾತ್ರ ಇದ್ದುದ್ದರಿಂದ ಚಿರತೆ ದಾಳಿಗೆ ಹೆದರಿ ಜೀವಭಯದಿಂದ ಓಡಿಹೋದರು. ಹೀಗಾಗಿ ಕುರಿಮರಿಗಳನ್ನು ರಕ್ಷಿಸಲಾಗಿಲ್ಲ ಎಂದು ಕುರಿಹಿಂಡಿನ ಮಾಲೀಕ ಗರಗಮಲ್ಲಪ್ಪ ತಿಳಿಸಿದರು.</p>.<p>ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಇಡುವಂತೆ ಗ್ರಾಮಸ್ಥರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮರಿಯಮ್ಮನಹಳ್ಳಿ (ವಿಜಯನಗರ ಜಿಲ್ಲೆ</strong>): ಸಮೀಪದ ಜಿ. ನಾಗಲಾಪುರ ತಾಂಡಾ ಬಳಿಯ ಹೊಲವೊಂದರಲ್ಲಿ ಬೀಡುಬಿಟ್ಟಿದ್ದ ಕುರಿಮರಿಗಳ ಹಿಂಡಿನ ಹಟ್ಟಿಯ ಮೇಲೆ ಬುಧವಾರ ತಡರಾತ್ರಿ ಚಿರತೆಯೊಂದು ದಾಳಿ ನಡೆಸಿದ ಪರಿಣಾಮವಾಗಿ 36 ಕುರಿ ಮರಿಗಳು ಮೃತಪಟ್ಟಿವೆ.</p>.<p>ಕೂಡ್ಲಿಗಿ ತಾಲ್ಲೂಕಿನ ಶಿವಪುರ ಗೊಲ್ಲರಹಟ್ಟಿಯ ಗರಗಮಲ್ಲಪ್ಪ ಎಂಬುವರಿಗೆ ಸೇರಿದ ಕುರಿಮರಿಗಳು ಚಿರತೆ ದಾಳಿಗೆ ಮೃತಪಟ್ಟಿದ್ದು, ₹ 3 ಲಕ್ಷ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.</p>.<p>ಸಮೀಪದ ಬ್ಯಾಲಕುಂದಿ ಗ್ರಾಮದಲ್ಲಿ ನಡೆಯುತ್ತಿರುವ ಉಡುಸಲಮ್ಮ ಜಾತ್ರೆಗೆ ಕುರಿಹಿಂಡಿನ ಪುರುಷರು ತೆರಳಿದ್ದರು. ಆದರೆ ಹಿಂಡಿನ ಬಳಿ ಮಹಿಳೆಯರು ಇಬ್ಬರು ಮಾತ್ರ ಇದ್ದುದ್ದರಿಂದ ಚಿರತೆ ದಾಳಿಗೆ ಹೆದರಿ ಜೀವಭಯದಿಂದ ಓಡಿಹೋದರು. ಹೀಗಾಗಿ ಕುರಿಮರಿಗಳನ್ನು ರಕ್ಷಿಸಲಾಗಿಲ್ಲ ಎಂದು ಕುರಿಹಿಂಡಿನ ಮಾಲೀಕ ಗರಗಮಲ್ಲಪ್ಪ ತಿಳಿಸಿದರು.</p>.<p>ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಇಡುವಂತೆ ಗ್ರಾಮಸ್ಥರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>